ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತಾ ತಂಡದ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
Team Udayavani, Feb 18, 2023, 11:43 AM IST
ಬೆಂಗಳೂರು: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ಗೆ ದಿನಗಣನೆ ಆರಂಭವಾಗಿದೆ. ವಾರದ ಹಿಂದೆ ನಡೆದ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಉತ್ತಮ ತಂಡವನ್ನೇ ಖರೀದಿ ಮಾಡಿದೆ. ಉತ್ತಮ ದೇಶಿಯ ಮತ್ತು ವಿದೇಶಿ ಆಟಗಾರರನ್ನು ಖರೀದಿಸಿದ ಆರ್ಸಿಬಿ ಮೊದಲ ಕೂಟಕ್ಕೆ ಸಿದ್ದವಾಗಿದೆ.
ಇದೀಗ ತಂಡದ ನಾಯಕಿ ನೇಮಕವಾಗಿದೆ. ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧನಾ ಅವರು ಆರ್ ಸಿಬಿ ವನಿತಾ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಆರ್ ಸಿಬಿ ಪುರುಷರ ತಂಡದ ನಾಯಕ ಫಾಪ್ ಡುಪ್ಲೆಸಿಸ್ ಅವರು ವಿಡಿಯೋ ಮೂಲಕ ಆರ್ ಸಿಬಿ ವನಿತಾ ನಾಯಕಿಯ ಹೆಸರನ್ನು ಅನಾವರಣ ಮಾಡಿದರು.
“ಒಬ್ಬ ನಂ. 18 ರಿಂದ ಇನ್ನೊಂದಕ್ಕೆ, ಒಬ್ಬ ನಾಯಕನಿಂದ ಇನ್ನೊಂದಕ್ಕೆ, ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಮಹಿಳಾ ಪ್ರೀಮಿಯರ್ ಲೀಗ್ ಗೆ ಆರ್ಸಿಬಿಯ ನಾಯಕಿಯಾಗಿ ಸ್ಮೃತಿ ಮಂಧನಾ ಅವರನ್ನು ಘೋಷಿಸುತ್ತಾರೆ” ಎಂದು ಫ್ರಾಂಚೈಸ್ ಟ್ವಿಟರ್ ನಲ್ಲಿ ಬರೆದಿದೆ.
“ನಮ್ಮ ಮಹಿಳಾ ನಾಯಕಿ ಆರ್ ಸಿಬಿಯನ್ನು ಮುನ್ನಡೆಸುವ ಎಲ್ಲಾ ಗುಣಗಳನ್ನು ಹೊಂದಿದ್ದಾರೆ ಎಂದು ನನಗೆ ತುಂಬಾ ವಿಶ್ವಾಸವಿದೆ. ಆಲ್ ದಿ ವೆರಿ ಬೆಸ್ಟ್ ಸ್ಮೃತಿ ಮಂಧನಾ. ಪಂದ್ಯಗಳಲ್ಲಿ ನಿಮ್ಮನ್ನು ಭೇಟಿಯಾಗೋಣ” ಎಂದು ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹೇಳಿದರು.
ನೂತನ ನಾಯಕಿ ಮಂದನಾ ಅವರೂ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, “ನನಗೆ ಈ ಅದ್ಭುತ ಅವಕಾಶವನ್ನು ನೀಡಿದ ಆರ್ ಸಿಬಿ ಫ್ರಾಂಚೈಸಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅಭಿಮಾನಿಗಳಿಂದ ಎಲ್ಲಾ ಪ್ರೀತಿ ಮತ್ತು ಬೆಂಬಲವನ್ನು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ, ಆರ್ ಸಿಬಿ ಅಭಿಮಾನಿಗಳು ವಿಶ್ವದ ಅತ್ಯುತ್ತಮರು ಎಂದು ನಾನು ಕೇಳಿದ್ದೇನೆ ಮತ್ತು ಡಬ್ಲ್ಯುಪಿಎಲ್ ನಲ್ಲಿ ಆರ್ಸಿಬಿಯನ್ನು ಯಶಸ್ಸಿನತ್ತ ಮುನ್ನಡೆಸಲು ನಾನು ಪೂರ್ಣ ಪ್ರಯತ್ನ ಮಾಡುವುದಾಗಿ ಭರವಸೆ ನೀಡುತ್ತೇನೆ ಎಂದು ಅವರು ಹೇಳಿದರು.
From one No. 18 to another, from one skipper to another, Virat Kohli and Faf du Plessis announce RCB’s captain for the Women’s Premier League – Smriti Mandhana. #PlayBold #WPL2023 #CaptainSmriti @mandhana_smriti pic.twitter.com/sqmKnJePPu
— Royal Challengers Bangalore (@RCBTweets) February 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.