![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Feb 18, 2023, 3:54 PM IST
ಮುಂಬಯಿ : ಪಕ್ಷದ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಕದ್ದಿದ್ದಾರೆ ಮತ್ತು ಕಳ್ಳನಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಕಿಡಿ ಕಾರಿದ್ದಾರೆ.
ಪಕ್ಷದ ನಾಯಕರ ಸಭೆಯ ಅಧ್ಯಕ್ಷತೆ ವಹಿಸುವ ಮೊದಲು ಇಲ್ಲಿನ ಬಾಂದ್ರಾದಲ್ಲಿರುವ ತಮ್ಮ ನಿವಾಸ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ , “ಬಿಲ್ಲು ಮತ್ತು ಬಾಣವನ್ನು ಕಳವು ಮಾಡಲಾಗಿದೆ. ಕಳ್ಳನಿಗೆ ತಕ್ಕ ಪಾಠ ಕಲಿಸಬೇಕು. ಆತ ಸಿಕ್ಕಿಬಿದ್ದಿದ್ದಾನೆ. ನಾನು ಕಳ್ಳನಿಗೆ ಬಿಲ್ಲು ಮತ್ತು ಬಾಣದೊಂದಿಗೆ ಮೈದಾನಕ್ಕೆ ಬರುವಂತೆ ಸವಾಲು ಹಾಕುತ್ತೇನೆ ಮತ್ತು ನಾವು ಅದನ್ನು ಉರಿಯುತ್ತಿರುವ ಪಂಜಿನಿಂದ ಎದುರಿಸುತ್ತೇವೆ ಎಂದು ಠಾಕ್ರೆ ಹೇಳಿದರು.
ಠಾಕ್ರೆಗೆ ಅವರಿಗೆ ದೊಡ್ಡ ಹೊಡೆತ ಎಂಬಂತೆ ಚುನಾವಣಾ ಆಯೋಗವು ಶುಕ್ರವಾರ ‘ಶಿವಸೇನೆ’ ಮತ್ತು ಅದರ ಚುನಾವಣಾ ಚಿಹ್ನೆ ‘ಬಿಲ್ಲು ಮತ್ತು ಬಾಣ’ವನ್ನು ಸಿಎಂ ಶಿಂಧೆ ನೇತೃತ್ವದ ಗುಂಪಿಗೆ ಹಂಚಿಕೆ ಮಾಡಿದೆ.1966ರಲ್ಲಿ ಬಾಳ್ ಠಾಕ್ರೆ ಅವರು ಮಣ್ಣಿನ ಪುತ್ರರಿಗೆ ನ್ಯಾಯ ಎಂಬ ತತ್ವದಡಿ ಸ್ಥಾಪಿಸಿದ ಪಕ್ಷದ ಮೇಲೆ ಠಾಕ್ರೆ ಕುಟುಂಬದ ಹಿಡಿತ ತಪ್ಪಿದ್ದು ಇದೇ ಮೊದಲ ಬಾರಿಯಾಗಿದೆ.
ಹೆಚ್ಚಿನ ಸಂಖ್ಯೆಯ ಠಾಕ್ರೆ ನಿಷ್ಠಾವಂತರು ‘ಮಾತೋಶ್ರೀ’ ಹೊರಗೆ ಜಮಾಯಿಸಿ ಶಕ್ತಿ ಪ್ರದರ್ಶನದಲ್ಲಿ ಏಕನಾಥ್ ಶಿಂಧೆ ವಿರುದ್ಧ ಮತ್ತು ಠಾಕ್ರೆ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.