ಕನಸಾಗಿಯೇ ಉಳಿದ ಕಾರ್ಕಳ ರೈಲು ಮಾರ್ಗ

ಆರ್ಥಿಕ ಕಾರಣ ಮುಂದಿಟ್ಟು ಪ್ರಸ್ತಾವನೆ ಕೈಬಿಟ್ಟ ರೈಲ್ವೇ ಮಂಡಳಿ

Team Udayavani, Feb 26, 2023, 7:05 AM IST

ಕನಸಾಗಿಯೇ ಉಳಿದ ಕಾರ್ಕಳ ರೈಲು ಮಾರ್ಗ

ಕಾರ್ಕಳ: ನಂದಿಕೂರು – ಕಾರ್ಕಳ – ಉಜಿರೆ – ಚಾರ್ಮಾಡಿ – ಮೂಡಿಗೆರೆ ನಡುವಿನ 136 ಕಿ. ಮೀ. ಉದ್ದೇಶಿತ ರೈಲು ಮಾರ್ಗ ಆರ್ಥಿಕವಾಗಿ ಕಾರ್ಯ ಸಾಧ್ಯವಲ್ಲ ಎಂದು ರೈಲ್ವೇ ಬೋರ್ಡ್‌ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಈ ಮಾರ್ಗದ ಪ್ರಸ್ತಾವನೆಯನ್ನು ರೈಲ್ವೇ ಮಂಡಳಿ ಕೈ ಬಿಟ್ಟಿದೆ.

ನಂದಿಕೂರು- ಮೂಡಿಗೆರೆ ರೈಲು ಮಾರ್ಗದ ಸರ್ವೇ ವಿವರ, ಅಂದಾಜು ಪಟ್ಟಿ ಸಹಿತ ವಿಸ್ತೃತ ವರದಿಯನ್ನು ರೈಲ್ವೇ ಮಂಡಳಿಯು ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಸಿದೆ. ಕೇಂದ್ರದ ಜತೆಗೆ ರಾಜ್ಯ ಸರಕಾರ ಹಣಕಾಸಿನ ನೆರವು ಒದಗಿಸಿದರಷ್ಟೆ ಈ ಯೋಜನೆ ಸಾಧ್ಯವಾಗಲಿದೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪತ್ರಿಕೆ ಸಂಪರ್ಕಿಸಿದ್ದು, ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ದಶಕಗಳ ಹಿಂದಿನ ಬೇಡಿಕೆ
ಪಡುಬಿದ್ರಿ- ಕಾರ್ಕಳ -ಉಜಿರೆ – ಧರ್ಮಸ್ಥಳ -ನೆಟ್ಟಣ ಹಾಗೂ ನಂದಿಕೂರು – ಚಾರ್ಮಾಡಿ ನಡುವಿನ 2 ಪರ್ಯಾಯ ರೈಲು ಮಾರ್ಗಗಳ ಬೇಡಿಕೆ ದಶಕದ ಹಿಂದಿ ನದ್ದು. ಪಡುಬಿದ್ರಿ-ನೆಟ್ಟಣದ 120 ಕಿ.ಮೀ. ಉದ್ದದ ಮಾರ್ಗದ ಸರ್ವೇ ನಡೆದಿದೆ.

ಆದರೂ ಈ ಕುರಿತು ಯಾವುದೇ ಪ್ರಸ್ತಾವನೆಗಳು ರೈಲ್ವೇ ಇಲಾಖೆ ಮಟ್ಟದಲ್ಲಿ ಇದುವರೆಗೂ ಮುನ್ನೆಲೆಗೆ ಬಂದಿಲ್ಲ
ನಂದಿಕೂರು – ಮೂಡಿಗೆರೆ ಮಧ್ಯೆ 135 ಕಿ.ಮೀ. ಹೊಸ ಪರ್ಯಾಯ ರೈಲು ಮಾರ್ಗದ ಸರ್ವೆ ನಡೆಸುವಂತೆ ಉಡುಪಿ ರೈಲ್ವೇ ಯಾತ್ರಿಕರ ಸಂಘ ಸಹಿತ ರೈಲು ಪ್ರಯಾಣಿಕರು ದಶಕದಿಂದಲೂ ಆಗ್ರಹಿಸುತ್ತಿದ್ದಾರೆ. ಸರ್ವೇ ಬಳಿಕ ಸ್ವಲ್ಪ ಭರವಸೆ ಮೂಡಿತ್ತಾದರೂ ಈಗ ನಿರಾಶೆಯಾಗಿದೆ.

2010ರ ರೈಲ್ವೇ ಬಜೆಟ್‌ನಲ್ಲಿ ಈ ಮಾರ್ಗದ ಸಮೀಕ್ಷೆ ಸಹಿತ ಎರಡು ಯೋಜನೆಗಳಿಗೆ ಆಗಿನ ರೈಲ್ವೇ ಮಂತ್ರಿ ಮಮತಾ ಬ್ಯಾನರ್ಜಿ ಅನು ಮೋದನೆ ನೀಡಿದ್ದರು. ಬೈಂದೂರು – ಹೆಬ್ರಿ – ಕಾರ್ಕಳ-ಮೂಡುಬಿದಿರೆ – ನೆಟ್ಟಣ ಕೂಡ ಈ ಯೋಜನೆಯಲ್ಲಿ ಒಳಗೊಂಡಿತ್ತು. ಅರಣ್ಯ ಇಲಾಖೆ ಅಡ್ಡಿಪಡಿಸಿದ್ದರಿಂದ ಇದರ ಸರ್ವೇ ಸಾಧ್ಯವಾಗಿರಲಿಲ್ಲ. ನಂದಿಕೂರು- ಮೂಡಿಗೆರೆ ರೈಲು ಮಾರ್ಗಕ್ಕೆ ಸಂಬಂಧಿಸಿ ಪ್ರಕ್ರಿಯೆಗಳು ನಡೆದಿದ್ದವು.

ನಂದಿಕೂರು – ಚಾರ್ಮಾಡಿ ಮಾರ್ಗವು ಸೋಮನಾಡು ಸೇತುವೆಭಾಗದಲ್ಲಿ ಸುರಂಗದ ಮೂಲಕ ಸಾಗಿ ಕೊಟ್ಟಿಗೆಹಾರದಿಂದ ಮೂಡಿಗೆರೆಯಲ್ಲಿ ರೈಲು ಮಾರ್ಗಕ್ಕೆ ಜೋಡಣೆಯಾಗುತ್ತದೆ. ಅದು ಮುಂದಕ್ಕೆ ರಾಜಧಾನಿ ಬೆಂಗಳೂರಿಗೆ ಸಾಗುವುದು. ನಂದಿಕೂರು ಜಂಕ್ಷನ್‌ ಆಗಿ ರೂಪುಗೊಳ್ಳುವುದು ಪ್ರಸ್ತಾ ವನೆಯಲ್ಲಿತ್ತು. ಅಧಿಕ ಹಣಕಾಸಿನ ನೆಪವೊಡ್ಡಿ ಕೈಬಿಡಲಾಗಿದೆ.

3 ತಾಲೂಕುಗಳಿಗಿಲ್ಲ
ರೈಲು ಸಂಪರ್ಕ
ದ.ಕ., ಉಡುಪಿ ಜಿಲ್ಲೆಯ 3 ತಾಲೂಕುಗಳಲ್ಲಿ ರೈಲು ಸಂಪರ್ಕವಿಲ್ಲ. ಕರಾವಳಿ ಜಿಲ್ಲೆಯವರು ಕೇಂದ್ರದಲ್ಲಿ ರೈಲ್ವೇ ಮಂತ್ರಿ ಯಾಗಿದ್ದರೂ ಇದು ಕಾರ್ಯ ಗತವಾಗಿಲ್ಲ. ರೈಲ್ವೇ ಮಂಡಳಿ ಕೈಬಿಟ್ಟರೂ ಕೇಂದ್ರ ಮತ್ತು ರಾಜ್ಯ ಸರಕಾರ ಕೈಜೋಡಿಸಿದರೆ ಈ ಯೋಜನೆಯನ್ನು ಕಾರ್ಯ ಗತಗೊಳಿಸಬಹುದು. ಈ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡುವ ಕೆಲಸವನ್ನು ಕರಾವಳಿಯ ಜನ ಪ್ರತಿನಿಧಿಗಳು ಮಾಡಬೇಕು ಎಂದು ರೈಲು ಪ್ರಯಾಣಕ್ಕೆ ಆದ್ಯತೆ ನೀಡುವ ದಿನೇಶ್‌ ಬೆಂಗಳೂರು ಅವರು ಹೇಳುತ್ತಿದ್ದಾರೆ.

ಹೊಸ ರೈಲು ಮಾರ್ಗದ ಸರ್ವೇ ನಡೆದು ವಿಸ್ಕೃತ ವರದಿಯನ್ನು ರೈಲ್ವೆ ಬೋರ್ಡ್‌ 2022ರಲ್ಲಿ ಕೇಂದ್ರ ಸಚಿವಾಲಯಕ್ಕೆ ಸಲ್ಲಿಸಿದೆ. ಸರ್ವೇಯಲ್ಲಿ ಕಂಡು ಬಂದ ಅಂಶಗಳಿಂದ ಅರ್ಥಿಕವಾಗಿ ಈ ಮಾರ್ಗ ಕಾರ್ಯಸಾಧುವಲ್ಲ ಎಂದು ಮಂಡಳಿ ಈ ಪ್ರಸ್ತಾವನೆಯನ್ನು ಕೈಬಿಟ್ಟಿದೆ.
– ಅನೀಶ ಹೆಗ್ಡೆ , ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ನೈಋತ್ಯ ರೈಲ್ವೇ

ಈ ರೈಲು ಯೋಜನೆ ಕೇಂದ್ರ ಸರಕಾರದ ವ್ಯಾಪ್ತಿಯದ್ದಾಗಿದೆ. ಹೊಸ ರೈಲು ಮಾರ್ಗದ ಸರ್ವೇ ಕಾರ್ಯ ಈ ಹಿಂದೆಯೇ ನಡೆದಿತ್ತು. ಪ್ರಸ್ತಾವನೆ ಕೈ ಬಿಟ್ಟ ಬಗ್ಗೆ ಮಾಹಿತಿ ಪಡೆಯುವೆ.
– ವಿ. ಸುನಿಲ್‌ ಕುಮಾರ್‌,
ಕಾರ್ಕಳ ಶಾಸಕ ಹಾಗೂ ಇಂಧನ ಸಚಿವರು

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.