ಪ್ರಾಂಶುಪಾಲೆಗೆ ಘೇರಾವ್ : ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಕೇಸು ದಾಖಲು
Team Udayavani, Feb 26, 2023, 5:05 AM IST
ಕಾಸರಗೋಡು: ಇಲ್ಲಿನ ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಎಂ. ರಮಾ ಅವರಿಗೆ ಘೇರಾವ್ ಹಾಕಿ, ಹಲ್ಲೆ ನಡೆಸಿದ ಆರೋಪದಲ್ಲಿ ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಬಿಪಿನ್ರಾಜ್, ಏರಿಯಾ ಕಾರ್ಯದರ್ಶಿ ಇಮಾನ್ವಲ್, ಕಾಸರಗೋಡು ಸರಕಾರಿ ಕಾಲೇಜು ಘಟಕ ಕಾರ್ಯದರ್ಶಿ ವಿಪಿನ್ರಾಜ್, ಅಧ್ಯಕ್ಷ ಅಕ್ಷಯ್, ಪೂಜಾ, ಸ್ನಿಗ್ಧಾ, ಜೋತಿಷ್, ಸುಜನ, ಭಗತ್, ಭರತ್ ಸಹಿತ 60 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾಲೇಜಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲಾಗಿಲ್ಲವೆಂದು ಆರೋಪಿಸಿ ಎಸ್ಎಫ್ಐ ಕಾರ್ಯಕರ್ತರು ಚೇಂಬರ್ಗೆ ನುಗ್ಗಿ ತನಗೆ ಘೇರಾವ್ ಹಾಕಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಮಧ್ಯಾಹ್ನ ಊಟ ಮಾಡಲೆಂದು ಚೇಂಬರ್ನಿಂದ ಹೊರ ಬರುತ್ತಿದ್ದಾಗ ಎಸ್ಎಫ್ಐ ಕಾರ್ಯಕರ್ತರು ತನ್ನನ್ನು ಸುತ್ತುವರಿದು ಹಲ್ಲೆ ನಡೆಸಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಪ್ರಾಂಶುಪಾಲೆ ಎಂ. ರಮಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.