ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ: ಕಾಲೇಜು ವಿರುದ್ಧ ಧರಣಿ


Team Udayavani, Feb 21, 2023, 8:48 PM IST

ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ: ಕಾಲೇಜು ವಿರುದ್ಧ ಧರಣಿ

ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದ್ದಾರೆ. ಪಿಯುಸಿ ಪ್ರಥಮ ವರ್ಷದ ಮಕ್ಕಳ ಹಾಜರಾತಿ ನೆಪವೊಡ್ಡಿ 72 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿಷೇಧಿಸಲಾಗಿದೆ. ಪ್ರತಿವರ್ಷ ಇದನ್ನು ಮುಂದುವರೆಸಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ಬೆಳಗಾವಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಬಸವರಾಜ ತಳವಾರ ಆಕ್ರೋಶಿದರು.

ಇಲ್ಲಿನ ಜಿ.ಜಿ. ಚೋಪ್ರಾ ಕಾಲೇಜಿನಲ್ಲಿ ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿರಾಕರಿಸಿದ್ದನ್ನು ಖಂಡಿಸಿ ದಲಿತ ಮುಖಂಡರು ಹಾಗೂ ವಿದ್ಯಾರ್ಥಿಗಳಿಂದ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಹಾಜರಾತಿ ಕುರಿತು ಕಾಲೇಜಿನಲ್ಲಿ ಪಾಲಕರ ಸಭೆ ನಡೆಸುವದಿಲ್ಲ. ಮಾಹಿತಿ ನೀಡದೇ ಮನ ಬಂದಂತೆ ವರ್ತಿಸುತ್ತಿದ್ದಾರೆ. ಮಕ್ಕಳು ಹಾಜರಾಗದಿದ್ದಲ್ಲಿ ಪಾಲಕರಿಗೆ ಮಾಹಿತಿ ನೀಡಬೇಕಿತ್ತು ಆದರೆ ಕಾಲೇಜಿನಿಂದ ಪಾಲಕರನ್ನು ಸಂಪರ್ಕಿಸುವ ಪ್ರಯತ್ನ ನಡೆಸದೇ ಏಕಾಏಕಿ ಪರೀಕ್ಷೆಗಳಿಂದ ಬಹಿಷ್ಕರಿಸಿದ್ದಾರೆ. ಇದೀಗ ವಿದ್ಯಾರ್ಥಿಗಳ ಭವಿಷ್ಯದ ಗತಿ ಏನು? ಎಂದು ಪ್ರಾಚಾರ್ಯ ಹಾಗೂ ಸಿಬ್ಬಂದಿಗಳಿಗೆ ಪ್ರಶ್ನಿಸಿದ ಅವರು, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರೇ ಈ ರೀತಿ ಬಹಿಷ್ಕರಿಸಿದರೇ ಮಕ್ಕಳ ಪಾಡೇನು?. ಮಾನವೀಯ ದೃಷ್ಠಿಯಿಂದಲಾದರೂ ಅವಕಾಶ ನೀಡಬೇಕಿತ್ತು ಎಂದು ಕಾಲೇಜಿನ ಅಶಿಸ್ತಿನ ವಿರುದ್ಧ ಆಕ್ರೋಶ ಹೊರಹಾಕಿದರು.

ಸಂಘಟನೆ ಪ್ರಮುಖ ಮಹಾದೇವ ಬಡ್ಲಿ, ‘ಕಾಲೇಜಿನ ಸಿಬ್ಬಂದಿಗಳ ಧೋರಣೆ ಖಂಡನೀಯ. ಗೈರು ಕೇವಲ ನೆಪ ಮಾತ್ರ. ಸೂಕ್ತ ದಾಖಲೆ ನೀಡಿ. ಇಲ್ಲದಿದ್ದರೆ ಪ್ರಕರಣ ದಾಖಲಿಸುವದು ನಿಶ್ಚಿತ. ಅವಶ್ಯಕತೆಗೆ ತಕ್ಕಂತೆ ಪಠ್ಯ ಪೂರೈಸಿಲ್ಲ. ಉಪನ್ಯಾಸಕರು ಸಮರ್ಪಕ ಪಾಠ ಬೋಧಿಸಿಲ್ಲ. ಉಪನ್ಯಾಸಕರೇ ಹಾಜರಾತಿ ತೆಗೆದುಕೊಂಡಿಲ್ಲವೆಂದು ಮಕ್ಕಳು ನಿಮ್ಮ ಬಗ್ಗೆ ಆಪಾದಿಸುತ್ತಾರೆ. ನಿಮ್ಮ ತಪ್ಪು ಸರಿಪಡಿಸಲು ಇವರ ಬಹಿಷ್ಕಾರ ಸರಿಯೇ ಎಂದು ತಿವಿದ ಅವರು, ನೀವು ಸರಿಯಾಗಿ ಪಾಠ ಮಾಡದೇ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದ್ದೀರಿ. ಅನುತ್ತೀರ್ಣರಾದ ಮಕ್ಕಳ ಸಹಿತ ಎಲ್ಲದಕ್ಕೂ ಉತ್ತರ ನೀಡಿರೆಂದು ಆಗ್ರಹಿಸಿದರು’.

ಕಾಲೇಜು ಆರಂಭದಿಂದ ನಮಗೆ ಪುಸ್ತಕ ನೀಡಿಲ್ಲ. ನೀಡಿದರೂ ರೂ. 200 ವಸೂಲಿ ಮಾಡಿದ್ದಾರೆ. ಬಡಮಕ್ಕಳ ಅಭ್ಯಾಸ ಕಷ್ಟಕರವಾಗಿದೆ ಎಂದು ಸೇರಿದ ಮಕ್ಕಳು ತಿಳಿಸಿದರು.
ಪ್ರತಿಭಟನೆ ವೇಳೆ ಬೆಳಗಾವಿಯ ಡಿಡಿಪಿಯು ಎಮ್.ಎಮ್. ಕಾಂಬಳೆರನ್ನು ಸಂಪರ್ಕಿಸಿದಾಗ, ಪ್ರಾಚಾರ್ಯರ ಬೇಜವಬ್ದಾರಿಯಿಂದ ಕೆಲವರು ಪರೀಕ್ಷೆ ಎದುರಿಸಿಲ್ಲ. ಮುಂಬರುವ ಪರೀಕ್ಷೆಯಲ್ಲಿ ಅಂಥವರಿಗೆ ಅವಕಾಶ ಕಲ್ಪಿಸಲಾಗುವುದು. ಬುಧವಾರ ಸ್ವತಃ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ನೋಟಿಸ್ ನೀಡಿ ಕ್ರಮ ಜರುಗಿಸಲಾಗುವದು ಎಂದರು.
ಕಾಲೇಜ ಪ್ರಾಂಶುಪಾಲ ವ್ಹಿ.ವ್ಹಿ.ಕೋಳೇಕರ, ಮಕ್ಕಳ ಹಾಜರಾತಿಯಲ್ಲಿ ಕೊರತೆಯಿದೆ. ಕಾಲೇಜ ಅವಧಿಯಲ್ಲಿ ಹೊರಗೆ ಸುತ್ತಾಡುತ್ತಾರೆ. ಪಾಠದ ಮೊದಲ ಅಧ್ಯಾಯವೇ ಇವರಿಗೆ ಗೊತ್ತಿಲ್ಲ. ನಿಯಮಾನುಸಾರ ಪರೀಕ್ಷೆಗೆ ಅನುಮತಿ ನಿರಾಕರಿಸಿದೆಂದು ಸ್ಪಷ್ಟಪಡಿಸಿದರು.

ಈ ವೇಳೆ ನಾಗಪ್ಪ ಬಡೆಪ್ಪನವರ, ಗದಿಗೆಪ್ಪ ದೊಡಮನಿ, ಶಿವಾನಂದ ಮಾದರ, ಬರಮಪ್ಪ ಈಟಿ, ಸುರೇಶ ಹಾಸಟ್ಟಿ ಹಾಗೂ ಪ್ರಮುಖರು ಇದ್ದರು.

ಇದನ್ನೂ ಓದಿ: 24.93 ಲಕ್ಷ ಮೌಲ್ಯದ ಅಡುಗೆ ಎಣ್ಣೆ ಕಳ್ಳತನ ಪ್ರಕರಣ: ಮೂರೇ ದಿನದಲ್ಲಿ ಕಳ್ಳರು ಅಂದರ್

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.