‌ಕುಂದಾಪುರ: ಅತಂತ್ರವಾಗಿಯೇ ಉಳಿದ ಸೇನಾಪುರ ಗ್ರಾಮ

ಸೇನಾಪುರ ಗ್ರಾಮವನ್ನು ಸ್ವತಂತ್ರ ಗ್ರಾ.ಪಂ. ಆಗಿ ಘೋಷಿಸಬೇಕು

Team Udayavani, Feb 24, 2023, 11:43 AM IST

‌ಕುಂದಾಪುರ: ಅತಂತ್ರವಾಗಿಯೇ ಉಳಿದ ಸೇನಾಪುರ ಗ್ರಾಮ

ಕುಂದಾಪುರ: ಸರಿ ಸುಮಾರು 3 ವರ್ಷಗಳ ಹಿಂದೆ ನಾಡ ಗ್ರಾ.ಪಂ.ನಿಂದ ಬೇರ್ಪಟ್ಟು, ಹೊಸಾಡು ಗ್ರಾ.ಪಂ.ಗೆ ಸೇರಿಸಿದಾಗ ಪ್ರತ್ಯೇಕ ಗ್ರಾ.ಪಂ.ಗೆ ಬೇಡಿಕೆಯಿಟ್ಟ ಸೇನಾಪುರ ಗ್ರಾಮದ ಬಗ್ಗೆ ಸರಕಾರ ಯಾವುದೇ ನಿರ್ಧಾರಕ್ಕೆ ಬಾರದ ಕಾರಣ, ಇನ್ನೂ ಅತಂತ್ರವಾಗಿಯೇ ಉಳಿದಿದೆ.

ಅತ್ತ ಸ್ವತಂತ್ರವೂ ಇಲ್ಲದೇ, ಗ್ರಾಮದ ಅಭಿವೃದ್ಧಿಗೂ ಮನ್ನಣೆ ಸಿಗದೇ, ಅತಂತ್ರ ಗ್ರಾಮವಾಗಿಯೇ ಉಳಿದಿದೆ. ಗ್ರಾಮಸ್ಥರ ಬೇಡಿಕೆಯನ್ನು ಯಾರೂ ಕೇಳುವವರೇ ಇಲ್ಲವಾಗಿದೆ. ಕುಡಿಯುವ ನೀರಿನ ಸಮಸ್ಯೆ ತಲೆದೋರಿದರೆ ಬಗೆಹರಿಸುವವರೇ ಇಲ್ಲವಾಗಿದೆ. ಇನ್ನೂ ಸರಕಾರದಿಂದ ಸಿಗಬೇಕಿರುವ ಕೆಲವೊಂದು ಸವಲತ್ತುಗಳು ಗ್ರಾಮಸ್ಥರಿಗೆ ಸಿಗುತ್ತಿಲ್ಲ ಎನ್ನುವ ಆರೋಪ ಗ್ರಾಮಸ್ಥರದ್ದಾಗಿದೆ.

ನಾಡ ಗ್ರಾ.ಪಂ. ಬೈಂದೂರು ತಾಲೂಕಿಗೆ ಸೇರಿದ್ದರಿಂದ ಸೇನಾಪುರವನ್ನು ಬೇರ್ಪಡಿಸಿ ಕುಂದಾಪುರ ತಾಲೂಕಿನ ಹೊಸಾಡು ಗ್ರಾ.ಪಂ.ಗೆ ಸೇರಿಸಲಾಗಿತ್ತು. ಆದರೆ ಹೊಸಾಡು ಪಂಚಾಯತ್‌ ಕಚೇರಿ ಸೇನಾಪುರದಿಂದ 8-10 ಕಿ.ಮೀ. ದೂರ ಇರುವುದರಿಂದ ಅಲ್ಲಿನ ಗ್ರಾಮಸ್ಥರು ವಿರೋಧಿಸಿದ್ದರು.

ಇದಲ್ಲದೆ 7 ಗ್ರಾ.ಪಂ. ಸದಸ್ಯರಿದ್ದು, 2011ರ ಗಣತಿ ಪ್ರಕಾರ 2,572 ಮತದಾರರಿದ್ದು, 1,651.44 ಎಕರೆ ವಿಸ್ತೀರ್ಣ ಹೊಂದಿರುವ ಸೇನಾಪುರ ಗ್ರಾಮವನ್ನು ಸ್ವತಂತ್ರ ಗ್ರಾ.ಪಂ. ಆಗಿ ಘೋಷಿಸಬೇಕು ಎನ್ನುವುದಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಇದಲ್ಲದೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಗೂ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇನ್ನೂ ಇತ್ಯರ್ಥಗೊಂಡಿಲ್ಲ.

ಸರಕಾರದ ಗಮನಕ್ಕೆ
ಸೇನಾಪುರ ಗ್ರಾಮಸ್ಥರ ಬೇಡಿಕೆಯಂತೆ ಪ್ರತ್ಯೇಕ ಗ್ರಾ.ಪಂ. ರಚಿಸಬೇಕು ಎನ್ನುವುದಾಗಿ ಸ್ವತಃ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಸರಕಾರದ ಮುಂದೆ ಸದ್ಯಕ್ಕೆ ಹೊಸ ಗ್ರಾ.ಪಂ. ರಚನೆ ಪ್ರಸ್ತಾವನೆ ಇಲ್ಲದಿರುವುದರಿಂದ ವಿಳಂಬವಾಗುತ್ತಿದೆ. ಇದಲ್ಲದೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರ. ಕಾರ್ಯದರ್ಶಿಯೊಂದಿಗೂ ನಿರಂತರವಾಗಿ ಮಾತುಕತೆ ನಡೆಸಲಾಗುತ್ತಿದೆ.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.