ಪ್ರಧಾನಿಯಿಂದ ಮಾ 12 ಕ್ಕೆ ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ
ಅನುಮತಿ ಸಿಕ್ಕರೆ ರಸ್ತೆಯಲ್ಲಿ ಭರ್ಜರಿ ರೋಡ್ ಶೋ : ಸಂಸದ ಪ್ರತಾಪ್ ಸಿಂಹ
Team Udayavani, Mar 1, 2023, 3:41 PM IST
ಮೈಸೂರು: ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬುಧವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಎಸ್ಪಿಜಿ ಅನುಮತಿ ಕೊಟ್ಟರೆ ರಸ್ತೆಯಲ್ಲಿ ರೋಡ್ ಶೋ ಮಾಡುತ್ತೇವೆ. ಒಟ್ಟು 2 ಕಿಮೀ ರೋಡ್ ಶೋ ಮಾಡಲು ಉದ್ದೇಶಿಸಿದ್ದೇವೆ. ರೋಡ್ ಶೋ ನಂತರ ಮಂಡ್ಯದ ಮದ್ದೂರು ಬಳಿಯ ಗೆಜ್ಜೆಲಗೆರೆಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.
ಟೋಲ್ ಸಂಗ್ರಹ
ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಸರ್ವಿಸ್ ರಸ್ತೆ ಪೂರ್ಣಗೊಳ್ಳಲು ನ್ಯಾಯಾಲಯದಲ್ಲಿನ ಜಮೀನು ಕುರಿತ ಮೊಕದ್ದಮೆ ಬಾಕಿ ಇದೆ. ಅದು ತೀರ್ಮಾನವಾದ ಮೇಲೆ ಬೇಗನೆ ಸರ್ವಿಸ್ ರಸ್ತೆ ಆರಂಭಿಸಲಾಗುತ್ತದೆ. ಹೈವೇಯ ಒಂದು ಭಾಗದ ಟೋಲ್ ಸಂಗ್ರಹವನ್ನು ಮಾರ್ಚ್ 14 ರವರೆಗೆ ಮುಂದೂಡಿದ್ದೇವೆ.ಬೆಂಗಳೂರು – ನಿಡಗಟ್ಟದವರೆಗೂ ಟೋಲ್ ಸಂಗ್ರಹ ಮಾಡಲಾಗುತ್ತದೆ ಎಂದರು.
ಮಹದೇವಪ್ಪ ಅವರನ್ನು ಕೇಳಿ
ಕಾಂಗ್ರೆಸ್ ಸರಕಾರದಲ್ಲಿ ಆದ ಮೈಸೂರು – ಊಟಿ ಹೈವೇ ಗೆ ಸರ್ವಿಸ್ ರಸ್ತೆಯೆ ಇಲ್ಲ. ಈಗ ಇವರೆಲ್ಲಾ ಬೆಂಗಳೂರು – ಮೈಸೂರು ಹೈವೆ ಸರ್ವಿಸ್ ರಸ್ತೆ ಬಗ್ಗೆ ಮಾತಾಡುತ್ತಿದ್ದಾರೆ. ನಾವು ಸರ್ವಿಸ್ ರಸ್ತೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದೇವೆ. ಸರ್ವಿಸ್ ರಸ್ತೆಯೇ ಮಾಡದೆ ನೀವು ಟೋಲ್ ಸಂಗ್ರಹ ಹೇಗೆ ಆರಂಭಿಸಿದಿರಿ ಎಂದು ಕಾಂಗ್ರೆಸ್ ನ ಮಹದೇವಪ್ಪ ಅವರನ್ನು ಕೇಳಿ ಎಂದು ಪ್ರತಾಪ ಸಿಂಹ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.