ಕಾಳು ಮೆಣಸು ಕೊಯ್ಯಲು ಇಟ್ಟ ಅಲ್ಯುಮಿನಿಯಂ ಏಣಿಗೆ ವಿದ್ಯುತ್‌ ಸ್ಪರ್ಶ: ಇಬ್ಬರ ಸಾವು


Team Udayavani, Feb 23, 2023, 6:45 AM IST

ಕಾಳು ಮೆಣಸು ಕೊಯ್ಯಲು ಇಟ್ಟ ಅಲ್ಯುಮಿನಿಯಂ ಏಣಿಗೆ ವಿದ್ಯುತ್‌ ಸ್ಪರ್ಶ: ಇಬ್ಬರ ಸಾವು

ಮಡಿಕೇರಿ: ವಿದ್ಯುತ್‌ ತಂತಿಗೆ ಅಲ್ಯುಮೀನಿಯಂ ಏಣಿ ಸ್ಪರ್ಶಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಒಂದೇ ದಿನ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹಾಗೂ ಹುದಿಕೇರಿ ಗ್ರಾಮದಲ್ಲಿ ಸಂಭವಿಸಿದೆ.

ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ಅಬ್ರುದ್ದೀನ್‌ (31) ಮತ್ತು ಹುದಿಕೇರಿ ಹೋಬಳಿಯ ಹೈಸೊಡ್ಕೂರು ಗ್ರಾಮದಲ್ಲಿ ಇಸ್ಮಾಯಿಲ್‌ ಹುಸೇನ್‌ (33) ಮೃತಪಟ್ಟವರು. ಇಬ್ಬರೂ ಅಸ್ಸಾಂ ಮೂಲದವರು.

ನಾಲ್ಕೇರಿ ಗ್ರಾಮದ ತೋಟವೊಂದರಲ್ಲಿ ಬೆಳಗ್ಗೆ 8.30ರ ವೇಳೆಗೆ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ 11 ಕೆ.ವಿ. ವಿದ್ಯುತ್‌ ತಂತಿಗೆ ಏಣಿ ತಗುಲಿ ಅಬ್ರುದ್ದೀನ್‌ ಆಘಾತಕ್ಕೊಳಗಾದರು. ಆಸ್ಪತ್ರೆಗೆ ಸಾಗಿಸುವ ಸಂದರ್ಭ ಅವರು ಮೃತಪಟ್ಟರು. ಸ್ಥಳಕ್ಕೆ ಕುಟ್ಟ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ‌ ರವಿಶಂಕರ್‌ ಹಾಗೂ ಸಿಬಂದಿ ಭೇಟಿ ನೀಡಿ ಮಹಜರು ನಡೆಸಿದರು. ಕುಟ್ಟ ಪೊಲೀಸ್‌ ಪ್ರಕರಣ ದಾಖಲಾಗಿದೆ.

ಮತ್ತೂಂದು ಪ್ರಕರಣ
ಹುದಿಕೇರಿ ಹೋಬಳಿಯ ಹೈಸೊಡ್ಲುರು ಗ್ರಾಮದ ಕಾಫಿ ತೋಟದಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಇಸ್ಮಾಯಿಲ್‌ ಹುಸೇನ್‌ (37) ಅವರಿದ್ದ ಏಣಿ ವಿದ್ಯುತ್‌ ತಂತಿಗೆ ಏಣಿ ಸ್ಪರ್ಶಿಸಿ ಆಘಾತಕ್ಕೊಳಗಾದರು. ಕೂಡಲೇ ಗೋಣಿ ಕೊಪ್ಪಲಿನ ಆಸ್ಪತ್ರೆಗೆ ಸಾಗಿಸಿದರೂ ದಾರಿಮಧ್ಯೆ ಮೃತಪಟ್ಟರು. ಸ್ಥಳಕ್ಕೆ ಶ್ರೀಮಂಗಲ ಪೊಲೀಸ್‌ ಠಾಣಾಧಿಕಾರಿ ವಿರೂಪಾಕ್ಷ ಮತ್ತು ಸಿಬಂದಿ ಭೇಟಿ ನೀಡಿದ್ದಾರೆ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರಕ್ಕೆ ಆಗ್ರಹ
ಕುಟ್ಟ ಸಮುದಾಯ ಆರೋಗ್ಯ ಕೇಂದ್ರದ ಬಳಿಕ ಕೊಡಗು ರೈತ ಸಂಘದ ಪ್ರಮುಖರು ಜಮಾಯಿಸಿ ಚೆಸ್ಕಾಂ ಇಲಾಖೆಯು ಮೃತ ಕಾರ್ಮಿಕರ ಅಂತ್ಯಸಂಸ್ಕಾರಕ್ಕೆ ಮಾನವೀಯ ಪರಿಹಾರ ನೀಡಬೇಕೆಂದು ಅಧಿಕಾರಿಗಳನ್ನು ಆಗ್ರಹಿಸಿದರು. ಎಲ್ಲ ಹಳೆಯ ವಿದ್ಯುತ್‌ ಕಂಬಗಳನ್ನು ಬದಲಾಯಿಸಬೇಕು. ತೋಟಗಳ ಒಳಗೆ ಕೆಳಮಟ್ಟದಲ್ಲಿ ಹಾದು ಹೋಗಿರುವ ಲೈನ್‌ಗಳನ್ನು ದುರಸ್ತಿ ಮಾಡಬೇಕು ಎಂದು ಕೊಡಗು ರೈತ ಸಂಘದ ಗೌರವಾಧ್ಯಕ್ಷ ಚಿಮ್ಮಂಗಡ ಗಣೇಶ್‌ ಆಗ್ರಹಿಸಿದರು.

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kasaragod: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kumbale-Student

Kumbale: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು

2

Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.