ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ


Team Udayavani, Feb 28, 2023, 6:40 AM IST

ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ

ಚನ್ನಪಟ್ಟಣ: ನಾಡಿನ ಅಧಿದೇವತೆ ಚಾಮುಂಡೇಶ್ವರಿ ಆಶೀರ್ವಾದವಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ನಾನೇ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆದ ಬಮೂಲ್‌ ಉತ್ಸವದಲ್ಲಿ ಬೃಹತ್‌ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ರಾಜ್ಯಾದ್ಯಂತ 73ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ 15ರಿಂದ 18 ಗಂಟೆಗಳ ಕಾಲ ನಿರಂತರ ಪಂಚರತ್ನ ಯಾತ್ರೆ ಬಗ್ಗೆ ಪ್ರಚಾರ ನಡೆಸಿದ್ದೇನೆ ಎಂದರು.

ನನಗೆ 2 ಬಾರಿ ಹೃದಯ ಬೈಪಾಸ್‌ ಸರ್ಜರಿ ಆಗಿದೆ. ಪಂಚಯಾತ್ರೆ ಪ್ರಾರಂಭದ ದಿನದಿಂದಲೂ ಮಾಂಸಾಹಾರ ತಿನ್ನುವುದನ್ನು ಬಿಟ್ಟಿದ್ದೇನೆ. ಈಗಾಗಲೇ 75ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಓಡಾಡಿದ್ದೇನೆ. ನಾನು ಹೋದ ಕಡೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ನನ್ನ ಬಳಿ ಬಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ. ರಾಜ್ಯದಲ್ಲಿ ಪಂಚರತ್ನ ಯೋಜನೆ ಜಾರಿಯಾಗಬೇಕಾದರೆ ಸುಮಾರು 2.5 ಲಕ್ಷ ಕೋಟಿ ರೂ. ಬೇಕು. ಅದಕ್ಕೆ ಪೂರಕವಾಗಿ ಹಣ ತರುವ ಯೋಜನೆಯನ್ನು ರೂಪಿಸಬೇಕಿದೆ ಎಂದರು.

ಪಾಪ ಹಣದಿಂದ ಸರ್ಕಾರ ತೆಗೆದರು:
ಪಾಪದ ಹಣ ಬಳಸಿಕೊಂಡು ಸಮ್ಮಿಶ್ರ ಸರ್ಕಾರವನ್ನು ತೆಗೆದ ಕೀರ್ತಿ ನಿಮ್ಮ ಕ್ಷೇತ್ರದ ಮಾಜಿ ಶಾಸಕರಿಗೆ ಸಲ್ಲಲಿದೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಸ್ವಾಭಿಮಾನಿ ನಡಿಗೆ ಕಾರ್ಯಕ್ರಮದಲ್ಲಿ ನಾನು ಕೂಡ ಸಿಎಂ ಆಗುತ್ತೇನೆಂದು ಅಂತಾ ಸಿಪಿವೈ ಗ್ರಾಮೀಣ ಭಾಗದಲ್ಲಿ ಮತ ಪಡೆಯುತ್ತಿದ್ದಾರೆ ಎಂಬ ಮಾತುಗಳನ್ನು ಕೂಡ ಕೇಳಿದ್ದೇನೆ ಎಂದರು.

ಕ್ಷೇತ್ರದ ಜನ ಸೀರೆಗೆ ಮತ ಮಾರಿಕೊಳ್ಳಲ್ಲ
ಕ್ಷೇತ್ರದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಳೆದ 20 ವರ್ಷಗಳ ಕಾಲ ಶಾಸಕರಾಗಿದ್ದರು. ಅವರು ಕ್ಷೇತ್ರದಲ್ಲಿ ಒಳ್ಳೆಯ ಕಲಸ ಮಾಡಿದ್ರೆ ಈಗ ಕ್ಷೇತ್ರದ ಜನತೆಗೆ ಸೀರೆ ಹಚ್ಚುವ ಅವಶ್ಯಕತೆ ಇಲ್ಲ. ನಮ್ಮ ಕ್ಷೇತ್ರದ ಜನತೆ ಒಂದು ಸೀರೆಗಾಗಿ ತಮ್ಮ ಮತವನ್ನು ಮಾರಿಕೊಳ್ಳುವುದಿಲ್ಲ. ನಮ್ಮ ಜನರು ಸ್ವಾಭಿಮಾನಿಗಳು. ಹಾಗೆಯೇ ಇಗ್ಗಲೂರಿನಲ್ಲಿ ದೇವೇಗೌಡರು ಡ್ಯಾಂ ಕಟ್ಟದಿದ್ದರೆ ಕ್ಷೇತ್ರಕ್ಕೆ ಎಲ್ಲಿ ನೀರಾವರಿ ಮಾಡಲು ಸಾಧ್ಯವಾಗುತ್ತಿತ್ತು?, ಈಗ ಕ್ಷೇತ್ರದಲ್ಲಿ ನೀರಾವರಿ ಹರಿಕಾರ, ಭಗೀರಥ ಅಂತಾ ಎಂದು ಬರೆದುಕೊಂಡಿದ್ದಾರೆ. ಈಗ ಸತ್ತೆಗಾಲ ಯೋಜನೆ ರೂಪಿಸಿ ಈಡೀ ಜಿಲ್ಲೆಗೆ ಶಾಶ್ವತವಾಗಿ ನೀರಾವರಿ ಹಾಗೂ ಕುಡಿಯುವ ನೀರು ಯೋಜನೆ ರೂಪಿಸಲಾಗಿದೆ ಎಂದು ಸಿಪಿವೈ ವಿರುದ್ದ ಎಚ್‌ಡಿಕೆ ವಾಗ್ಧಾಳಿ ನಡೆಸಿದ್ದಾರೆ.

ಇವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಕೊರೊನಾ ಹಾಗೂ ರಾಸುಗಳಿಗೆ ಕಾಲು ಬಾಯಿ ಜ್ವರ ಬಂದು ಹಸುಗಳು ಸತ್ತಾಗ ನೀನು ಎಲ್ಲಿದ್ದಪ್ಪಾ?, ಸಂಕಷ್ಟದಲ್ಲಿದಾಗ ಕಾಣದ ಯೋಗೇಶ್ವರ್‌ ಸುಳ್ಳು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾನೆ. ಇಂತಹ ಪೊಳ್ಳು ಮಾತಿಗೆ ಜನ ಮಣೆ ಹಾಕುವುದಿಲ್ಲ ಎಂದರು.

ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟಿದ್ದೀರಿ,
ನಿಮ್ಮ ಕಳ್ಳಾಟ ಇನ್ನು 2 ತಿಂಗಳಷ್ಟೆ
ಚನ್ನಪಟ್ಟಣದಲ್ಲಿ ಬಮೂಲ್‌ ಉತ್ಸವ ನಡೆಸುವುದಕ್ಕೆ ಸಹಕಾರ ಇಲಾಖೆ ಅಧಿಕಾರಿಗಳು ತೀರಾ ತೊಂದರೆ ಕೊಟ್ಟಿದ್ದು, ಸಹಕಾರ ಕ್ಷೇತ್ರದ ಅಧಿಕಾರಿಗಳಾದ ಎಆರ್‌ ಹಾಗೂ ಡಿಆರ್‌ಗಳು ನೋಡಿದ್ದೇನೆ. ಇಲಾಖೆಯಲ್ಲಿ 50 ಲಕ್ಷ ಹಾಗೂ ಒಂದು ಕೋಟಿ ಲೂಟಿ ಮಾಡಿದವರಿಗೆ ಹೇಳುವವರು ಕೇಳುವವರು ಇಲ್ಲ. ಸಹಕಾರ ಇಲಾಖೆಯಲ್ಲಿ ಸರಿಯಾದ ಕಾನೂನು ಇಲ್ಲ. ನಿಮ್ಮ ಕಳ್ಳಾಟ ಇನ್ನು 2 ತಿಂಗಳು ಅಷ್ಟೆ. ನಾನು ಎಂದಿಗೂ ಅಧಿಕಾರದಲ್ಲಿ ಇದ್ದಾಗ ಅಧಿಕಾರಿಗಳಿಗೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ. ಕೆಲ ಅಧಿಕಾರಿಗಳು ಬೆಳಗ್ಗೆ ನಮ್ಮ ಮನೆಗೆ ಬರುತ್ತಾರೆ ರಾತ್ರಿಯಾದ್ರೆ ಬೇರೆಯವರಿಗೆ ದುಡ್ಡು ಕೊಟ್ಟುತ್ತಾರೆ. ಅದೆಲ್ಲವು ಕೂಡ ಗೊತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಅಧಿಕಾರಿಗಳ ವಿರುದ್ಧ ಎಚಿxಕೆ ಗರಂ ಆದರು.

ಇದೇ ನನ್ನ ಕಡೆ ಚುನಾವಣೆ
ಚನ್ನಪಟ್ಟಣ ಕ್ಷೇತ್ರ ಬಿಟ್ಟು ನಾನು ಬೇರೆಡೆ ಸ್ಪರ್ಧೆ ಮಾಡೋಲ್ಲ. ಇದೇ ನನ್ನ ಕೊನೆ ಚುನಾವಣೆಯಾಗಿದೆ. 2028ಕ್ಕೆ ಈ ಕ್ಷೇತ್ರದಿಂದ ಕಾರ್ಯಕರ್ತರನ್ನು ನೀವೇ ಹುಡುಕಿಕೊಳ್ಳಿರಿ. ಮುಂದೆ ರಾಜಕೀಯ ಯಾವ ಹಂತಕ್ಕೆ ಬರಲಿದೆ ಕಾದು ನೋಡೋಣ. ನಾನು ಹಾಸನದಲ್ಲಿ ಹುಟ್ಟಿರಬಹುದು. ಆದರೆ, ರಾಮನಗರ ಕ್ಷೇತ್ರ ನನಗೆ ರಾಜಕೀಯವಾಗಿ ಜನ್ಮ ನೀಡಿದೆ ಎಂದು ಸ್ಮರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.