ಕುಷ್ಟಗಿ: ಸ್ಪರ್ಧಾತ್ಮಕ ಪರೀಕ್ಷೆ; ಪರೀಕ್ಷಾರ್ಥಿಗಳಿಗೆ ಪ್ರತ್ಯೇಕ ಬಸ್ ಸೌಲಭ್ಯ
Team Udayavani, Feb 25, 2023, 11:34 AM IST
ಕುಷ್ಟಗಿ: ಕಲಬುರಗಿ, ಬೀದರ್ ನಲ್ಲಿ ಫೆ. 25 ರಂದು ಆಯೋಜನೆಯಾಗಿದ್ದ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಸ್ ಸೌಲಭ್ಯ ಇಲ್ಲದೇ ಕಂಗಾಲಾದ ಪರೀಕ್ಷಾರ್ಥಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಿದ್ದಾರೆ.
50 ವಿದ್ಯಾರ್ಥಿಗಳು ಕೆಪಿಎಸ್ಸಿ ಪರೀಕ್ಷೆಗೆ ಕಲಬುರಗಿ, ಬೀದರ್ಗೆ ಪ್ರತ್ಯೇಕವಾಗಿ ಹೋಗಬೇಕಿತ್ತು. ಆ ವೇಳೆ ಬಸ್ ಇಲ್ಲದಿರುವ ಹಿನ್ನೆಲೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಲು ಪರೀಕ್ಷಾರ್ಥಿಗಳು ಡಿಪೋ ಮ್ಯಾನೇಜರ್ ಜಡೇಶ ಅವರಲ್ಲಿ ಮನವಿ ಮಾಡಿದ್ದು, ಇದಕ್ಕೆ ಘಟಕದ ವ್ಯವಸ್ಥಾಪಕ ಅಸಹಾಯಕತೆ ವ್ಯಕ್ತಪಡಿಸಿದ್ದರು.
ಶಾಸಕರಿಗೆ ವಾಸ್ತವ ಸ್ಥಿತಿ ಗಮನಕ್ಕೆ ತಂದಿದ್ದು, ಕೂಡಲೇ ಘಟಕದ ವ್ಯವಸ್ಥಾಪಕ ಜಡೇಶ ಅವರನ್ನು ಸಂಪರ್ಕಿಸಿ ಬೀದರ್, ಕಲಬುರಗಿಗೆ ಪ್ರತ್ಯೇಕವಾಗಿ ಎರಡು ಬಸ್ ಗಳನ್ನು ಬಿಡಲು ಸೂಚಿಸಿದ್ದರಿಂದ ಆತಂಕಗೊಂಡಿದ್ದ ಪರೀಕ್ಷಾರ್ಥಿಗಳು ನಿರಾಳರಾಗಿ ಕಲಬುರಗಿಗೆ 30 ಪರೀಕ್ಷಾರ್ಥಿಗಳು, ಬೀದರಗೆ 20 ಪರೀಕ್ಷಾರ್ಥಿಗಳು ಹೆಚ್ಚುವರಿ ಬಸ್ ನಲ್ಲಿ ಪ್ರಯಾಣ ಬೆಳೆಸಿದರು.
ಈ ಕುರಿತು ಘಟಕ ವ್ಯವಸ್ಥಾಪಕ ಜಡೇಶ ಪ್ರತಿಕ್ರಿಯಿಸಿ, ಚಿಕ್ಕೋಡಿ ಹಾಗೂ ರಾಯಚೂರ ಮಾರ್ಗದ ಬಸ್ ಗಳನ್ನು ವಿಚಲನಗೊಳಿಸಿ ಬೀದರ್ ಹಾಗೂ ಕಲಬುರಗಿಗೆ ಬಸ್ ಬಿಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.