ತೀರ್ಥಹಳ್ಳಿ ಪಟ್ಟಣದ ತುಡ್ಕಿ ಬಳಿ ಕಾಣಿಸಿಕೊಂಡ ಚಿರತೆ… ಆತಂಕದಲ್ಲಿ ಜನತೆ


Team Udayavani, Feb 17, 2023, 6:49 PM IST

ತೀರ್ಥಹಳ್ಳಿ ಪಟ್ಟಣದ ತುಡ್ಕಿ ಬಳಿ ಕಾಣಿಸಿಕೊಂಡ ಚಿರತೆ ? ಗಾಬರಿಗೊಂಡ ಜನ

ತೀರ್ಥಹಳ್ಳಿ : ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ.

ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು ಗುರುತಿಸಿದ್ದು ಅರಣ್ಯ ಇಲಾಖೆ, ಮೊರಾರ್ಜಿ ವಸತಿ ಶಾಲೆಗೆ ಆಡಳಿತಕ್ಕೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮವಹಿಸಲಾಗಿದೆ.

ಆನಂದಗಿರಿ ಗುಡ್ಡದ ಭಾಗದಲ್ಲಿ ತಿಂಗಳಿನಿಂದ ಚಿರತೆ ಓಡಾಟ ನಡೆಸುತ್ತಿದ್ದು ಜೀವಾಪಾಯ ಉಂಟು ಮಾಡಬಹುದು ಎಂಬ ಆತಂಕ ಎದುರಾಗಿದೆ. ಆನಂದಗಿರಿ ಗುಡ್ಡದ ಪರಿಸರದಲ್ಲಿ ಮೊರಾರ್ಜಿ ವಸತಿ ಶಾಲೆ, ಐಟಿಐ ಕಾಲೇಜು, ತುಂಗಾ ಮಹಾವಿದ್ಯಾಲಯ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಜನವಸತಿ ಪ್ರದೇಶ ಇದೆ. ದಿಢೀರನೆ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ಕಳವಳ ಉಂಟು ಮಾಡಿದೆ.

ಪಟ್ಟಣಕ್ಕೆ ಕಾಡಾನೆ ಪ್ರವೇಶ: ಒಂದೂವರೆ ತಿಂಗಳ ಹಿಂದೆ ತೀರ್ಥಹಳ್ಳಿ ಪಟ್ಟಣ, ಕುರುವಳ್ಳಿ, ತುಂಗಾನದಿ ಪರಿಸರದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡ ಬೆನ್ನಲ್ಲೆ ಚಿರತೆ ಪ್ರತ್ಯಕ್ಷವಾಗಿದೆ. ವನ್ಯಜೀವಿಗಳು ನಿಧಾನಕ್ಕೆ ಪಟ್ಟಣ ಪ್ರವೇಶ ಮಾಡುತ್ತಿದ್ದು ಭೀತಿ ಮೂಡುವಂತಾಗಿದೆ. ಆಹಾರ ಅರಸಿ ವನ್ಯಜೀವಿಗಳು ಪಟ್ಟಣಕ್ಕೆ ಪ್ರವೇಶ ಮಾಡುತ್ತಿವೆ ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಗುರುತಿಸಿದರೂ ಬೇರೆ ಕಾರಣಗಳ ಪತ್ತೆಗೆ ಸಂಬಂಧಪಟ್ಟ ಇಲಾಖೆಗಳು ಇನ್ನು ಮುಂದಾಗಿಲ್ಲ

ಪರಿಸರ ಸಂರಕ್ಷಣೆ ನಿಯಮ ಕಠಿಣಗೊಳ್ಳುತ್ತಿರುವ ಸಂದರ್ಭ ಜನವಸತಿ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸುತ್ತಿವೆ. ಮಾನವ, ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಾಗದಂತೆ ಎಚ್ಚರವಹಿಸಬೇಕಾದ ಅನಿವಾರ್ಯತೆ ಇದೀಗ ಎದುರಾಗಿದೆ. ಪಟ್ಟಣದ ಸುತ್ತಲಿನ ಪರಿಸರದ ಸಂರಕ್ಷಣೆ ನಿಯಮಗಳ ಅನ್ವಯ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಸುತ್ತಲಿನ ಅರಣ್ಯ ಪರಿಸರದ ಪ್ರದೇಶವನ್ನು ಬಫರ್ ಜೋನ್ ವಲಯವನ್ನಾಗಿ ಗುರುತಿಸಲು ಆಡಳಿತದಲ್ಲಿ ಬಿರುಸಿನ ಸಿದ್ಧತೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿದೆ.

ಚಿರತೆ ಓಡಾಟದ ಕುರಿತಂತೆ ಜನರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಿಂಗಳಿನಿಂದ ಮಕ್ಕಳ ಸುರಕ್ಷತೆಗಾಗಿ ಎಚ್ಚರಿಕೆ ವಹಿಸಲಾಗಿದೆ. ಚಿರತೆ ಓಡಾಟದ ಕುರಿತಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅರಣ್ಯ ಇಲಾಖೆ ಶಾಲೆ ಸುತ್ತಲಿನ ಪರಿಸರವನ್ನು ಗಮನಿಸುತ್ತಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಸುಚಿತ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಜೆ.ಪಿ.ನಡ್ಡಾ ಉಡುಪಿ, ಚಿಕ್ಕಮಗಳೂರು ಪ್ರವಾಸ, ಕಾರ್ಯಕ್ರಮಕ್ಕೆ ಸಿದ್ಧತೆ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.