ಸಹಸ್ರಾರು ಮಂದಿಗೆ ಸಾಲುತ್ತಾ 10 ಶೌಚಗೃಹ?


Team Udayavani, Feb 18, 2023, 11:32 AM IST

TDY-1

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಒಂದಾದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿದಿನ ಧರಣಿಗಳು ನಡೆಯುತ್ತಲೇ ಇರುತ್ತವೆ. ಆದರೆ, ಇಲ್ಲಿ ಪ್ರತಿಭಟನಾಕಾರರಿಗೆ ಅವಶ್ಯಕವಾಗಿರುವ ಕನಿಷ್ಠ ಮೂಲಸೌಕರ್ಯಗಳ ವ್ಯವಸ್ಥೆ ಇಲ್ಲ. ಸ್ವಾತಂತ್ರ್ಯ ಉದ್ಯಾನವು ಒಟ್ಟು 22 ಎಕರೆ ಭೂಮಿಯನ್ನು ಹೊಂದಿದ್ದು, ಅದರಲ್ಲಿ 2 ಎಕರೆ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಪ್ರತಿದಿನ ಏಳರಿಂದ ಹತ್ತು ಪ್ರತಿಭಟನೆಗಳನ್ನು ನಡೆಸುತ್ತಾರೆ. ಸುಮಾರು 10 ರಿಂದ 12 ಸಾವಿರ ಹೋರಾಟಗಾರರು ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಇವರಿಗೆ ಬೇಕಾದ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಇಲ್ಲದೇ, ಎಲ್ಲೆಂದರಲ್ಲೆ ಮಲ-ಮೂತ್ರ ವಿಸರ್ಜನೆ ಮಾಡುತ್ತಿದ್ದು, ಹೋರಾಟಗಾರರ ಕರ್ಮಭೂಮಿಯಾದ ಸ್ವಾತಂತ್ರ್ಯ ಉದ್ಯಾನ ಅವ್ಯವಸ್ಥೆಯ ಆಗರವಾಗಿದೆ.

ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ, ಹೋರಾಟ ಮಾಡಬೇಕು ಎಂಬ ಹೈಕೋರ್ಟ್‌ ಆದೇಶದಿಂದಾಗಿ ನಿತ್ಯ ಹಲವಾರು ಸಂಘಟನೆಗಳಿಂದ ಸಹಸ್ರಾರು ಮಂದಿ ಹೋರಾಟ ನಡೆಸುತ್ತಾರೆ. ಆದರೆ, ಇಲ್ಲಿ ಕೇವಲ ಹತ್ತು ಶೌಚಾಲಗಳಿದ್ದು, ಅದರಲ್ಲಿ 5 ಪುರುಷರಿಗೆ ಮತ್ತು 5 ಮಹಿಳೆಯರಿಗೆ ಇವೆ. ಕೆಲವೊಮ್ಮೆ 20ರಿಂದ 25 ಸಾವಿರದ್ದು ಮಹಿಳೆಯರೇ ಧರಣಿಯಲ್ಲಿ ಭಾಗವಹಿಸುತ್ತಾರೆ. ಇತ್ತೀಚೆಗೆ ಅಂಗನವಾಡಿ ಕಾರ್ಯ ಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಅನಿರ್ದಿಷ್ಟವಧಿಯ ಪ್ರತಿಭಟನೆ ನಡೆಸುತ್ತಿದ್ದು, ಇಲ್ಲಿ ದಿನಲೂ 15ರಿಂದ 20 ಸಾವಿರ ಮಹಿಳೆಯರು ಭಾಗವಹಿಸುತ್ತಿದ್ದರು. ಇಷ್ಟು ಜನಕ್ಕೆ 5 ಶೌಚಾಲಯಗಳು ಸಾಲದೇ, ಗಿಡ-ಮರ ಅಥವಾ ಪಾರ್ಕಿಂಗ್‌ ನಿಲ್ಲಿಸಿದ ವಾಹನಗಳ ಮೊರೆಯಲ್ಲಿ ಹೋಗುತ್ತಿದ್ದಾರೆ. ಇದರಿಂದಾಗಿ ಫ್ರೀಡಂ ಪಾರ್ಕ್‌ ಸುತ್ತಮುತ್ತಲೂ ದುರ್ವಾಸನೆಯಿಂದ ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು, ಶೌಚಾಲಯಗಳ ಸಮಸ್ಯೆ ಮಾತ್ರವಲ್ಲದೇ, ವಿದ್ಯುತ್‌ ಸಮಸ್ಯೆಯೂ ಇಲ್ಲಿ ಕಾಡುತ್ತಿದೆ.

ಬೆಂಗಳೂರು ಸುತ್ತಮುತ್ತ ಮಾತ್ರವಲ್ಲದೇ, ರಾಜ್ಯಾದ್ಯಂತ ಜನರು ಪ್ರತಿಭಟನೆಗೆ ಬರುತ್ತಾರೆ. ಕೆಲವು ಧರಣಿಗಳು ಅನಿರ್ದಿಷ್ಟಾವಧಿಯಾಗಿದ್ದು, ರಾತ್ರಿ ಸಮಯ ಸ್ವಾತಂತ್ರ್ಯ ಉದ್ಯಾನದಲ್ಲೇ ಉಳಿದುಕೊಳ್ಳುತ್ತಾರೆ. ಇಲ್ಲಿ ಸರಿಯಾಗಿ ವಿದ್ಯುತ್‌ ಸೌಲಭ್ಯವಿಲ್ಲದೇ, ಕತ್ತಲಲ್ಲಿಯೇ ಇರುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕಳ್ಳತನ-ದರೋಡೆ ಮಾಡುವವರು ಒಂದಡೆಯಾದರೆ, ಮತ್ತೂಂದೆಡೆ ಮದ್ಯ ಸೇವಿಸಿ ಬರುತ್ತಾರೆ. ಈ ಎಲ್ಲಾ ಕಾರಣಗಳಿಂದಾಗಿ ಮಹಿಳೆ ಯರಿಗೆ ಸರಿಯಾದ ಸುರಕ್ಷತೆ ಇಲ್ಲದಂತಾಗಿದೆ.

ಎಲ್ಲೆಂದರಲ್ಲಿ ಪ್ಲಾಸ್ಟಿಕ್‌ ಬಾಟಲಿಗಳು : ಪ್ರತಿಭಟನಾಕಾರರಿಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ, ಕೆಲವು ಮನೆಯಿಂದಲೇ ಬಾಟಲಿಗಳಲ್ಲಿ ನೀರು ತೆಗೆದುಕೊಂಡು ಬರುತ್ತಾರೆ. ಇನ್ನೂ ಕೆಲವರು ಅಲ್ಲೇ ನೀರಿನ ಬಾಟಲಿಗಳನ್ನು ಖರೀದಿಸುತ್ತಾರೆ. ಒಬ್ಬರು ದಿನಕ್ಕೆ ಕನಿಷ್ಠ 2 ನೀರಿನ ಬಾಟಲಿಗಳನ್ನು ಖರೀದಿಸಿದರೂ, ಸಾವಿರಾರು ಸಂಖ್ಯೆಯಲ್ಲಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಬಿಸಾಡುತ್ತಾರೆ. ಜತೆಗೆ ಊಟ ಮಾಡಿದ ಫ್ಲೇಟ್‌, ಪಾರ್ಸೆಲ್‌ ತಂದ ಕವರ್‌ ಹೀಗೆ ವಿವಿಧ ರೀತಿಯ ಪ್ಲಾಸ್ಟಿಕ್‌ ತ್ಯಾಜ್ಯದ ಗುಡ್ಡ ನಿರ್ಮಾಣವಾಗುತ್ತದೆ.

ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಮಹಿಳೆಯರು ಸೇರಿದ್ದು, ಇವರಲ್ಲಿ ಕೆಲವರು ಮಕ್ಕಳನ್ನು ಕರೆದುಕೊಂಡು ಬಂದಿದ್ದಾರೆ. ಇನ್ನೂ ಅನೇಕರಿಗೆ ಬಿ.ಪಿ. ಶುಗರ್‌ ಇರುವ ಕಾರಣ ಪದೇ ಪದೆ ಶೌಚಾಲಯಕ್ಕೆ ಹೋಗುತ್ತಾರೆ. ಆದರೆ, ಇಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆಯಿಲ್ಲದೇ, ಅನಿವಾರ್ಯದಿಂದಾಗಿ ಹೊರಗಡೆ ಹೋಗುವ ಪರಿಸ್ಥಿತಿಯಿದೆ. ವರಲಕ್ಷ್ಮೀ, ರಾಜ್ಯ ಘಟಕ ಅಧ್ಯಕ್ಷೆ, ಸಿಐಟಿಯು

ರಾಜ್ಯದ ಮೂಲೆ- ಮೂಲೆಗಳಿಂದ ಹೋರಾಟ ಮಾಡಲು ಫ್ರೀಡಂ ಪಾರ್ಕಿಗೆ ಜನ ಬರುತ್ತಾರೆ. ಆದರೆ, ಇಲ್ಲಿ ಕನಿಷ್ಠ ಸೌಲಭ್ಯ ಹಾಗೂ ಸ್ವತ್ಛತೆಯಿಲ್ಲದ ಕಾರಣ ಅದೆಷ್ಟೋ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಕುರುಬೂರು ಶಾಂತಕುಮಾರ್‌, ಅಧ್ಯಕ್ಷರು, ರಾಜ್ಯ ರೈತ ಸಂಘ

ಫ್ರೀಡಂ ಪಾರ್ಕ್‌ಬಳಿಯಲ್ಲಿ ಕಾರು ಪಾರ್ಕಿಂಗ್‌ಗೆ ಸುವ್ಯವಸ್ಥೆಯನ್ನುಕಲ್ಪಿಸಿ, ಅಲ್ಲಿಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತುಷಾರ್‌ಗಿರಿನಾಥ್‌, ಬಿಬಿಎಂಪಿ ಆಯುಕ್ತರು

ಭಾರತಿ ಸಜ್ಜನ್‌

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.