![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 1, 2023, 6:15 AM IST
ಹೊಸದಿಲ್ಲಿ: ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ದಾಳಿ ಒಂದು ವರ್ಷ ಮೀರಿರುವಂತೆಯೇ ಹೊಸದಿಲ್ಲಿಯಲ್ಲಿ ಮಾ.1 ಮತ್ತು 2ರಂದು ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಡೆಯಲಿದೆ.
ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್, ರಷ್ಯಾ ವಿದೇಶಾಂಗ ಸಚಿವ ಲಾರ್ವೋ, ಫ್ರಾನ್ಸ್ನ ಕ್ಯಾಥರೀನ್ ಕೊಲೊನ್ನಾ, ಚೀನದ ಕ್ವಿನ್ ಗಾಂಗ್, ಜರ್ಮನಿಯ ಅನ್ನಲೇನಾ , ಬ್ರಿಟನ್ನ ಜೇಮ್ಸ್ ಕ್ಲೆವರ್ಲೆ ಭಾಗವಹಿಸಲಿರುವುದು ಖಚಿತವಾಗಿದೆ. ಇದಲ್ಲದೆ, ಬಾಂಗ್ಲಾದೇಶ ಮತ್ತು ಶ್ರೀಲಂಕಾದ ವಿದೇಶಾಂಗ ಸಚಿವರೂ ಅದರಲ್ಲಿ ಭಾಗಿಗಳಾಗಲಿದ್ದಾರೆ.
ಬೆಂಗಳೂರಿನಲ್ಲಿ ಜಿ20 ರಾಷ್ಟ್ರಗಳ ವಿತ್ತ ಸಚಿವರ ಸಭೆಯ ಬಳಿಕ ದೇಶದಲ್ಲಿ ನಡೆಯಲಿರುವ ಮತ್ತೂಂದು ಮಹತ್ವದ ಸಭೆ ಇದಾಗಿದೆ. ಆಹಾರ ಮತ್ತು ಭದ್ರತೆ, ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಮತ್ತು ಅದರಿಂದ ಜಗತ್ತಿನ ಮೇಲೆ ಉಂಟಾಗಿರುವ ಪರಿಣಾಮಗಳು, ರಷ್ಯಾ ಮತ್ತು ಚೀನ ಹಾಗೂ ಜಗತ್ತಿನ ಇತರ ರಾಷ್ಟ್ರಗಳ ನಡುವಿನ ಮುನಿಸು ಪ್ರಮುಖವಾಗಿ ಚರ್ಚೆಯಾಗಲಿದೆ.
ದ್ವಿಪಕ್ಷೀಯ ಮಾತುಕತೆ ಸಾಧ್ಯತೆ
ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಲಿರುವ ಚೀನ ವಿದೇಶಾಂಗ ಸಚಿವ ಕ್ವಿನ್ ಗಾಂಗ್ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜತೆಗೆ ಮಾತುಕತೆ ನಡೆಸಲಿದ್ದಾರೆ. ಸಚಿವ ಕ್ವಿನ್ ಡಿಸೆಂಬ ರ್ನಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನಂತರ ಮೊದಲ ಬಾರಿಗೆ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ. 2019, 2022ರಲ್ಲಿ ಕ್ವಿನ್ ಅವರು ಹೊಸದಿಲ್ಲಿಗೆ ಆಗಮಿಸಿ ದ್ದರು. ಗಾಲ್ವನ್ ಗಲಾಟೆ ನಡೆದ ಬಳಿಕ ಭಾರತ-ಚೀನ ನಡುವಿನ ಉತ್ತಮ ಬಾಂಧವ್ಯ ಇಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.