ಹುಬ್ಬಳ್ಳಿ: ಆನೆ ದಂತದ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರ ಬಂಧನ


Team Udayavani, Feb 16, 2023, 2:24 PM IST

ಹುಬ್ಬಳ್ಳಿ: ಆನೆ ದಂತದ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರ ಬಂಧನ

ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ದಂತಚೋರರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಎಡಿಜಿಪಿ ಸಿಐಡಿ ಬೆಂಗಳೂರು ಮತ್ತು ಪ್ರಭಾರ ಡಿಐಜಿಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗದವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯ ಸಿಬ್ಬಂದಿಯು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಆನೆ ದಂತದ ಕಲಾಕೃತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೊಲ್ಲಾಪುರ ಮೂಲದ ಸಾತ್ ಶಹಾಜನ್ ಜಮಾದಾರ, ವಿಜಯ ರಾಜಾರಾಂ ಕುಂಬಾರ, ಸಾಗರ ಸುಭಾಷ ಪುರಾಣಿಕ, ನಿಪ್ಪಾಣಿ ಮೂಲದ ವಿನಾಯಕ ನಾಮದೇವ ಕಾಂಬ್ಳೆ, ದಾನಜೀ ಪಾಂಡುರಂಗ ಪಾಟೀಲ ಎಂಬುವವರೇ ಬಂಧಿತರಾದವರು.

ಅಕ್ರಮವಾಗಿ ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿತರಿಂದ 384 ಗ್ರಾಂ ತೂಕದ ಆನೆಯ ದಂತದಿಂದ ತಯಾರಿಸಿದ ಅಲಂಕಾರಿಕ ಪೆಟ್ಟಿಗೆ, 112 ಗ್ರಾಂ ತೂಕದ ಕೆಂಪು ಹರಳು ಇರುವ ಒಂದು ಖಡ್ಗ, 350 ಗ್ರಾಂ ತೂಕದ ಆಯತಾಕಾರದ ಪೆಟ್ಟಿಗೆ, 279 ಗ್ರಾಂ ತೂಕದ ಒಂದು ಮೊಟ್ಟೆಯಾಕಾರದ ಪೆಟ್ಟಿಗೆ ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಾತ್ ಶಹಜಾನ ಜಮಾದಾರನನ್ನು ವಿಚಾರಣೆಗೊಳಪಡಿಸಿದಾಗ, ಆನೆ ದಂತದ ಅಲಂಕಾರಿಕ ವಸ್ತುಗಳನ್ನು ತನ್ನ ತಂದೆ ಶಹಜಾನ ಜಮಾದಾರ ರಾಜಸ್ಥಾನದಲ್ಲಿ ನಡೆಯುವ ಜಾತ್ರೆ, ಸಂತೆಗಳು, ಸಾಧುಸಂತರ ಬಳಿಯಿಂದ ಅನೇಕ ವರ್ಷಗಳ ಹಿಂದೆ ಸಂಗ್ರಹಿಸಿ ಮನೆಯಲ್ಲಿಟ್ಟಿದ್ದರು. ಅವುಗಳನ್ನು ಮಾರಾಟ ಮಾಡಿದರೆ ಸಾಕಷ್ಟು ಹಣ ಬರಬಹುದೆಂದು ತಿಳಿದು ಮಾರಾಟ ಮಾಡಲು ಬಂದಿರುವುದಾಗಿ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಪ್ರಸಾದ ಪಣೇಕರ್ ಹಾಗೂ ಸಿಬ್ಬಂದಿಗಳಾದ ಎಲ್.ಎ ಪಾಠಕ, ಅಶೋಕ ನಾಗರಹಳ್ಳಿ, ರವೀಂದ್ರ ಗೋಣೆನವರ, ಎಸ್.ಎಚ್‌. ಹುಲಗೇರ ಹಾಗೂ ದಿವ್ಯ ಎಸ್ ನಾಯ್ಕ ಅವರ ಕಾರ್ಯಕ್ಕೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.