ಯಂತ್ರಕ್ಕೆ ಸಿಲುಕಿದ ಚೂಡಿದಾರ್ ಶಾಲ್: ಯುವತಿ ಸಾವು
Team Udayavani, Feb 13, 2023, 12:46 AM IST
ಮಂಜೇಶ್ವರ: ಹುಟ್ಟು ಹಬ್ಬದ ದಿನದಂದೇ ಚೂಡಿದಾರ್ನ ಶಾಲ್ ಗ್ರೈಂಡರ್ ಯಂತ್ರಕ್ಕೆ ಸಿಲುಕಿ ಯುವತಿ ಸಾವಿಗೀಡಾದ ಘಟನೆ ಶನಿವಾರ ಮಧ್ಯಾಹ್ನ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ.
ತೂಮಿನಾಡು ಲಕ್ಷಂವೀಡ್ ಕಾಲನಿಯ ರಂಜನ್ ಅವರ ಪತ್ನಿ ಜಯಶೀಲಾ (22) ಅವರು ಸಾವಿಗೀಡಾದವರು. ಅವರು ತೂಮಿನಾಡಿನಲ್ಲಿರುವ ಬೇಕರಿಯೊಂದರ ಕಾರ್ಮಿಕೆಯಾಗಿದ್ದು, ಬೇಕರಿ ತಿನಿಸು ತಯಾರಿಸುತ್ತಿದ್ದಾಗ ಗ್ರೈಂಡರ್ ಯಂತ್ರಕ್ಕೆ ಕುತ್ತಿಗೆಯಲ್ಲಿದ್ದ ಚೂಡಿದಾರ್ನ ಶಾಲು ಸಿಲುಕಿ ದುರ್ಘಟನೆ ನಡೆದಿದೆ.
ಶಾಲು ಕುತ್ತಿಗೆ ಬಿಗಿದು ಉಸಿರುಗಟ್ಟಿ ಗಂಭೀರ ಸ್ಥಿತಿಯಲ್ಲಿದ್ದ ಜಯಶೀಲಾ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ತಲುಪಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಶನಿವಾರ ಜಯಶೀಲಾ ಅವರ ಹುಟ್ಟು ಹಬ್ಬವಾಗಿದ್ದು, ಇದರ ನಡುವೆ ಈ ಘಟನೆ ಸಂಭವಿಸಿದೆ. ಒಂದೂವರೆ ವರ್ಷಗಳ ಹಿಂದೆ ಅವರ ವಿವಾಹವಾಗಿತ್ತು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ.
ಜಯಶೀಲಾ ಅವರು ಮಾಲಿಂಗ-ಸುನಂದಾ ದಂಪತಿ ಪುತ್ರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.