ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್‌ ವಂಚನೆ: ವರ್ಷಾರಂಭದಲ್ಲೇ 8 ಲ.ರೂ. ಪಂಗನಾಮ


Team Udayavani, Feb 27, 2023, 10:11 AM IST

HACK

ಉಡುಪಿ: ಆನ್‌ಲೈನ್‌ ವ್ಯವಹಾರದಲ್ಲಿ ಅದೆಷ್ಟು ಜಾಗರೂಕರಾಗಿದ್ದರೂ ಖದೀಮರು ವಿಭಿನ್ನ ರೀತಿಯಲ್ಲಿ ಜನರನ್ನು ಯಾಮಾರಿಸುವ ಕಲೆ ಕರಗತ ಮಾಡಿಕೊಂಡಿದ್ದಾರೆ. ಈ ವರ್ಷದ ಜನವರಿಯಿಂದ ಫೆ.26ರ ವರೆಗೆ ಜಿಲ್ಲೆಯಲ್ಲಿ 8 ಪ್ರಕರಣಗಳು ದಾಖಲಾಗಿದ್ದು, 8,55,165 ರೂ. ಮೊತ್ತ ವಂಚಕರ ಪಾಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ಲಿಂಕ್‌ಗಳನ್ನು ಕಳುಹಿಸಿ ಯಾಮಾರಿಸುವುದು, ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ಕರೆ ಮಾಡಿ ಮಾಹಿತಿ ಸಂಗ್ರಹಿಸುವುದು, ಒಟಿಪಿ ಕಳುಹಿಸಿ ನಂಬರ್‌ ಪಡೆದು ಹಣ ದೋಚುವುದು, ಗಿಫ್ಟ್ ನೆಪದಲ್ಲಿ ವಂಚನೆ, ಆನ್‌ಲೈನ್‌ ಉದ್ಯೋಗದ ಆಮಿಷದ ಮೂಲಕ ಹಣ ವರ್ಗಾಯಿಸಿಕೊಳ್ಳುವುದು, ತಪ್ಪಾಗಿ ಹಣ ವರ್ಗಾಯಿಸಿ ಮತ್ತೆ ಮರುಪಾವತಿಸಲು ತಿಳಿಸುವುದು ಇತ್ಯಾದಿ ತಂತ್ರಗಾರಿಕೆಯನ್ನು ಆನ್‌ಲೈನ್‌ ವಂಚಕರು ಬಳಕೆ ಮಾಡುತ್ತಿರುವುದು ಈ ಪ್ರಕರಣಗಳಲ್ಲಿ ಗೋಚರಕ್ಕೆ ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬ್ಯಾಂಕ್‌ ಖಾತೆಗೆ ಹಣ

ನಮ್ಮ ಬ್ಯಾಂಕ್‌ ಅಕೌಂಟ್‌ನ ಉಳಿತಾಯ ಖಾತೆಗೆ ಅಪರಿಚಿತ ವ್ಯಕ್ತಿಗಳು ನಿರ್ದಿಷ್ಟ ಮೊತ್ತವನ್ನು ಹಾಕುತ್ತಾರೆ. ಅನಂತರ ಫೋನ್‌ ಕರೆ ಮಾಡಿ ನಿಮ್ಮ ತಂದೆಯವರ ಸ್ನೇಹಿತ, ಬಂಧು ಅಥವಾ ಬೇರೆಯವರಿಗೆ ಹಾಕುವ ಹಣವನ್ನು ನಿಮಗೆ ಹಾಕಿದ್ದೇವೆ ದಯವಿಟ್ಟು ಮರುಪಾವತಿಸಿ ಎಂದು ನಮ್ಮನ್ನು ಪುಸಲಾಯಿಸುತ್ತಾರೆ. ಆಗ ಬ್ಯಾಂಕ್‌ ವಿವರ ಪಡೆದು ಒಟಿಪಿ ತಿಳಿಸುವಂತೆ ಹೇಳಿ ವಂಚಿಸುತ್ತಾರೆ. ಅಕೌಂಟ್‌ ಮಾಹಿತಿ ಪಡೆದು ಒಟಿಪಿ ನಂಬರ್‌ ಪಡೆದುಕೊಂಡು ವಂಚಿಸುತ್ತಾರೆ.

ಕೆಲವು ಬಾರಿ ಕಣ್ತಪ್ಪಿನಿಂದ ಗೂಗಲ್‌ ಪೇ ಅಥವಾ ಫೋನ್‌ ಪೇನಲ್ಲಿ ಬೇರೆಯವರಿಗೆ ಹಣ ಹೋಗುವುದಿದೆ. ಅದನ್ನು ಕೂಡಲೇ ಅದೇ ಮಾರ್ಗದಲ್ಲಿ ಫೋನ್‌ ಸಂಖ್ಯೆಯ ಮೂಲಕ ಹಿಂದಕ್ಕೆ ಪಡೆದುಕೊಳ್ಳಬಹುದು ಅಥವಾ ಹಿಂದಿರುಗಿಸಬಹುದು. ಯಾವುದೇ ಕಾರಣಕ್ಕೂ ಬ್ಯಾಂಕ್‌ ವಿವರ, ಎಡಿಎಂ ವಿವರ, ಒಟಿಪಿ ಮಾಹಿತಿಯನ್ನು ವಾಟ್ಸಾಪ್‌, ಎಸ್‌ಎಂಎಸ್‌, ಜಿಮೈಲ್‌, ಟೆಲಿಗ್ರಾಂ ಆ್ಯಪ್‌ಗ್ಳ ಮೂಲಕ ಬರುವ ಲಿಂಕ್‌ಗಳನ್ನು ಕ್ಲಿಕ್ಕಿಸುವುದು, ಹಂಚುವುದನ್ನು ಮಾಡದಿರುವುದೇ ಒಳಿತು ಎನ್ನುತ್ತಾರೆ ಸೈಬರ್‌ ಪರಿಣಿತರು.

ದೂರು ನೀಡಲು ಹಿಂಜರಿಕೆ ಬೇಡ

ವಿದ್ಯಾವಂತರು, ಶೇ.20-30ರಷ್ಟು ಹಿರಿಯ ನಾಗರಿಕರು ಸೈಬರ್‌ ವಂಚನೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ತಮ್ಮ ಘನತೆಗೆ ಅಂಜಿ ದೂರು ನೀಡಲು ಹಿಂದೇಟು ಹಾಕುತ್ತಾರೆ. ಯಾರೇ ಆದರೂ ಆನ್‌ಲೈನ್‌ ವ್ಯವಹಾರ ಮಾಡುವಾಗ ಎಚ್ಚರ ವಹಿಸುವುದು ಅತೀ ಅಗತ್ಯ. ಅಪರಿಚಿತರೊಂದಿಗೆ ಆನ್‌ಲೈನ್‌ನಲ್ಲಿ ಹಣಕಾಸಿನ ವ್ಯವಹಾರ ಮಾಡುವ ನಿಟ್ಟಿನಲ್ಲಿ ಹೆಚ್ಚು ಎಚ್ಚರ ವಹಿಸಬೇಕು.

ಎಚ್ಚರವಹಿಸಿದಷ್ಟು ಉತ್ತಮ
ಅತೀ ಶೀಘ್ರ(ಗೋಲ್ಡನ್‌ ಹವರ್‌)ದಲ್ಲಿ ದೂರು ನೀಡಿದ ಸಂದರ್ಭದಲ್ಲಿ ಆ ಹಣವನ್ನು ತಡೆಹಿಡಿದು ಹಿಂತಿರುಗಿಸುವ ಕೆಲಸ ಮಾಡಲಾಗಿದೆ. ಅನಾಮಧೇಯ ಸಂದೇಶ, ಲಿಂಕ್‌ಗಳನ್ನು ಆದಷ್ಟು ನಿರ್ಲಕ್ಷಿಸಿದರೆ ಉತ್ತಮ. ಯಾವುದೇ ಆತಂಕಕ್ಕೊಳಗಾಗದೆ ದೂರು ನೀಡಬೇಕು.
-ಹಾಕೆ ಅಕ್ಷಯ್‌ ಮಚ್ಚೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಗೋಲ್ಡರ್‌ ಹವರ್‌
ಶೇ.90ರಷ್ಟು ಪ್ರಕರಣಗಳಲ್ಲಿ ವಂಚನೆಗೊಳಗಾದ ಹಣ ಹಿಂದಕ್ಕೆ ಸಿಗುವುದೇ ಇಲ್ಲ. ಆನ್‌ಲೈನ್‌ ವಂಚನೆ ತಡೆಗಿರುವ ಏಕೈಕ ಮಾರ್ಗವೆಂದರೆ ಗೋಲ್ಡನ್‌
ಹವರ್‌ನ ಸದುಪಯೋಗ. ಇದಕ್ಕೆ ನಿರ್ದಿಷ್ಟ ಕಾಲಮಿತಿ ಎಂಬುವುದಿಲ್ಲ. ಘಟನೆ ನಡೆದ ತತ್‌ಕ್ಷಣ ಸಮೀಪದ ಪೊಲೀಸ್‌ ಠಾಣೆ ಅಥವಾ ಸೈಬರ್‌ ಠಾಣೆಗೆ ದೂರು ನೀಡಿ ಆದ ಘಟನೆಯನ್ನು ವಿವರಿಸಿದರೆ ಅಕೌಂಟ್‌ ಟ್ರ್ಯಾಕ್‌ ಮಾಡಿ ತಡೆಹಿಡಿಯಲು ಸಾಧ್ಯವಿದೆ. ದೂರು ನೀಡಲು ವಿಳಂಬ ಮಾಡಿದಷ್ಟು ಪ್ರಕರಣ ಜಟಿಲವಾಗುತ್ತದೆ ಎಂಬುವುದು ಸೈಬರ್‌ ಪೊಲೀಸರ ಅಭಿಪ್ರಾಯ.

ಇದನ್ನೂ ಓದಿ: ಅಸಹಾಯಕರಿಗೆ “ವಾತ್ಸಲ್ಯ’: ಡಾ| ಹೇಮಾವತಿ ಹೆಗ್ಗಡೆ

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.