ಕೊಲ್ಲೂರು ದೇಗುಲಕ್ಕೆ ನೂತನ ರಥ ಸಮರ್ಪಣೆ


Team Udayavani, Feb 17, 2023, 5:25 AM IST

tdy-42

ಕೊಲ್ಲೂರು: ದಿ| ಮುರ್ಡೇಶ್ವರ ಆರ್‌.ಎನ್‌. ಶೆಟ್ಟಿ ಅವರ ಪುತ್ರ ಸುನಿಲ್‌ ಆರ್‌. ಶೆಟ್ಟಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಹರಕೆ ರೂಪದಲ್ಲಿ ನೀಡಿರುವ ಬ್ರಹ್ಮರಥದ ಸಮರ್ಪಣೆ ಗುರುವಾರ ನೆರವೇರಿತು.

ರಥ ಸಮರ್ಪಣೆಯ ಬಳಿಕ ನಡೆದ ಸಭೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ನೂತನ ಬ್ರಹ್ಮರಥ ಸಮರ್ಪಣೆಯಿಂದ ಶ್ರೇಷ್ಠ ಪರಂಪರೆ, ಇತಿಹಾಸ ಹೊಂದಿರುವ ಮೂಕಾಂಬಿಕೆಯ ಸನ್ನಿ ಧಿಗೆ ಹೊಸ ಚೈತನ್ಯ ತುಂಬಿದಂತಾಗಿದೆ. ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಿದರೆ ಲೋಕಕಲ್ಯಾಣವಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೊಲ್ಲೂರು ದೇಗುಲ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಮಾತನಾಡಿ, ದಿ| ಆರ್‌.ಎನ್‌. ಶೆಟ್ಟಿಯವರು ಸೇವಾರೂಪದಲ್ಲಿ ಅತಿಥಿಗೃಹ ನೀಡಿದ್ದರು. ಪುತ್ರ ಸುನಿಲ್‌ ಶೆಟ್ಟಿಯವರು ನೂತನ ರಥವನ್ನು ಸಮರ್ಪಿಸಿದ್ದಾರೆ ಎಂದರು.

ದಾನಿ ಸುನಿಲ್‌ ಆರ್‌. ಶೆಟ್ಟಿ, ಎಡಿಸಿ ವೀಣಾ ಬಿ.ಎನ್‌. ತಂತ್ರಿ, ಅರ್ಚಕ ಡಾ| ಕೆ. ರಾಮಚಂದ್ರ ಅಡಿಗ, ಮಾಜಿ ಶಾಸಕ ಕೆ. ಅಪ್ಪಣ್ಣ ಹೆಗ್ಡೆ, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ಗಣೇಶ ಕಿಣಿ ಬೆಳ್ವೆ, ರತ್ನಾ ಆರ್‌. ಕುಂದರ್‌, ಸಂಧ್ಯಾ ರಮೇಶ, ನಿಕಟಪೂರ್ವ ಕಾರ್ಯನಿರ್ವಹಣಾ ಧಿಕಾರಿ ಮಹೇಶ, ಉಪ ಕಾರ್ಯನಿರ್ವಹಣಾ ಧಿಕಾರಿ ಗೋವಿಂದ ನಾಯ್ಕ, ಮಂದರ್ತಿ ದೇಗುಲದ ಧರ್ಮದರ್ಶಿ ಧನಂಜಯ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ಶಿವರಾಮಕೃಷ್ಣ ಭಟ್‌ ಮೊದಲಾದವರು ವೇದಿಕೆಯಲ್ಲಿದ್ದರು.

ಸಮ್ಮಾನ:

ರಥ ದಾನಿಗಳಾದ ಸುನಿಲ್‌ ಆರ್‌. ಶೆಟ್ಟಿ, ಮಕ್ಕಳಾದ ಅಂಚಲ್‌, ಅನ್ಮೋಲ್‌ ಅವರನ್ನು ಶಾಸಕರು ಸಮ್ಮಾನಿಸಿದರು. ರಥಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ ಆಚಾರ್ಯ, ಪುಷ್ಪಲತಾ ಆಚಾರ್ಯ, ವಾಸ್ತುತಜ್ಞ ಮಹೇಶ ಮುನಿಯಂಗಳ, ರಥ ನಿರ್ಮಾಣ ಸಮಿತಿಯ ಸದಸ್ಯರಾದ ಸುರತ್ಕಲ್‌ ಎನ್‌ಐಟಿಕೆಯ ಡಾ| ಎಚ್‌. ಎಂ. ಪ್ರಶಾಂತ, ದೇಗುಲದ ಎಂಜಿನಿಯರ್‌ ಪ್ರದೀಪ್‌ ಡಿ.ಕೆ., ನಿಕಟಪೂರ್ವ ಕಾರ್ಯನಿರ್ವಹಣಾ ಧಿಕಾರಿ ಮಹೇಶ ಅವರನ್ನು ಅತಿಥಿಗಳು ಸಮ್ಮಾನಿಸಿದರು.

ದೇಗುಲದ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ ಸ್ವಾಗತಿಸಿದರು. ಇನ್ನೋರ್ವ ಸದಸ್ಯ ಡಾ| ಅತುಲ್‌ ಕುಮಾರ್‌ ಶೆಟ್ಟಿ ಪ್ರಸ್ತಾವನೆಗೈದರು. ರಾಜು ಶೆಟ್ಟಿ ಹಾಗೂ ಸಚಿನ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿವರಾಮ ಭಟ್‌ ವಂದಿಸಿದರು.

ಜೀವ ಉಳಿಸಿದ ತಾಯಿಗೆ ರಥ! :

ರಥ ದಾನಿ ಸುನಿಲ್‌ ಶೆಟ್ಟಿ ಅವರು ಕೊಲ್ಲೂರು ಕ್ಷೇತ್ರದೊಡನೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಬಾಲ್ಯದಲ್ಲಿ ಇಲ್ಲಿನ ಸೌಪರ್ಣಿಕಾ ನದಿಯಲ್ಲಿ ನೀರು ಪಾಲಾದ ಅವರನ್ನು ರಕ್ಷಿಸಿದ ತಾಯಿ ಮೂಕಾಂಬಿಕೆಗೆ ನೂತನ ರಥವನ್ನು ಸಮರ್ಪಿಸಿರುವುದು ಮಹತ್ಕಾರ್ಯ ಎಂದು ಸುಕುಮಾರ ಶೆಟ್ಟಿ ಶ್ಲಾ ಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.