ಮಾಕಳಿ ಬೆಟ್ಟದ ತಪ್ಪಲಿಗೆ ಬೆಂಕಿ; ಕಿಡಿಗೇಡಿಗಳ ಕೃತ್ಯವಾ?


Team Udayavani, Feb 14, 2023, 12:42 PM IST

tdy-10

ದೊಡ್ಡಬಳ್ಳಾಪುರ: ಬೇಸಿಗೆ ಕಾಲ ಬಂತೆಂದರೆ ಬೆಂಕಿ ಬಿದ್ದು ಬೆಟ್ಟ-ಗುಡ್ಡಗಳು ಸುಟ್ಟುಹೋಗುವುದು ಸಾಮಾನ್ಯವಾದರೂ, ಬೆಟ್ಟದ ತಪ್ಪಲಿನಲ್ಲಿ ಕೃಷಿ ಭೂಮಿ ಹಸನು ಮಾಡಿಕೊಳ್ಳಲು ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚುವ ಪರಿಪಾಠ ಬೆಳೆಸಿಕೊಂಡಿದ್ದಾರೆ ಎಂದು ಜಿಲ್ಲೆಯ ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಾಕಳಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಇನ್ನು ಇಲ್ಲಿನ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸುವ ಪ್ರಮಾಣ ತೀರಾ ಕಡಿಮೆ. ಆದರೂ, ಬೇಸಿಗೆಯಲ್ಲಿ ತಾಲೂಕಿನ ಅರಣ್ಯ ಪ್ರದೇಶಗಳಿಗೆ ಪ್ರತಿವರ್ಷ ಬೆಂಕಿ ಬೀಳುವುದು ಹೆಚ್ಚು ಕಂಡುಬರುತ್ತಿದೆ.

ಕೆಲಸ ಮಾಡುತ್ತಿಲ್ಲ: ಮಾಕಳಿ ಬೆಟ್ಟದಲ್ಲಿ ಬೆಳೆದು ವಿವಿಧ ಜಾತಿಯ ಗಿಡಗಳು, ಪ್ರಾಣಿ, ಪಕ್ಷಿಗಳು ಬೆಂಕಿ ಕೆನ್ನಾಲಿಗೆಗೆ ಬಲಿಯಾಗಿವೆ. ಬೆಟ್ಟದ ತಪ್ಪಲಿನಲ್ಲಿ ಕೃಷಿ ಭೂಮಿ ಹಸನು ಮಾಡಿಕೊಳ್ಳುವ ಉದ್ದೇಶದಿಂದಲೇ ಬೆಟ್ಟದ ತಪ್ಪಲಿನಲ್ಲಿ ಬೆಂಕಿ ಹಚ್ಚಲಾಗುತ್ತಿದೆ ಎಂಬುದು ಪರಿಸರ ಪ್ರೇಮಿಗಳ ಮಾತಾಗಿದೆ. ಇನ್ನು ಬೆಂಕಿ ಕಾಣಿ ಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಬೆಂಕಿ ನಂದಿಸುವ ಕೆಲಸ ಮಾಡುತ್ತಿಲ್ಲ ಎಂದು ದೂರುತ್ತಿದ್ದಾರೆ.

ನಿರ್ಲಕ್ಷ್ಯ: ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಅರಣ್ಯ ಭಾಗದಲ್ಲಿ ಬೆಂಕಿ ಬಿದ್ದರೆ ನಂದಿಸುವ ಬಗ್ಗೆ ಎಚ್ಚರ ವಹಿಸಲು ತಾತ್ಕಾಲಿಕ ಕಂಟೊ›àಲ್‌ ರೂಂ ಸ್ಥಾಪನೆ ಮಾಡಲು ಜನ ಆಗ್ರಹಿಸುತ್ತಿದ್ದರೂ ಅರಣ್ಯ ಇಲಾಖೆ ಇನ್ನೂ ಸಿದ್ಧತೆ ನಡೆಸದಿರುವುದು ನಿರ್ಲಕ್ಷ್ಯಕ್ಕಿಡಿದ ಕನ್ನಡಿಯಾಗಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 14 ಮೀಸಲು ಅರಣ್ಯ ಪ್ರದೇಶ ಸೇರಿ 20, 296 ಎಕರೆ ಅರಣ್ಯವಿದೆ. ಮಾಕಳಿ ದುರ್ಗ, ಉಜ್ಜನಿ, ಮುದ್ದೇನಹಳ್ಳಿ, ಘಾಟಿ ಸುಬ್ರಹ್ಮಣ್ಯ, ಹುಲುಕುಡಿ, ದೇವರಬೆಟ್ಟ, ಗಂಡ್ರ ಗೋಳಿಪುರದ ಅರಣ್ಯ, ಕಲ್ಲುಕೋಟೆ ಸೇರಿದಂತೆ ಸುಮಾರು 5,000 ಎಕರೆಗಿಂತಲೂ ಹೆಚ್ಚು ಅರಣ್ಯ ಪ್ರದೇಶ ಹಲವು ಬಾರಿ ನಡೆದ ಬೆಂಕಿ ಪ್ರಕರಣಗಳಲ್ಲಿ ಸಿಲುಕಿ ಸುಟ್ಟು ಕರಕಲಾಗಿವೆ.

ಬೆಂಕಿ ನಂದಿಸಲು ಕೈಗೊಳ್ಳಬೇಕಿರುವ ಕ್ರಮಗಳು :

  • ಅರಣ್ಯದ ಮಧ್ಯೆಯೇ ಫೈಯರ್‌ ಕಂಟ್ರೋಲಿಂಗ್‌ ರೂಮ್‌ಗಳನ್ನು ನಿರ್ಮಿಸಿ ಇಲಾಖೆ ಸಿಬ್ಬಂದಿ ಮುಂಜಾಗೃತವಾಗಿ ಅರಣ್ಯದಲ್ಲಿ ತಂಗಿದರೆ, ಬೆಂಕಿ ಕಂಡ ಕೂಡಲೇ ನಿಯಂತ್ರಿಸಲು ಸಹಕಾರಿ ಆಗುತ್ತದೆ.
  • ಬೆಂಕಿ ಒಂದು ಕಡೆಯಿಂದ ಮತ್ತೂಂದು ಕಡೆಗೆ ಹರಡುವುದನ್ನು ತಡೆಯಲು ಹಾಗೂ ಜನ ಧೂಮಪಾನ ಮಾಡಿ ಬಿಸಾಡುವ ಸಿಗರೇಟ್, ಬೀಡಿ ಕಿಡಿಹೊತ್ತಿ ಬೆಂಕಿ ತಗಲುವ ಸಾಧ್ಯತೆಗಳೇ ಹೆಚ್ಚಿದೆ. ಹೀಗಾಗಿ ಅರಣ್ಯದಲ್ಲಿ ಏಕಾಏಕಿ ಉಂಟಾಗುವ ಬೆಂಕಿ ತಡೆಯಲು ಅಥವಾ ದೂರದವರೆಗೆ ವ್ಯಾಪಿಸದಂತೆ ಬೆಂಕಿ ರೇಖೆ (ಫೈರ್‌ ಲೈನ್‌) ತಂತ್ರ ಬಳಕೆ ಅವಶ್ಯ ‌
  • ಅರಣ್ಯ ಪ್ರದೇಶದ ಮೂಲಕ ಸಾಗುವ ರಸ್ತೆಗಳ ಅಕ್ಕ-ಪಕ್ಕ, ಕಾಡಿನ ಕಾಲು ದಾರಿ, ಬೆಂಕಿ ಸ್ಥಳ ಗುರುತಿಸಿ ನಂತರ ಮೂರು ಮೀಟರ್‌ ಅಗಲದ ಅಂತರದಲ್ಲಿ ಅರಣ್ಯ ಸಿಬ್ಬಂದಿಯೇ ಬೆಂಕಿ ಹಚ್ಚಿ ಒಣಗಿದ ಹುಲ್ಲು, ತರಗು ಗಿಡಗಳನ್ನು ಸುಟ್ಟು ನಾಶಪಡಿಸಬೇಕಿದೆ.
  • ಅರಣ್ಯದ ವಿಸ್ತೀರ್ಣಕ್ಕೆ ತಕ್ಕಂತೆ ಇರಬೇಕಾದ ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳನ್ನು ನೇಮಿಸಬೇಕು. ಇನ್ನು ಸ್ವಯಂಸೇವಕರಾಗಿ ಸ್ಥಳೀಯರು ಭಾಗವಹಿಸುವ ಅಗತ್ಯವಿದೆ.
  • ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿರುವ ಸಾಕಷ್ಟು ಉದಾಹರಣೆಯಿದೆ. ಹೀಗಾಗಿ ಅಗ್ನಿಶಾಮಕ ಸಾಧನಗಳ ಜತೆಗೆ ಮಾನವನ ಶಕ್ತಿಯೂ ತುಂಬಾ ಮುಖ್ಯ ನಮ್ಮ ತಾಲೂಕಿನ ಅರಣ್ಯವು ಹೆಚ್ಚಾಗಿ ನೀಲಗಿರಿ, ಅಕೇಶಿಯಾ, ಲಂಟನಾ ಆದಂತಹ ಬೇಲಿ ಗಿಡಗಳು ಆವರಿಸಿದೆ.

ಬೆಂಕಿ ಬಿದ್ದರೆ ಕ್ಷಣ ಮಾತ್ರದಲ್ಲಿ ಸುಟ್ಟುಹೋಗುತ್ತದೆ. ಅರಣ್ಯ ಇಲಾಖೆ ತಮ್ಮ ಪ್ರಯತ್ನದೊಂದಿಗೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಇಂತಹ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. – ಚಿದಾನಂದ್‌, ಯುವ ಸಂಚಲನದ ಅಧ್ಯಕ್ಷ

-ಡಿ.ಶ್ರೀಕಾಂತ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.