ಯೋಜಿತ ನಗರಗಳಿಂದ ದೇಶದ ಚಿತ್ರಣ ಬದಲು: ಪ್ರಧಾನಿ ಮೋದಿ
Team Udayavani, Mar 2, 2023, 6:45 AM IST
ನವದೆಹಲಿ: ಸ್ವಾತಂತ್ರ್ಯಾನಂತರ ಕನಿಷ್ಠ 75 ನಗರಗಳನ್ನು ಯೋಜನಾಬದ್ಧವಾಗಿ ಬೆಳೆಸಿದ್ದರೆ ಇವತ್ತು ದೇಶದ ಸ್ಥಿತಿಯೇ ಬೇರೆಯಾಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಬಜೆಟ್ ಬಗ್ಗೆ ವೆಬಿನಾರ್ ಒಂದರಲ್ಲಿ ಮಾತನಾಡಿದ ಅವರು, ನಗರ ಯೋಜನೆ, ಅಭಿವೃದ್ಧಿ ಮತ್ತುಸ್ವಚ್ಛತೆ ಎಂಬ ಅಂಶವನ್ನು ಪ್ರಧಾನವಾಗಿ ಚರ್ಚಿಸಿದರು.
“ಸ್ವಾತಂತ್ರ್ಯಾನಂತರ ಕೇವಲ ಒಂದೆರಡು ನಗರಗಳನ್ನು ಮಾತ್ರ ವ್ಯವಸ್ಥಿತವಾಗಿ ಬೆಳೆಸಲಾಗಿದೆ. ಭಾರತ ವೇಗವಾಗಿ ನಗರೀಕರಣಗೊಳ್ಳುತ್ತಿದೆ. ಆದ್ದರಿಂದ ಭವಿಷ್ಯ ಗಮನಿಸಿ ಮೂಲ ಸೌಕರ್ಯಗಳನ್ನು ಬೆಳೆಸಬೇಕು. ಯೋಜಿತ ನಗರಗಳು ದೇಶದ ಭವಿಷ್ಯವನ್ನು ನಿರ್ಧರಿಸಲಿವೆ’ ಎಂದರು.
ಯಾವಾಗ ಯೋಜನೆ ಅತ್ಯುತ್ತಮವಾಗಿರುತ್ತದೋ, ಆಗ ನಗರಗಳು ವೈರುಧ್ಯದ ಹವಾಮಾನವನ್ನು ತಡೆದುಕೊಳ್ಳುತ್ತವೆ. ನೀರಿಗೂ ಸಮಸ್ಯೆಯಿರುವುದಿಲ್ಲ. ಆದ್ದರಿಂದ ಈ ಗೋಷ್ಠಿಯಲ್ಲಿ ಪಾಲ್ಗೊಂಡವರು, ರಾಜ್ಯಗಳಲ್ಲಿ ಯೋಜಿತ ನಗರ ವಾತಾವರಣವನ್ನು ವೃದ್ಧಿಸುವುದು, ಸ್ಥಳೀಯವಾಗಿ ಲಭ್ಯವಿರುವ ಖಾಸಗಿ ತಜ್ಞರನ್ನು ಈ ಕೆಲಸದಲ್ಲಿ ಬಳಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
MUST WATCH
ಹೊಸ ಸೇರ್ಪಡೆ
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.