ಪಡೀಲ್‌ನಲ್ಲಿ ಸುಸಜ್ಜಿತ “ಇವಿಎಂ” ಉಗ್ರಾಣ


Team Udayavani, Feb 15, 2023, 11:54 AM IST

evm

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಿಸಿ ಮತ ಯಂತ್ರದ ವಿವಿಧ ವಿಭಾಗಗಳಾದ ಇವಿಎಂ, ವಿವಿ ಪ್ಯಾಟ್‌ ಮತ್ತು ಕಂಟ್ರೋಲ್‌ ಯುನಿಟ್‌ಗಳನ್ನು ಸಂಗ್ರಹಿಸಿಡಲು ಪಡೀಲ್‌ನಲ್ಲಿ ಉಗ್ರಾಣ (ಇವಿಎಂ ವೇರ್‌ಹೌಸ್‌) ನಿರ್ಮಾಣಗೊಂಡಿದ್ದು ಮತಯಂತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲಾಗಿದೆ.

ಪಡೀಲ್‌ನಲ್ಲಿ ಪ್ರಗತಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಹಿಂಭಾಗದಲ್ಲೇ 2 ಅಂತಸ್ತಿನ ಈ ಉಗ್ರಾಣ ಇದ್ದು 5.19 ಕೋ. ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿದೆ. ಈ ಮೊದಲು ಸ್ಟೇಟ್‌ಬ್ಯಾಂಕ್‌ ಬಳಿಯ ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್‌ ರೂಮ್‌ನಲ್ಲಿ ಇವಿಎಂಗಳನ್ನು ಇರಿಸಲಾಗಿತ್ತು. ಪ್ರಸ್ತುತ ಅವುಗಳಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮತಯಂತ್ರಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ವಿಧಾನಸಭೆ, ಜಿ.ಪಂ., ತಾ.ಪಂ., ಚುನಾವಣೆಗಳ ಮತಯಂತ್ರಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲೇ ಇರಿಸಲಾಗಿದೆ. ಅವುಗಳನ್ನು ಚುನಾವಣೆಗಳು ನಡೆದ ಬಳಿಕ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಸಜ್ಜಿತ ಕಟ್ಟಡ ಇವಿಎಂ ಸಂಗ್ರಹ ಉಗ್ರಾಣ ಸುಸಜ್ಜಿತ ಕಟ್ಟಡವಾಗಿದ್ದು, ಒಂದೇ ಪ್ರವೇಶ ದ್ವಾರ ಹೊಂದಿದೆ. ಕಿಟಕಿ ಬಾಗಿಲುಗಳನ್ನು ಮೊಹರು ಮಾಡಿ ಮುಚ್ಚಿರುವುದರಿಂದ ಗಾಳಿ ಅಡ್ಡಾಡಲು ಸಣ್ಣ ಗವಾಕ್ಷಿ, ಸೇಫ್ಟಿ ಅಲರಾಮ್‌ ಸಿಸಿ ಕೆಮರಾ, ಅಗ್ನಿಶಮನ ವ್ಯವಸ್ಥೆ, 24 ಗಂಟೆಗಳ ಪೊಲೀಸ್‌ ಕಾವಲನ್ನು ಒಳಗೊಂಡಿದೆ. ಮುಂದಿನ 30 ವರ್ಷಗಳ ಅವಧಿಗೆ ಎಷ್ಟು ಮತಯಂತ್ರಗಳನ್ನು ಇರಿಸಬಹುದು ಎಂದು ಅಂದಾಜಿಸಿ ಚುನಾವಣಾ ಆಯೋಗದ ನಿಯಮಾವಳಿಯಂತೆ ನಿರ್ಮಿಸಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರದ ಇವಿಎಂಗೂ ಪ್ರತ್ಯೇಕ ಕೊಠಡಿಗಳಿವೆ.

ತಿಂಗಳಿಗೊಮ್ಮೆ ಪರಿಶೀಲನೆ

ಮತ ಯಂತ್ರಗಳನ್ನು ಪಡೀಲ್‌ನಲ್ಲಿರುವ ನೂತನ ಉಗ್ರಾಣದಲ್ಲಿ ಇರಿಸಲಾಗಿದೆ. ತಿಂಗಳಿಗೊಮ್ಮೆ ಪರಿಶೀಲನೆ ಮಾಡುತ್ತಿದ್ದು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡ ಬಳಿಕ ಮೂರು ಬಾರಿ ಪರಿಶೀಲಿಸಲಾಗಿದೆ.
– ರವಿಕುಮಾರ್‌ ಎಂ.ಆರ್‌. ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ

ಪ್ರತೀ ತಿಂಗಳು ಪರಿಶೀಲನೆ

ಇವಿಎಂ, ವಿವಿ ಪ್ಯಾಟ್‌ ಮತ್ತು ಕಂಟ್ರೋಲ್‌ ಯುನಿಟ್‌ಗಳನ್ನು ಜಿಲ್ಲಾ ಕೇಂದ್ರದಲ್ಲೇ ಸಂಗ್ರಹಿಸಿ ಇಡಬೇಕು ಎನ್ನುವುದು ಚುನಾವಣ ಆಯೋಗದ ನಿರ್ದೇಶನ. ಹಾಗಾಗಿ ಮಂಗಳೂರಿನಲ್ಲೇ ಉಗ್ರಾಣ ನಿರ್ಮಿಸಲಾಗಿದೆ. ಸದ್ಯ ಉಗ್ರಾಣದಲ್ಲಿರುವ ಮತಯಂತ್ರಗಳನ್ನು ಪ್ರತೀ ತಿಂಗಳು ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಥವಾ ಉಪ ಚುನಾವಣಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೊಠಡಿಗಳಿಗೆ ಮತ್ತೆ ಮೊಹರು ಮಾಡುತ್ತಾರೆ. ಕೊಠಡಿಗಳ ಕೀಲಿಕೈಗಳು ಈ ಇಬ್ಬರ ಸುಪರ್ದಿಯಲ್ಲೇ ಇರುತ್ತವೆ.

~ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.