ಠೇವಣಿ ಹಣ ಶಿಕ್ಷಕರೇ ಹೊಂದಿಸಿದ್ದರು!


Team Udayavani, Feb 14, 2023, 5:12 AM IST

ಠೇವಣಿ ಹಣ ಶಿಕ್ಷಕರೇ ಹೊಂದಿಸಿದ್ದರು!

ಅದು 1980ರ ದಶಕದ ಆರಂಭದ ದಿನಗಳು. ದೇಶಾದ್ಯಂತ ಇಂದಿರಾ ಗಾಂಧಿಯವರ ವರ್ಚಸ್ಸು, ಪ್ರಭಾವ ಗಾಢವಾಗಿದ್ದ ಸಂದರ್ಭ. ಯಾವುದೇ ಚುನಾವಣೆ ಇರಲಿ ಇಂದಿರಾ ಕಾಂಗ್ರೆಸ್‌ನದೇ ಅಧಿಪತ್ಯ. ಕಾಂಗ್ರೆಸ್‌ ಚಿಹ್ನೆಯಡಿ ಯಾರೇ ಸ್ಪರ್ಧಿ ಸಿದರೂ ಸುಲಭವಾಗಿ ಗೆಲ್ಲುತ್ತಾರೆ ಎಂಬ ಮಾತು ಜನಮಾನಸದಲ್ಲೂ ಹರಿದಾಡುತ್ತಿದ್ದ ಸಮಯ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಕರು, ಕಾರ್ಮಿಕರು, ಶ್ರಮಿಕ ವರ್ಗ ಸಹಿತ ಕಾರ್ಮಿಕ ಮುಖಂಡರ ಬೆಂಬಲದೊಂದಿಗೆ ಜನತಾ ಪಕ್ಷದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದು, ಆ ಕಾಲಕ್ಕೆ ವಿಶೇಷ ಸಾಧನೆಯಾಗಿತ್ತು ಎನ್ನುತ್ತಾರೆ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ.

ಕಾಂಗ್ರೆಸ್‌ ಪಕ್ಷದಿಂದ ಬೈಂದೂರು ಕ್ಷೇತ್ರದಲ್ಲಿ ಎ.ಜಿ. ಕೊಡ್ಗಿ, ಅನಂತರ‌ದಲ್ಲಿ ಜಿ.ಎಸ್‌. ಆಚಾರ್‌ ಅವರು ಎರಡು ಬಾರಿ ಶಾಸಕರಾಗಿದ್ದರು. ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ 1983ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ, ಕಾಂಗ್ರೆಸ್‌ನ ಪ್ರಭಾವಿ ನಾಯಕ ಜಿ.ಎಸ್‌. ಆಚಾರ್‌ ಅವರ ವಿರುದ್ಧ ಕೇವಲ 24 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆಗೆಲ್ಲ ಕಾಂಗ್ರೆಸ್‌ಗೆ ಚುನಾವಣ ಪ್ರಚಾರಕ್ಕೆ ಇಂದಿರಾ ಗಾಂಧಿಯವರ ಹೆಸರು ಸಾಕಾಗುತ್ತಿತ್ತು ಹಾಗೂ ಅವರ ಪ್ರಭಾವವೂ ಅಷ್ಟಿತ್ತು. ಇಂತಹ ಸಂದರ್ಭದಲ್ಲಿ ಜನತಾ ಪಕ್ಷದಿಂದ ಕಾಂಗ್ರೆಸ್‌ ವಿರುದ್ಧ ಸ್ಪರ್ಧಿಸಲು ಅವಕಾಶ ಸಿಕ್ಕಿತು. ಕಮ್ಯೂನಿಸ್ಟ್‌ ಪಕ್ಷಗಳ ಮುಖಂಡರು ಎಲ್ಲ ರೀತಿಯಲ್ಲೂ ಸಹಕಾರ ನೀಡಿದ್ದರು. ಕಾರ್ಮಿಕರು, ಶ್ರಮಿಕ ವರ್ಗವನ್ನು ಮುಖ್ಯವಾಗಿಟ್ಟುಕೊಂಡು ಚುನಾವಣ ಪ್ರಚಾರ ನಡೆಸಿದ್ದೆವು. ಇದುವೇ ನನ್ನನ್ನು ಗೆಲುವಿನ ದಡ ಸೇರಿಸಿತ್ತು.

ಶಿಕ್ಷಕರೇ ಹಣ ಹೊಂದಿಸಿದ್ದರು: ಚುನಾವಣೆ ಸ್ಪರ್ಧಿಸಲು ಎಲ್ಲ ಸಿದ್ಧತೆಯೂ ಆಗಿತ್ತು. ಇಡೀ ಕ್ಷೇತ್ರದ ಶಿಕ್ಷಕರು ಬೆಂಬಲಕ್ಕೆ ನಿಂತಿದ್ದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಇಡಬೇಕಾದ ಠೇವಣಿ ಹಣವನ್ನು ಶಿಕ್ಷಕರೇ ಹೊಂದಿಸಿ, ತಂದಿದ್ದರು. ಕಾಂಗ್ರೆಸ್‌ ವಿರುದ್ಧ ನಿಂತರೆ ಠೇವಣಿ ಕಳೆದುಕೊಳ್ಳುವ ಸನ್ನಿವೇಶದ ನಡುವೆ ಇಡೀ ಕ್ಷೇತ್ರದ ಜನರ ಸಹಕಾರದೊಂದಿಗೆ ಜಯ ಸಾಧಿಸಿ ವಿಧಾನಸೌಧ ಪ್ರವೇಶಿಸಲು ಸಾಧ್ಯವಾಗಿತ್ತು.

ನಾಯಕರ ಸಂಪರ್ಕ: ಗ್ರಾಮ ಪಂಚಾಯತ್‌ ಸದಸ್ಯನಾಗಿ, ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ ಅನುಭವ ಇದ್ದುದರಿಂದ ಕ್ಷೇತ್ರದಲ್ಲಿನ ಕುಡಿಯುವ ನೀರಿನ ಅಭಾವ ಸಹಿತ ಸ್ಥಳೀಯ ಸಮಸ್ಯೆಗಳನ್ನು ಹೊತ್ತು ಆಗಾಗ್ಗೆ ವಿಧಾನಸೌಧಕ್ಕೆ ಹೋಗುತ್ತಿದ್ದೆ. ಹಾಗೆಯೇ ಕೊಲ್ಲೂರು ದೇವಸ್ಥಾನದ ಟ್ರಸ್ಟಿಯಾಗಿದ್ದರಿಂದ ಕೊಲ್ಲೂ ರಿಗೆ ಬರುವ ಪ್ರಮುಖ ನಾಯಕರ ಪರಿಚ ¿ ುವೂ ಸುಲಭದಲ್ಲಿ ಆಗುತ್ತಿತ್ತು. ಹೀಗೆ ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಎಸ್‌.ಆರ್‌. ಬೊಮ್ಮಾಯಿ, ವೀರೇಂದ್ರ ಪಾಟೀಲ್‌ ಸಹಿತವಾಗಿ ಹಲವು ನಾಯಕರ ಪರಿಚಯವಾಗಿ ಬಾಂಧವ್ಯವೂ ವೃದ್ಧಿಯಾಯಿತು. ಇದು ಮುಂದೆ ಚುನಾವಣೆ ಯಲ್ಲಿ ಸ್ಪರ್ಧಿಸಲು ಸಹಕಾರಿಯಾಯಿತು.

ಸುಷ್ಮಾ ಸ್ವರಾಜ್‌ ಬಂದಿದ್ದರು: ಆಗೆಲ್ಲ ಚುನಾವಣೆ ಪ್ರಚಾರ ಎಂದರೆ ಮನೆ ಮನೆ ಭೇಟಿ, ಮೈಕ್‌ಗಳಲ್ಲಿ ಅನೌನ್ಸ್‌ಮೆಂಟ್‌, ಕರಪತ್ರ ಹಂಚುವುದು ಮತ್ತು ಮೈದಾನಗಳಲ್ಲಿ ಬಹಿರಂಗ ಸಭೆ ಇಷ್ಟಕ್ಕೆ ಸೀಮಿತವಾಗಿತ್ತು. ಕಾರ್ಯಕರ್ತರು ಕೂಡ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟದ ಹೊರತಾಗಿ ಬೇರೇನೂ ನಿರೀಕ್ಷೆ ಮಾಡುತ್ತಿರಲಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ನಾಯಕರಾಗಿದ್ದ ಸುಷ್ಮಾ ಸ್ವರಾಜ್‌, ಮಧು ದಂಡವತೆ ಮೊದಲಾದವರು ಬಂದಿದ್ದರು.

ರಾಜಕೀಯ ದ್ವೇಷ ಇರಲೇ ಇಲ್ಲ: ಚುನಾವಣೆ ಸಂದರ್ಭ ಅಥವಾ ಚುನಾವಣೆ ಅನಂತರ‌ದಲ್ಲಿ ರಾಜಕೀಯ ದ್ವೇಷ ಎನ್ನುವುದು ಇರಲಿಲ್ಲ. ಪಕ್ಷ-ಪಕ್ಷಗಳ ನಡುವೆ ಅಥವಾ ಕಾರ್ಯಕರ್ತರ ನಡುವೆ ವೈರತ್ವವೂ ಇರಲಿಲ್ಲ. ಈಗ ಕೌಟುಂಬಿಕ ಸಮಸ್ಯೆಯೂ ರಾಜಕೀಯ ನಾಯಕರ ಅಸ್ತ್ರವಾಗುವ ಮಟ್ಟಿಗೆ ವ್ಯವಸ್ಥೆ ಹಳಸಿಹೋಗಿದೆ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಭಿನ್ನ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದರೂ ಚುನಾವಣೆ ಮುಗಿದ ಕೂಡಲೇ ಒಂದಾಗುತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಖರ್ಚು ಕೂಡ ತೀರಾ ಕಡಿಮೆಯಾಗಿತ್ತು. ಈಗ ಅದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುತ್ತಾರೆ ಅಪ್ಪಣ್ಣ ಹೆಗ್ಡೆ.

83ರ ಇಳಿ ವಯಸ್ಸಿನಲ್ಲೂ ಅಪ್ಪಣ್ಣ ಹೆಗ್ಡೆ ಅವರು ಧಾರ್ಮಿಕ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

– ಬಸ್ರೂರು ಅಪ್ಪಣ್ಣ ಹೆಗ್ಡೆ, ಮಾಜಿ ಶಾಸಕರು

ಟಾಪ್ ನ್ಯೂಸ್

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಾವಿದರು ಹಾದಿ ತಪ್ಪಲು ಪ್ರೇಕ್ಷಕ ವರ್ಗವೂ ಕಾರಣ: ಕೆ.ಎಚ್‌.ದಾಸಪ್ಪ ರೈ

ಕಲಾವಿದರು ಹಾದಿ ತಪ್ಪಲು ಪ್ರೇಕ್ಷಕ ವರ್ಗವೂ ಕಾರಣ: ಕೆ.ಎಚ್‌.ದಾಸಪ್ಪ ರೈ

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.