ಮಕ್ಕಳಿಗೆ ಮೊಟ್ಟೆ ವಿತರಿಸುವ ಧೈರ್ಯ ಮಾಡಿದ್ದೇ ನಮ್ಮ ಸರಕಾರ: ಸಚಿವ ಬಿ.ಸಿ. ನಾಗೇಶ್‌


Team Udayavani, Feb 14, 2023, 6:30 AM IST

ಮಕ್ಕಳಿಗೆ ಮೊಟ್ಟೆ ವಿತರಿಸುವ ಧೈರ್ಯ ಮಾಡಿದ್ದೇ ನಮ್ಮ ಸರಕಾರ: ಸಚಿವ ಬಿ.ಸಿ. ನಾಗೇಶ್‌

ಬೆಂಗಳೂರು: ಅಪೌಷ್ಟಿಕತೆ ನಿವಾರಣೆ ನಮ್ಮ ಸರಕಾರದ ಆದ್ಯತೆಯಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಕೋಳಿ ಮೊಟ್ಟೆ ಕೊಡುವ ಧೈರ್ಯ ಮಾಡಿದ್ದೇ ನಮ್ಮ ಸರಕಾರ, ಯಾವುದೇ ವಿರೋಧ ಬಂದರೂ ಅದನ್ನು ಮುಂದುವರಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ಮೊಟ್ಟೆ ದರ ಹೆಚ್ಚಾಗಿದೆ ಎಂಬ ಸಬೂಬು ಕೊಟ್ಟು ಕಳೆದ ಅಕ್ಟೋಬರ್‌, ನವೆಂಬರ್‌ ಮತ್ತು ಡಿಸೆಂಬರ್‌ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿಲ್ಲ. ಈ ಹಿಂದೆ ಗುಣಮಟ್ಟದ ಮೊಟ್ಟೆಯೂ ಕೊಟ್ಟಿಲ್ಲ ಎಂದು ಆರೋಪಿಸಿದರು. ಇದಕ್ಕೆ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಸಹ ಧ್ವನಿಗೂಡಿಸಿ ಅನೇಕ ಶಾಲೆಗಳಲ್ಲಿ ಮೊಟ್ಟೆ ಕೊಡುವುದನ್ನು ನಿರಾಕರಿಸಲಾಗುತ್ತಿದೆ ಎಂದರು.

ಇದಕ್ಕೆ ಉತ್ತರಿಸಿದ ಸಚಿವರು, ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಬಗ್ಗೆ 2007ಕ್ಕಿಂತ ಮುಂಚೆ ಚರ್ಚೆ ಆರಂಭವಾಯಿತು. ಕೊನೆಗೆ ಮೊಟ್ಟೆ ಕೊಡಬೇಕು ಎಂದು 2007ರಲ್ಲಿ ತೀರ್ಮಾನವಾಯಿತು. ಆದರೆ, ಆಗಿನ ಸರಕಾರಗಳಿಗೆ ಯಾವ ಪಕ್ಷದ ಅಥವಾ ಯಾರ ಒತ್ತಡ ಇತ್ತೋ ಗೊತ್ತಿಲ್ಲ. ಮೊಟ್ಟೆ ವಿತರಣೆ ಮಾಡಲು ನಾವು ಧೈರ್ಯ ಮಾಡಿದ್ದೇವೆ. ಮೊದಲು ಅಪೌಷ್ಟಿಕತೆ ಹೆಚ್ಚಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಯಿತು. ಇದರ ಬಗ್ಗೆ ಗ್ರಾಮೀಣಾಭಿವೃದ್ಧಿ ವಿವಿ ವತಿಯಿಂದ ಅಧ್ಯಯನ ನಡೆಸಲಾಯಿತು. ಮೊಟ್ಟೆ ವಿತರಣೆ ಪೌಷ್ಠಿಕತೆ ಹೆಚ್ಚಳಕ್ಕೆ ನೆರವು ಆಗಿದೆ ಎಂದು ವಿವಿ ವರದಿ ಕೊಟ್ಟಿತು. ಅದನ್ನು ಆಧರಿಸಿ ವಾರದಲ್ಲಿ 2 ದಿನದಂತೆ ವರ್ಷದಲ್ಲಿ 46 ದಿನ ಬಿಸಿಯೂಟದ ಜತೆಗೆ 1 ರಿಂದ 8ನೇ ತರಗತಿ ಮಕ್ಕಳಿಗೆ ಕೋಳಿ ಮೊಟ್ಟೆ ವಿತರಣೆಯನ್ನು ಉಳಿದ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಯಾವುದೇ ವಿರೋಧ ಬಂದರೂ ಮೊಟ್ಟೆ ವಿತರಣೆ ಮುಂದುವರಿಸುತ್ತೇವೆ. ಮೊಟ್ಟೆ ಬೇಡ ಅಂದವರಿಗೆ ಬಲವಂತ ಮಾಡುವುದಿಲ್ಲ. ಮೊಟ್ಟೆ ನಿರಾಕರಿಸಲಾಗುತ್ತಿದೆ ಎಂಬ ಆರೋಪ ಸರಿಯಲ್ಲ. ಮೊಟ್ಟ ಬೇಡ ಅಂದವರಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ಪೂರೈಸಲು 2021-22ರಿಂದ ಕ್ರಮ ಕೈಗೊಳ್ಳಲಾಗಿದೆ. 2022-23ನೇ ಸಾಲಿನಿಂದ ಎಲ್ಲ ಜಿಲ್ಲೆಗಳಿಗೆ ಈ ಕಾರ್ಯಕ್ರಮ ವಿಸ್ತರಿಸಲಾಗಿದೆ ಎಂದರು.

“ಸಾತ್ವಿಕ ಆಹಾರ’: ಚರ್ಚೆ ಆಗಿಲ್ಲ
ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಕುರಿತು ಇತ್ತೀಚೆಗೆ ಕರೆಯಲಾಗಿದ್ದ ದುಂಡು ಮೇಜಿನ ಸಭೆಯಲ್ಲಿ ಶಿಕ್ಷಣ ತಜ್ಞರಿಂದ, ಕೆಲವು ಮಠಾಧೀಶರಿಂದ ಮತ್ತು ಸಂಘ-ಸಂಸ್ಥೆಗಳಿಗೆ ಮೊಟ್ಟೆಯ ಬದಲು ಸಸ್ಯಹಾರಿ/ಸಾತ್ವಿಕ ಆಹಾರ ನೀಡುವಂತೆ ಮೌಖೀಕ ಮತ್ತು ಲಿಖೀತವಾಗಿ ಸಲಹೆಗಳು ಬಂದಿವೆ. ಆದರೆ, ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ವರದಿಯ ಪ್ರಕಾರ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ರೂಪದಲ್ಲಿ ಮೊಟ್ಟೆ ಅಥವಾ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಮತ್ತು ಚಿಕ್ಕಿ ಪೂರೈಸುವುದನ್ನು ಮುಂದುವರಿಸಲಾಗುತ್ತಿದೆ ಎಂದು ಸಚಿವ ಬಿ.ಸಿ. ನಾಗೇಶ್‌ ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.