ಶೇ.60 ಭರವಸೆಯನ್ನೂ ಈಡೇರಿಸಿಲ್ಲ: ಸಿದ್ದರಾಮಯ್ಯ ವಾಗ್ಧಾಳಿ

ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ‌ ಈಡೇರಿಸದ ಬಿಜೆಪಿ

Team Udayavani, Feb 15, 2023, 6:30 AM IST

ಶೇ.60 ಭರವಸೆಯನ್ನೂ ಈಡೇರಿಸಿಲ್ಲ: ಸಿದ್ದರಾಮಯ್ಯ ವಾಗ್ಧಾಳಿ

ವಿಧಾನಸಭೆ: ಬಿಜೆಪಿ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆ ಪೈಕಿ ಶೇ.60ರಷ್ಟು ಈಡೇರಿಸಿಲ್ಲ. ಹೀಗಿರುವಾಗ ರಾಜ್ಯಪಾಲರ ಕೈಲಿ ಸುಳ್ಳು ಹೇಳಿಸಿರುವುದು ನಿಜವೋ ಅಲ್ಲವೋ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರು ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ಪಡೆದಿರುವ ಒಂದು ಲಕ್ಷ ರೂ. ಸಾಲ ಮನ್ನಾ, 20 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತಲಾ 10 ಸಾವಿರ ರೂ. ನಗದು, ಬೆಂಬಲ ಬೆಲೆಗಾಗಿ ಐದು ಸಾವಿರ ಕೋಟಿ ರೂ. ವಿಶೇಷ ನಿಧಿ ಸ್ಥಾಪನೆ, ನೀರಾವರಿ ಯೋಜನೆಗಳಿಗೆ 1.50 ಲಕ್ಷ ಕೋಟಿ ರೂ. ವೆಚ್ಚ ಮಾಡುವ ಸುಜಲಾಂ ಸುಫ‌ಲಾಂ ಯೋಜನೆ ಇದ್ಯಾವುದೂ ಜಾರಿಯೇ ಆಗಿಲ್ಲ ಎಂದು ಉದಾಹರಣೆ ಸಹಿತ ವಿವರಿಸಿದರು.

ಪಶು ಸಂಗೋಪನೆ ಇಲಾಖೆಯಿಂದ ಮೂರು ಸಾವಿರ ಕೋಟಿ ರೂ. ಮೊತ್ತದ ಯೋಜನೆ ಕಾಮದೇನು ಘೋಷಿಸಲಾಗಿತ್ತು. ಆದರೆ, ಇದುವರೆಗೂ ಜಾರಿಯಾಗಿಲ್ಲ ಎಂದಾಗ, ಕಾಂಗ್ರೆಸ್‌ ಸದಸ್ಯರು ಅದು ನಾಮದೇನು ಆಗಿದೆ ಎಂದು ಕಿಚಾಯಿಸಿದರು.

ಹೌದು, ತಿರುಪತಿ ತಿಮ್ಮಪ್ಪನ ನಾಮ ಅಂತಾರೆ ನಮ್ಮ ಕಡೆ. ಇತ್ತೀಚೆಗೆ ನಾನು ಏನೇ ಮಾತನಾಡಿದರೂ ವಿವಾದ ಮಾಡಲಾಗುತ್ತದೆ. ಇದಕ್ಕೂ ಬೇಕಾದರೆ ತಿರುಪತಿ ತಿಮ್ಮಪ್ಪನಿಗೆ ಅವಮಾನ ಮಾಡಿದರು ಎಂದೂ ಹೇಳಬಹುದು ಎಂದು ಚಟಾಕಿ ಹಾರಿಸಿದರು.

ಮಾತು ಮುಂದುವರಿಸಿದ ಸಿದ್ದರಾಮಯ್ಯ, ಕಾಂಗ್ರೆಸ್‌ 2013ರಲ್ಲಿ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿತ್ತು. ಆ ಪೈಕಿ 158 ಈಡೇರಿಸಿತು. ಜತೆಗೆ ಹೊಸದಾಗಿ 30 ಯೋಜನೆ ಜಾರಿಗೊಳಿಸಿತು. ಇದರ ಬಗ್ಗೆ ನಾನು ಬಹಿರಂಗ ಚರ್ಚೆಗೂ ಸಿದ್ಧ ಎಂದು ಹೇಳಿದರು.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ವೇಳೆ ಸಿ.ಟಿ.ರವಿ ಸೇರಿ ಹಲವರು ಡಬಲ್‌ ಎಂಜಿನ್‌ ಸರ್ಕಾರ, ಸಾಧನೆ ಎಂದೆಲ್ಲಾ ಮಾತನಾಡಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ರಸಗೊಬ್ಬರ ಸಬ್ಸಿಡಿಗೆ 50 ಸಾವಿರ ಕೋಟಿ ಕಡಿತ ಮಾಡಲಾಗಿದೆ. ನರೇಗಾ ಯೋಜನೆಗೆ 29 ಸಾವಿರ ಕೋಟಿ ರೂ. ಕಡಿತ ಮಾಡಲಾಗಿದೆ. ಇದು ಅಭಿವೃದ್ಧಿಯ ಸಂಕೇತವೇ ಎಂದು ಪ್ರಶ್ನಿಸಿದರು.

ಐ ಆ್ಯಮ್‌ ಆಲ್‌ವೇಸ್‌ ರಿಲೆವೆಂಟ್‌
ಸಿದ್ದರಾಮಯ್ಯ ಅವರು ಮಾತನಾಡುವಾಗ ಬಿಜೆಪಿಯವರು ಪದೇಪದೆ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಆ ಮಟ್ಟಿಗೆ ನಾನು ರಿಲೆವೆಂಟ್‌ ಎಂಬುದು ಅರ್ಥವಾಗಿದೆ ಎಂದರು.

ಆಗ, ಸಿ.ಟಿ.ರವಿ, ಹೌದು ಅದಕ್ಕೆ ಮಾತನಾಡುತ್ತೇವೆ. ಇರ್‌ರಿಲೆವೆಂಟ್‌ ಅಂತಾ ನಿಮಗೆ ಯಾಕೆ ಅನುಮಾನ ಎಂದು ಕಾಲೆಳೆದರು. ಅದಕ್ಕೆ ಸಿದ್ದರಾಮಯ್ಯ, ನೋ..ನೋ.. ಐ ಆ್ಯಮ್‌ ಆಲ್‌ವೇಸ್‌ ರಿಲೆವೆಂಟ್‌, ಹಿಂದೆಯೂ, ಈಗಲೂ ಮುಂದೆಯೂ ಎಂದು ಹೇಳಿದರು.

ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮೇಲ್ಮನೆಯಲ್ಲಿ ಉಗ್ರಪ್ಪ ಅವರು ರೈತರ ಸಾಲ ಮನ್ನಾ ಮಾಡಿ ಅಂದಾಗ ನಾವು ನೋಟು ಪ್ರಿಂಟ್‌ ಮಾಡುವ ಯಂತ್ರ ಇಟ್ಟುಕೊಂಡಿಲ್ಲ ಅಂದರು. ಇದೀಗ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರೈತರ ಸಾಲ ಮನ್ನಾದಿಂದ ದೇಶಕ್ಕೆ ಉಪಯೋಗವಿಲ್ಲ ಎಂದು ಹೇಳಿದ್ದಾರೆ. ಆದರೆ, ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಪಡೆದ 12 ಲಕ್ಷ ಕೋಟಿ ರೂ. ಅನುತ್ಪಾದಕ ಆಸ್ತಿ ಎಂದು ಪರಿಗಣಿಸಿ ಮನ್ನಾ ಮಾಡುತ್ತಾರೆ. ಇದು ಬಿಜೆಪಿಯವರ ರೈತರಪರ ಕಾಳಜಿ, ಅದಾನಿ, ಅಂಬಾನಿ ಮೇಲಿನ ಪ್ರೀತಿ.
– ಸಿದ್ದರಾಮಯ್ಯ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.