ಡಿಎಂಕೆಗೆ ಸೇನೆಯ ಮೇಲೆ ಎಂದಿಗೂ ಗೌರವವಿಲ್ಲ ; ಅಣ್ಣಾಮಲೈ ಕೆಂಡಾಮಂಡಲ
ಡಿಎಂಕೆ ಲಜ್ಜೆಗೆಟ್ಟ, ದುಷ್ಟ ಪಕ್ಷ... ಅಸಂಬದ್ಧ ವಿಷಯಗಳನ್ನು ಹೇಳಲು ಪ್ರಯತ್ನಿಸುತ್ತಿದೆ..
Team Udayavani, Feb 16, 2023, 4:31 PM IST
ಚೆನ್ನೈ : ಡಿಎಂಕೆ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದು, 1965-67ರಲ್ಲಿ ಪಕ್ಷ ರಚನೆಯಾಗಿದ್ದೇ ಹಾಗೆ. ಅವರಿಗೆ ಸೇನೆಯ ಮೇಲೆ ಎಂದಿಗೂ ಗೌರವ ಇಲ್ಲ ಎಂದು ಕೃಷ್ಣಗಿರಿಯಲ್ಲಿ ಸೇನಾ ಸಿಬಂದಿಯ ಹತ್ಯೆಯ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರವನ್ನು ಧರಿಸಿದ ಯಾವುದೇ ವ್ಯಕ್ತಿಗೆ ಗೌರವ ಸಿಗುವುದಿಲ್ಲ ಎಂಬುದು ಅವರ ಸಿದ್ದಾಂತ ಮತ್ತು ಸಂಸ್ಕೃತಿಯಲ್ಲಿದೆ. ಡಿಎಂಕೆ ಲಜ್ಜೆಗೆಟ್ಟ, ದುಷ್ಟ ಪಕ್ಷ ಎಂದು ಕಿಡಿ ಕಾರಿದರು.
ಒಬ್ಬ ಸೇನಾ ಸಿಬಂದಿಯ ಮೇಲೆ ಕೌನ್ಸಿಲರ್ನಿಂದ ಹಲ್ಲೆ ನಡೆಸಲಾಯಿತು ಮತ್ತು ಪೊಲೀಸರು ಅದನ್ನು ಮುಚ್ಚಿಹಾಕಲು 6-7 ದಿನಗಳನ್ನು ತೆಗೆದುಕೊಂಡರು ಮತ್ತು ಮಾಧ್ಯಮಗಳ ಆಕ್ರೋಶದ ನಂತರ ಹೋಗಿ ಅವರನ್ನು ಬಂಧಿಸಲಾಯಿತು. ಇದು ರಾಷ್ಟ್ರೀಯ ಸಮಸ್ಯೆಯಾಗಿ ಪರಿಣಮಿಸಿದೆ. ಕೃತ್ಯಕ್ಕೆ ಡಿಎಂಕೆ ಬೆನ್ನೆಲುಬಾಗಿ ನಿಂತಿದೆ, ಎಲ್ಲಾ ಅಸಂಬದ್ಧ ವಿಷಯಗಳನ್ನು ಹೇಳಲು ಪ್ರಯತ್ನಿಸುತ್ತಿದೆ ಎಂದರು.
ತಪ್ಪಿತಸ್ಥರನ್ನು ಬಂಧಿಸುವುದು ಮಾತ್ರವಲ್ಲ, ಅವರಿಗೆ ಆದರ್ಶಪ್ರಾಯ ಎನಿಸುವಂತಹ ಶಿಕ್ಷೆಯನ್ನು ನೀಡಬೇಕು. ಬಿಜೆಪಿಯ ಮಾಜಿ ಸೈನಿಕರ ಘಟಕದ ಸದಸ್ಯರು ತಮಿಳುನಾಡಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚೆನ್ನೈನ ಯುದ್ಧ ಸ್ಮಾರಕದಲ್ಲಿ ಮಾಜಿ ಸೈನಿಕರೊಂದಿಗೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಹೇಳಿದ್ದಾರೆ. ಹತ್ಯೆಯನ್ನು ಖಂಡಿಸಿ ಕೃಷ್ಣಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡಿಎಂಕೆ ಕೌನ್ಸಿಲರ್ ಸೇನಾ ಸಿಬಂದಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆ ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದು ಸ್ಥಳೀಯ ವಿಚಾರವಾಗಿದ್ದು, ಸಣ್ಣ ಜಗಳ ವಿಕೋಪಕ್ಕೆ ಹೋಗಿ ಕೊಲೆಗೆ ಕಾರಣವಾಗಿದೆ. ಎಲ್ಲರನ್ನು ಬಂಧಿಸಲಾಗಿದೆ ಎಂದು ಕೃಷ್ಣಗಿರಿಯಲ್ಲಿ ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಅವರು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.