ಮೈಸೂರು-ಕುಶಾಲನಗರ ಹೆದ್ದಾರಿ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರತಾಪ್ ಸಿಂಹ ಸೂಚನೆ
Team Udayavani, Feb 13, 2023, 5:23 PM IST
ಮೈಸೂರು: ಮೈಸೂರು- ಕುಶಾಲ️ನಗರ ಚತುಷ್ಪಥ ನಿರ್ಮಾಣದ ಕಾಮಗಾರಿಗಾಗಿ ಆದಷ್ಟು ಬೇಗ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದ ಪ್ರತಾಪ ಸಿಂಹ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಹೆದ್ದಾರಿ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲ️ನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು- ಬೆಂಗಳೂರು ದಶಪಥ ಕಾಮಗಾರಿ ಪೂರ್ಣಗೊಂಡಿದ್ದು, ಮಾರ್ಚ್ ಮೊದಲ️ ಅಥವಾ ಎರಡನೇ ವಾರದಲ್ಲಿ ಉದ್ಘಾಟಿಸುವರು. ಇದೇ ವೇಳೆ ಮೈಸೂರು- ಕುಶಾಲ️ನಗರ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.
ಈ ಸಂಬಂಧ ನಿರಂತರವಾಗಿ ಸಭೆ ನಡೆಸಲಾಗಿದೆ. ಮಾ. 5 ರೊಳಗೆ ಬಾಕಿ ಕೆಲ️ಸ ಪೂರ್ಣಗೊಳಿಸುವಂತೆ ಕೋರುವ ಜೊತೆಗೆ ಸೂಚನೆಯನ್ನೂ ನೀಡುತ್ತಿದ್ದೇನೆ ಎಂದು ಸಂಸದರು ತಿಳಿಸಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ರಾಷ್ಟೀಯ ಹೆದ್ದಾರಿ ಉದ್ದಕ್ಕೂ ಇರುವ ಸಬ್ ಸ್ಟೇಷನ್ ಗಳು ಹಾಗೂ ವಿದ್ಯುತ್ ಗ್ರಿಡ್ ಗಳನ್ನು ಸ್ಧಳಾಂತರಿಸಲು ಅಗತ್ಯ ಕ್ರಮವಹಿಸುವಂತೆ ಸಂಸದರು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಅಧಿಕಾರಿಗಳು ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ಯಾವುದಾದರೂ ಸಮಸ್ಯೆಗಳಿದ್ದರೆ ಅದನ್ನು ಮುಕ್ತವಾಗಿ ಹೇಳಿಕೊಳ್ಳಬೇಕು. ಅದನ್ನು ನಾವು ಪರಿಹರಿಸುತ್ತೇವೆ. ಕಾಲಮಿತಿಯಲ್ಲಿ ಯೋಜನೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಂ, ಮೈಸೂರು-ಬೆಂಗಳೂರು ಹೆದ್ದಾರಿಯ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್, ಡಿಸಿಎಫ್ ಬಸವರಾಜ್ ,ಭೂಸ್ವಾಧೀನಾಧಿಕಾರಿ ಹರ್ಷವರ್ಧನ್, ಹುಣಸೂರು ತಹಶೀಲ್ದಾರರು ಹಾಗೂ ಭೂ ದಾಖಲೆ ಅಧಿಕಾರಿಗಳು ಪಿರಿಯಾಪಟ್ಟಣ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.