ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 12 ಚೀತಾಗಳು; ಮೂರು ವರ್ಷಗಳ ಪ್ರಯತ್ನದ ಫಲ


Team Udayavani, Feb 16, 2023, 2:41 PM IST

thumb-6

ನವದೆಹಲಿ: ಭಾರತಕ್ಕೆ ಫೆ. 18 ರಂದು (ಶನಿವಾರ) ದಕ್ಷಿಣ ಆಫ್ರಿಕಾದಿಂದ ಆಗಮಿಸುತ್ತಿರುವ 12 ಚೀತಾಗಳ ಸ್ಥಳಾಂತರವು, ಭಾರತ ಸರಕಾರ ಮೊದಲ ಬಾರಿಗೆ ಕಲ್ಪನೆಯನ್ನು ಹುಟ್ಟುಹಾಕಿದ ಮೂರು ವರ್ಷಗಳ ನಂತರ ಆಗುತ್ತಿದೆ.

ಭಾರತವು ಮೂಲತಃ ಉಭಯ ದೇಶಗಳ ನಡುವಿನ ತಿಳುವಳಿಕೆಗಾಗಿ ಯೋಜನೆಗಳನ್ನು ಪ್ರಾರಂಭಿಸಿತ್ತು, ಇದು ಚೀತಾಗಳ ಆಗಮನ ಮುಂದೂಡಿಕೆಗೆ ಕಾರಣವಾಗಿತ್ತು, ಲಿಂಪೊಪೊ ಪ್ರಾಂತ್ಯದ ಮೀಸಲು ಪ್ರದೇಶದಲ್ಲಿ ಚೀತಾಗಳು ಕ್ವಾರಂಟೈನ್ ಮುಂದುವರೆಸಿದ್ದವು.

ಜನವರಿ 2020 ರಲ್ಲಿ, ಸುಪ್ರೀಂ ಕೋರ್ಟ್ ದಕ್ಷಿಣ ಆಫ್ರಿಕಾದ ಚೀತಾಗಳನ್ನು ಭಾರತದಲ್ಲಿ ಸೂಕ್ತವಾದ ಆವಾಸಸ್ಥಾನಕ್ಕೆ ಪರಿಚಯಿಸಲು ಕೇಂದ್ರ ಸರಕಾರಕ್ಕೆ ಅನುಮತಿ ನೀಡಿತ್ತು. ಅವುಗಳು ಹೊಂದಿಕೊಳ್ಳಬಹುದೇ ಎಂದು ಪರೀಕ್ಷಿಸಲು ದಕ್ಷಿಣ ಆಫ್ರಿಕಾದಲ್ಲಿ ಚೀತಾ ಮೆಟಾಪೋಪ್ಯುಲೇಶನ್‌ನ ಸಂಯೋಜಕ ವಿನ್ಸೆಂಟ್ ವ್ಯಾನ್ ಡೆರ್ ಮೆರ್ವೆ ಸಂಗ್ರಹಿಸಿದ ವರದಿ ತಿಳಿಸಿದೆ.

ನಮೀಬಿಯಾದಿಂದ ದಕ್ಷಿಣ ಆಫ್ರಿಕಾದ ಚೀತಾಗಳನ್ನು ಪರಿಚಯಿಸಲು ಅನುಮತಿ ಕೋರಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ತೀರ್ಪು ಬಂದಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು.

ಚೀತಾಗಳು ಶುಕ್ರವಾರ ಸಂಜೆ ಜೋಹಾನ್ಸ್‌ಬರ್ಗ್‌ನ ಓ ಆರ್ ಟ್ಯಾಂಬೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದ್ದು, ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ಏರ್ ಫೋರ್ಸ್ ಬೇಸ್‌ಗೆ ಆಗಮಿಸುವ ನಿರೀಕ್ಷೆಯಿದೆ, ನಂತರ ಸ್ವಲ್ಪ ಸಮಯದ ನಂತರ ಶಿಯೋಪುರಕ್ಕೆ ಸಾಗಿಸಲಾಗುತ್ತದೆ.ಈ ಉದ್ದೇಶಕ್ಕಾಗಿ ಭಾರತೀಯ ವಾಯುಪಡೆಯು ಮುಚ್ಚಿದ ಬಾಗಿಲುಗಳೊಂದಿಗೆ ಹೆವಿ ಲಿಫ್ಟ್ ಹೆಲಿಕಾಪ್ಟರ್‌ಗಳನ್ನು ಸಿದ್ಧವಿರಿಸಲಾಗಿದೆ. ಚೀತಾಗಳನ್ನು ಮಧ್ಯ ಪ್ರದೇಶದ ಕೂನೋ ನ್ಯಾಶನಲ್ ಪಾರ್ಕ್ ಗೆ ಕೊಂಡೊಯ್ಯಲಾಗುತ್ತದೆ.

ಕಳೆದ ವರ್ಷ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾದ ಎಂಟು ಚೀತಾಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮೊದಲ ಇಂಟರ್-ಕಾಂಟಿನೆಂಟಲ್ ಚೀತಾ ಸ್ಥಳಾಂತರ ಯೋಜನೆಗೆ ಚಾಲನೆ ನೀಡಿದ ಐದು ತಿಂಗಳ ನಂತರ ಎರಡನೇ ಬ್ಯಾಚ್ ಚೀತಾಗಳು ಬರುತ್ತಿವೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.