ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್: ಕರ್ನಾಟಕ ಪ್ರಥಮ, ದಿಲ್ಲಿ ದ್ವಿತೀಯ
Team Udayavani, Feb 27, 2023, 6:10 AM IST
ಬ್ರಹ್ಮಾವರ: ಉಪ್ಪೂರು ಮಡಿಸಾಲು ನದಿಯಲ್ಲಿ ಫೆ. 23ರಿಂದ 26ರ ವರೆಗೆ ಆಯೋಜಿಸಲಾದ 11ನೇ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನ ಮತ್ತು ದಿಲ್ಲಿ ತಂಡ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ.
ರವಿವಾರ ಜಿಲ್ಲಾಡಳಿತ, ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಇಂತಹ ಕ್ರೀಡೆಗಳಿಗೆ ಬೆಂಗಳೂರಿ ಗಿಂತ ಕರಾವಳಿ ಪ್ರದೇಶ ಸೂಕ್ತ ಎಂದು ತೇಜಸ್ವಿ ಸೂರ್ಯ ಅಭಿಪ್ರಾಯ ಪಟ್ಟರು.
ಉಡುಪಿ ಪರಿಸರದಲ್ಲಿ ತರಬೇತಿ ಕೇಂದ್ರವನ್ನು ತೆರೆದರೆ ಯುವಕರಿಗೆ ಬಹಳಷ್ಟು ಸಾಧನೆ ಮಾಡಲು ಸಾಧ್ಯ ಎಂದು ಪಂದ್ಯಾಟದ ರೂವಾರಿ, ಶಾಸಕ ಕೆ. ರಘುಪತಿ ಭಟ್ ಹೇಳಿದರು.
ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಪಂದ್ಯಾಟದ ರೂವಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಕಯಾಕಿಂಗ್ ಅಸೋಸಿಯೇಶನ್ ರಾಷ್ಟ್ರೀಯ ಅಧ್ಯಕ್ಷ ಪ್ರಶಾಂತ ಕುಶ್ವಾ, ರಾಜ್ಯ ಅಧ್ಯಕ್ಷ ಮೇ|ಜ| ಎಂ.ಎನ್. ದೇವಯ್ಯ, ಕಾರ್ಯದರ್ಶಿ ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕ ಮಂಜೀತ್ ಸಿಂಗ್, ಪಂದ್ಯಾವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ ಶೆಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಉಪಸ್ಥಿತರಿದ್ದರು.
ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕರ್ನಾಟಕ, ದಿಲ್ಲಿ, ಪಂಜಾಬ್, ಮಧ್ಯಪ್ರದೇಶ, ಗೋವಾ, ಹಿಮಾಚಲಪ್ರದೇಶ, ತಮಿಳುನಾಡು, ಕೇರಳ, ಹರ್ಯಾಣ, ರಾಜಸ್ಥಾನ, ಮಹಾರಾಷ್ಟ್ರ ಮೊದಲಾದ 16 ರಾಜ್ಯಗಳ ತಂಡಗಳು ಪಾಲ್ಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.