![1-mofdd](https://www.udayavani.com/wp-content/uploads/2024/07/1-mofdd-415x270.jpg)
ಉತ್ತರ ಕರ್ನಾಟಕದ ಜಗದ್ಗುರು ಪೀಠಕ್ಕೆ ಸ್ವಾಮಿ ಏಕಗಮ್ಯಾನಂದ ಜೀ
"ಸರ್ವ ಜನರ ಸ್ಪಂದನೆ ಅವಿಸ್ಮರಣೀಯ'
Team Udayavani, Feb 13, 2023, 1:15 AM IST
![ಉತ್ತರ ಕರ್ನಾಟಕದ ಜಗದ್ಗುರು ಪೀಠಕ್ಕೆ ಸ್ವಾಮಿ ಏಕಗಮ್ಯಾನಂದ ಜೀ](https://www.udayavani.com/wp-content/uploads/2023/02/aazz-620x349.jpg)
ಮಂಗಳೂರು: ಸುಮಾರು 15 ವರ್ಷಗಳ ಕಾಲ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉತ್ತರ ಕರ್ನಾಟಕದ ಪ್ರಮುಖ ಜಗದ್ಗುರು ಪೀಠದ ಮಠಾಧೀಶನಾಗಿ ಸೇವೆ ಸಲ್ಲಿಸುವ ಅವಕಾಶ ಲಭಿಸಿದೆ.
ಇಲ್ಲಿಯವರೆಗೆ ಸ್ವತ್ಛತೆ ಸಹಿತ ನಗರ ಅಭಿವೃದ್ಧಿ ಕೇಂದ್ರಿತ ವಿವಿಧ ವಿಚಾರಗಳಿಗೆ ನನಗೆ ಸಹಕಾರ ನೀಡಿದ ಸರ್ವ ಜನತೆಗೂ ಚಿರಋಣಿ ಎಂದು ಸ್ವಾಮಿ ಏಕಗಮ್ಯಾನಂದ ಜೀ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆ ಮಠಕ್ಕೆ ಹತ್ತಾರು ಶಿಕ್ಷಣ ಸಂಸ್ಥೆಗಳಿದ್ದು, 7ರಿಂದ 8 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕೃಷಿ ಪ್ರಧಾನ ಮಠವಾಗಿದ್ದು, 400 ವರ್ಷಗಳಿಗೂ ಅಧಿಕ ಇತಿಹಾಸ ಇದೆ. ಈ ಮಾಸಾಂತ್ಯದೊಳಗೆ ಆ ಮಠಕ್ಕೆ ಹೋಗುತ್ತಿದ್ದೇನೆ ಎಂದರು.
ಮಂಗಳೂರಿನ ರಾಮಕೃಷ್ಣ ಮಠದಿಂದ ವಿವಿಧ ಕಾರ್ಯ ಕ್ರಮಗಳನ್ನು ಆಯೋಜಿಸ ಲಾಗಿದೆ. 2011-14ರ ವರೆಗೆ ವಿವೇಕಾನಂದರ 125ನೇ ಜಯಂತಿ ಆಯೋಜಿಸಿ ದ್ದೆವು. 125 ಕಾರ್ಯಕ್ರಮ, 10,000 ಯುವಕರ ಜಾಥ, ಮೂರು ದಿನಗಳ ಸಮಾವೇಶ ಯಶಸ್ವಿಯಾಗಿ ಸಂಘಟಿಸಿದ ಜವಾಬ್ದಾರಿ ಸ್ಮರಣೀಯ.
ಬಳಿಕ ನಡೆದ ಸ್ವತ್ಛ ಭಾರತ ಅಭಿಯಾನ ನಮ್ಮ ಜೀವನವನ್ನೇ ಬದಲಾಯಿಸಿತು. ವರ್ಷಗಳ ಅವಧಿ ಯಲ್ಲಿ ಹತ್ತಾರು ಕೋಟಿ ಕೆಲಸ ನಡೆದಿದೆ. ಒತ್ತಾಯಪೂರ್ವಕ ದೇಣಿಗೆ ಪಡೆದುಕೊಂಡಿಲ್ಲ. ಎಲ್ಲ ಕೆಲಸಗಳನ್ನು ಮಾಡಲು ಮಂಗಳೂರಿನ ರಾಮಕೃಷ್ಣ ಮಠ ನನಗೆ ಪ್ರೋತ್ಸಾಹ, ಸಹಕಾರ ನೀಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Court-Symbol](https://www.udayavani.com/wp-content/uploads/2024/07/Court-Symbol-2-150x90.jpg)
Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
![Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್](https://www.udayavani.com/wp-content/uploads/2024/07/ROAD-AA-150x113.jpg)
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
![Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ](https://www.udayavani.com/wp-content/uploads/2024/07/adike-1-150x90.jpg)
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.