13 ಗ್ರಾಪಂ ಕೊಳವೆಬಾವಿ ನೀರು ಕಲುಷಿತ!


Team Udayavani, Feb 14, 2023, 12:51 PM IST

tdy-11

ನೆಲಮಂಗಲ: ತಾಲೂಕಿನ 13 ಗ್ರಾಪಂ ವ್ಯಾಪ್ತಿಯ ಕೊಳವೆ ಬಾವಿಗಳ ನೀರಿನ ಮೂಲಗಳು ಕಲುಷಿತಗೊಂಡಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

ಜನತೆ ಒತ್ತಾಯ: ಜಿಲ್ಲಾ ಮಟ್ಟದ ಪ್ರಯೋಗಾಲಯದ ಹಿರಿಯ ರಾಸಾಯನಿಕ ವಿಶ್ಲೇಷಣೆಗಾರರು ನೀರಿನ ಮಾದರಿ ಪರೀಕ್ಷಿಸಿ ವರದಿ ನೀಡಿದ್ದು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಗ್ರಾಪಂಗಳಿಗೆ ಶುದ್ಧ ನೀರಿನ ಘಟಕದ ಮೂಲಕ ಸಂಸ್ಕರಿಸಿ ನೀರು ಕುಡಿಯುವಂತೆ ನೋಟಿಸ್‌ ನೀಡಲಾಗಿದೆ.

ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಬಳಕೆ ಆಗುತ್ತಿರುವ ಕೊಳವೆ ಬಾವಿಗಳ ನೀರು ಕಲುಷಿತವಾಗಿದೆ ಎಂಬ ವರದಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದ್ದು ತಕ್ಷಣ ಶುದ್ಧ ನೀರು ಸರಬರಾಜು ಮಾಡುವಂತೆ ಗ್ರಾಮೀಣ ಜನ ಒತ್ತಾಯ ಮಾಡಿದ್ದಾರೆ.

ಕಲುಷಿತಕ್ಕೆ ಕಾರಣ: ತಾಲೂಕಿನ 13 ಗ್ರಾಪಂ ವ್ಯಾಪ್ತಿಯಲ್ಲಿ ಅನೇಕ ಕೈಗಾರಿಕೆಗಳಿದ್ದು ಅನೇಕ ಕೈಗಾರಿಕೆಗಳ ಕಲುಷಿತ ನೀರನ್ನು ಅಂತರ್ಜಲಕ್ಕೆ ಬಿಡುತ್ತಿದ್ದಾರೆ. ಇದರಿಂದ ಕೊಳವೆ ಬಾವಿಗಳ ನೀರು ಕಲುಷಿತವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

21ರಲ್ಲಿ 13 ಗ್ರಾಪಂಗಳಲ್ಲಿ ಸಮಸ್ಯೆ: ತಾಲೂಕಿನ 21 ಗ್ರಾಪಂಗಳ ಪೈಕಿ ಸೋಂಪುರ, ಗೊಲ್ಲಹಳ್ಳಿ, ಬೂದಿಹಾಳ್‌, ಮಣ್ಣೆ, ಕೊಡಿಗೇಹಳ್ಳಿ, ನರಸೀಪುರ, ಶಿವಗಂಗೆ, ಹೊನ್ನೇನಹಳ್ಳಿ, ಟಿ.ಬೇಗೂರು, ದೊಡ್ಡಬೆಲೆ, ಯಂಟಗನಹಳ್ಳಿ, ಕಳಲುಘಟ್ಟ, ಅರೆಬೊಮ್ಮ ನಹಳ್ಳಿ ಸೇರಿ 13 ಗ್ರಾಪಂಗಳಲ್ಲಿ ನೀರಿನ ಮಾದರಿ ಸಂಗ್ರಹಣೆ ಮಾಡಿರುವ ಕೊಳವೆ ಬಾವಿಗಳ ನೀರು ಕಲುಷಿತವಾಗಿದೆ. ಶುದ್ಧ ನೀರಿನ ಘಟಕಗಳೂ ಅನೇಕ ಕಡೆ ರಿಪೇರಿ ಆಗಿದ್ದರೆ ಕೆಲವು ಕಡೆ ಘಟಕಗಳೇ ಇಲ್ಲ ದಂತಾಗಿವೆ.

ಮನವಿ: ಕೊಳವೆ ಬಾವಿ ನೀರು ಕಲುಷಿತ ಎಂಬ ವರದಿ ಬಂದಿರುವ ಕಾರಣ ಗ್ರಾಮೀಣ ಜನ ಕುಡಿಯಲು ತುರ್ತಾಗಿ ಶುದ್ಧ ನೀರು ಸರಬರಾಜು ಮಾಡುವ ಅನಿವಾರ್ಯತೆ ಎದುರಾಗಿದ್ದು ಅಧಿಕಾರಿಗಳು, ಜನಪ್ರತಿನಿಧಿ ಗಳು ಇದರ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳುವ ಅನಿವಾರ್ಯತೆ ಎದುರಾಗಿದೆ.

ಅಂತರ್ಜಲಕ್ಕೆ ಕೈಗಾರಿಕೆಗಳ ಕಲುಷಿತ ನೀರನ್ನು ಬಿಡುವುದರ ಜತೆಗೆ ನೀರಿನ ಮೂಲಗಳಿಗೆ ತ್ಯಾಜ್ಯ ಹಾಕುತ್ತಿರುವ ಕಾರಣ ಕೊಳವೆ ಬಾವಿಗಳಲ್ಲಿಯೂ ನೀರು ಕಲುಷಿತವಾಗುತ್ತಿದೆ. ವರದಿಯ ಮೂಲಕ ಇದು ಸಾಬೀತಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮಕೈಗೊಳ್ಳಬೇಕು. -ವಿನಯ್‌ ಸಾಮಾಜಿಕ ಕಾರ್ಯಕರ್ತ

ಗ್ರಾಪಂ ಕೊಳವೆ ಬಾವಿ ನೀರು ಕಲುಷಿತವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಈ ಸಂಬಂಧಪಟ್ಟ ಇಲಾಖೆಗೆ ತಕ್ಷಣ ಮಾಹಿತಿ ಪಡೆದು ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. – ಮಧು, ಇಒ ನೆಲಮಂಗಲ ಗ್ರಾಪಂ

ಕೊಳವೆಬಾವಿ ನೀರನ್ನು ಪ್ರಾಥಮಿಕವಾಗಿ ಪರೀಕ್ಷೆ ಮಾಡಿದಾಗ ಕಲುಷಿತವಾಗಿರುವುದು ಕಂಡುಬಂದಿದೆ. ಮತ್ತೂಮ್ಮೆ ಪರೀಕ್ಷೆ ಮಾಡಲಾಗುತ್ತದೆ. ಅಲ್ಲಿಯವರೆಗೂ ಶುದ್ಧ ನೀರಿನ ಘಟಕದಿಂದ ಸಂಸ್ಕರಿಸಿದ ನೀರನ್ನು ಕುಡಿಯಲು ಜನತೆಗೆ ತಿಳಿಸಲಾಗಿದೆ. – ಶ್ರೀಕಾಂತ್‌, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೆಲಮಂಗಲ

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.