ಎಸ್.ಕೆ.ಭಗವಾನ್ ನಿಧನ: ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಸಂತಾಪ


Team Udayavani, Feb 20, 2023, 11:39 AM IST

ಎಸ್.ಕೆ.ಭಗವಾನ್ ನಿಧನ: ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಸಂತಾಪ

ಬೆಂಗಳೂರು:  ಕನ್ನಡದ ಮೇರು ಪ್ರತಿಭೆ ಎಸ್.ಕೆ.ಭಗವಾನ್ ಅವರ ನಿಧನಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳೆತೆರೆಯನ್ನು ಶ್ರೀಮಂತಗೊಳಿಸಿದ್ದ ಕನ್ನಡದ ಹಿರಿಮೆಯೂ ಆಗಿದ್ದ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ (ಎಸ್.ಕೆ.ಭಗವಾನ್) ಅವರ ನಿಧನ ಅತ್ಯಂತ ಬೇಸರ ತರಿಸಿದೆ.

ನನ್ನ ಆತ್ಮೀಯರೂ ಆಗಿದ್ದ ಇವರನ್ನು ನಾನಾ ಸಂದರ್ಭಗಳಲ್ಲಿ ಭೇಟಿಯಾಗುವ ಅವಕಾಶ ಹತ್ತಾರು ಬಾರಿ ಒದಗಿ ಬಂದಿತ್ತು. 90 ವರ್ಷ ವಯಸ್ಸಿನ ಇವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ಕನ್ನಡ ರಂಗಭೂಮಿ ಮೂಲಕ ಸಿನಿಮಾ ರಂಗ ಪ್ರವೇಶಿಸಿ ಬೆಳ್ಳಿ ಪರದೆಯನ್ನು ಶ್ರೀಮಂತಗೊಳಿಸಿದ ಭಗವಾನ್ ಅವರು ತಮ್ಮ 65 ವರ್ಷಗಳ ಸುದೀರ್ಘ ಸಿನಿಮಾ ಸಾಹಸಗಳಲ್ಲಿ 28ಕ್ಕೂ ಹೆಚ್ಚು ಕನ್ನಡ ಕಾದಂಬರಿಗಳನ್ನು ಬೆಳ್ಳಿ ಪರದೆಗೆ ತಂದ ಕೀರ್ತಿ ಹೊಂದಿದ್ದಾರೆ.

ಭಗವಾನ್ ನಿರ್ದೇಶನದಲ್ಲಿ ಅರಳಿದ “ಕಸ್ತೂರಿ ನಿವಾಸ, ಸಂಧ್ಯಾರಾಗ, ಬಯಲುದಾರಿ, ಹೊಸ ಬೆಳಕು, ಬೆಂಕಿಯ ಬಲೆ…” ಮುಂತಾದ ಹಲವು ಸಿನಿಮಾಗಳು ಈಗಲೂ ನನ್ನ ನೆನಪಿನಲ್ಲಿ ಉಳಿದಿವೆ. ಸಿನಿಮಾ ನಿರ್ದೇಶನಕ್ಕೆ ಪೂರ್ಣವಿರಾಮ ಹಾಕಿದ ಬಳಿಕ “ಆದರ್ಶ ಸಿನಿಮಾ ಇನ್ಸ್ಟಿಟ್ಯೂಟ್”ನ ಪ್ರಾಂಶುಪಾಲರಾಗಿ ಇವರು ತಮ್ಮ ತಿಳಿವಳಿಕೆ, ಜ್ಞಾನ ಮತ್ತು ಅನುಭವವನ್ನು ಹೊಸ ತಲೆಮಾರಿನ ಕಲಾಸಕ್ತರಿಗೂ ವರ್ಗಾಯಿಸುವ ಮೂಲಕ ಕನ್ನಡದ ಜ್ಞಾನವನ್ನು ಹೆಚ್ಚಿಸಿದ್ದಾರೆ ಎಂದು ಪ್ರಾರ್ಥಿಸುತ್ತೇನೆ.

ತಮ್ಮ ಕಲಾ ಶ್ರೀಮಂತಿಕೆಯ ಕಾರಣಕ್ಕೆ ಭಗವಾನ್ ಅವರು ಕನ್ನಡ ಭಾಷೆ ಇರುವವರೆಗೂ ಕನ್ನಡ ಮಣ್ಣಿನಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎಂದು ಹೇಳುತ್ತಾ ಹಿರಿಯ ಪ್ರತಿಭೆಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಸಂತಾಪ:  

ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ  ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು. ಓಂ ಶಾಂತಿಃ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.