ಸ್ವಂತ ಮನೆ ಇಲ್ಲದ ಕೊರಗು: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
Team Udayavani, Feb 15, 2023, 9:24 PM IST
ಉಡುಪಿ: ಸ್ವಂತ ಮನೆ ಇಲ್ಲ ಎಂಬ ಕಾರಣಕ್ಕೆ ನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಣಿಪಾಲದ ಫ್ಲ್ಯಾಟ್ವೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದ ಕೊಡಗು ಮೂಲದ ಗೌರಿ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಫೆ.13ರ ಸಂಜೆ ಸುಮಾರು 4 ಗಂಟೆಗೆ ತಾವು ಕೆಲಸ ಮಾಡುವ ಮನೆಯಿಂದ ಹೋಗಿ ಫೆ.14ರಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದಿದ್ದರು. ಇದರಿಂದ ಕೆಲಸದ ಮನೆಯವರು ನೀವು ಇದೇ ರೀತಿ ಮಾಡಿದರೆ ನಿಮ್ಮನ್ನು ವಾಪಸು ಊರಿಗೆ ಕಳುಹಿಸುವುದಾಗಿ ತಿಳಿಸಿದ್ದರು.
ಮೃತರ ನಾಲ್ಕು ಮಕ್ಕಳಲ್ಲಿ ಮೊದಲನೇ ಮಗ ಮತ್ತು ಎರಡನೇ ಮಗಳು ರಾಜಮ್ಮ ಹಾಗೂ ಅವರ ಗಂಡ ಈಗಾಗಲೇ ಮರಣ ಹೊಂದಿದ್ದು, ಮೃತರಿಗೆ ಯಾವುದೇ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಫೆ. 14ರಂದು ಅವರು ಕೆಲಸ ಮಾಡುವ ಮನೆಯ ಮೇಲಿನ ಟೇರಸ್ನ ಕಬ್ಬಣದ ಕೊಂಡಿಗೆ ನೈಲನ್ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಡುಪಿ: ಮಾದಕ ವಸ್ತು ಸಾಗಾಟ… ಕಾಲೇಜು ವಿದ್ಯಾರ್ಥಿಗಳ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.