![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2023, 10:19 PM IST
ಕೋಲ್ಕತ: ಏಷ್ಯನ್ ಗೇಮ್ಸ್ ಚಿನ್ನ ವಿಜೇತ ಮತ್ತು ಒಲಿಂಪಿಯನ್ ತುಳಸಿದಾಸ್ ಬಲರಾಮ್ (87) ದೀರ್ಘಕಾಲದ ಅನಾರೋಗ್ಯದ ಬಳಿಕ ಗುರುವಾರ ನಿಧನ ಹೊಂದಿದರು.
1950 ಮತ್ತು 60ರ ದಶಕದ ಸಮೃದ್ಧ ಭಾರತೀಯ ಫುಟ್ಬಾಲ್ನ “ಹೋಲಿ ಟ್ರಿನಿಟಿ’ ಭಾಗವಾಗಿದ್ದ ಅವರು ಉತ್ತರಪಾರದ ಹೂಗ್ಲಿ ನದಿಯ ದಡದಲ್ಲಿರುವ ಫ್ಲ್ಯಾಟ್ನಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದರು. ಕಳೆದ ವರ್ಷ ಡಿ. 26ರಂದು ಮೂತ್ರದ ಸೋಂಕು ಮತ್ತು ಕಿಬ್ಬೊಟ್ಟೆಯ ಹಿಗ್ಗುವಿಕೆಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಸ್ಥಿತಿ ಸುಧಾರಿಸಲಿಲ್ಲ ಮತ್ತು ಗುರುವಾರ ನಿಧನ ಹೊಂದಿದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
1936ರ ಅ. 4ರಂದು ಜನಿಸಿದ್ದ ಅವರು ಒಟ್ಟಾರೆ 131 ಗೋಲುಗಳನ್ನು ದಾಖಲಿಸಿದ ಸಾಧನೆ ಮಾಡಿದ್ದಾರೆ. ಅರ್ಜುನ ಪ್ರಶಸ್ತಿ ವಿಜೇತರಾಗಿದ್ದ ಅವರು 1960ರ ರೋಮ್ ಒಲಿಂಪಿಕ್ಸ್ನಲ್ಲಿ ಅಮೋಘ ನಿರ್ವಹಣೆ ನೀಡಿ ಗಮನ ಸೆಳೆದಿದ್ದರು. ಬಲರಾಮ್ ಅವರು 1950 ಮತ್ತು 60ರ ದಶಕದಲ್ಲಿ ಭಾರತೀಯ ಫುಟ್ಬಾಲ್ನ ಸುವರ್ಣ ಪೀಳಿಗೆಗೆ ಸೇರಿದವರು. ಅವರು ಚುನಿ ಗೋಸ್ವಾಮಿ ಮತ್ತು ಪಿಕೆ ಬ್ಯಾನರ್ಜಿ ಅವರ ಜತೆಗೂಡಿ ಶ್ರೇಷ್ಠ ಪ್ರದರ್ಶನ ನೀಡಿದ್ದರಿಂದ ಅವರನ್ನು “ಹೋಲಿ ಟ್ರಿನಿಟಿ’ ಎಂದೇ ಕರೆಯಲಾಗುತ್ತಿತ್ತು.
ಜಕಾರ್ತ ಏಷ್ಯನ್ ಗೇಮ್ಸ್ನ ಚಿನ್ನ ಗೆಲ್ಲುವಲ್ಲಿ ತುಳಸಿದಾಸ್ ಪ್ರಮುಖ ಪಾತ್ರ ವಹಿಸಿದ್ದರು. ಫೈನಲ್ನಲ್ಲಿ ಭಾರತ ದಕ್ಷಿಣ ಕೊರಿಯ ವಿರುದ್ಧ 2-1 ಗೋಲುಗಳ ಜಯ ದಾಖಲಿಸಿ ಚಿನ್ನ ಗೆದ್ದ ಸಾಧನೆ ಮಾಡಿತ್ತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.