ಕೆಸರು ಎರಚಿದಷ್ಟೂ ಕಮಲ ಅರಳುತ್ತದೆ: ರಾಜನಾಥ್‌


Team Udayavani, Mar 3, 2023, 7:46 AM IST

ಕೆಸರು ಎರಚಿದಷ್ಟೂ ಕಮಲ ಅರಳುತ್ತದೆ: ರಾಜನಾಥ್‌

ಬೆಳಗಾವಿ: ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೇಣುಗಂಬ ಏರಿದ ನೆಲದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಗುರುವಾರ ಚಾಲನೆ ದೊರೆಯಿತು. ಖಾನಾಪುರ ತಾಲೂಕಿನ ನಂದಗಡದಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಚುನಾವಣ ಕಹಳೆ ಮೊಳಗಿಸಿದರು. ಆ ಮೂಲಕ ಕಿತ್ತೂರು ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲಲು ತೊಟ್ಟಿರುವ ಪಣವನ್ನು ಕಾರ್ಯರೂಪಕ್ಕೆ ತರಲು ಬಿಜೆಪಿ ಹೆಜ್ಜೆ ಇಟ್ಟಿದೆ.

ರಾಜನಾಥ್‌ ಅವರು ರಾಯಣ್ಣ ಸಮಾ ಧಿ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿದ ಬಳಿಕ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದು, ಭಾರತವನ್ನು ವಿಭಜಿಸಿದ ಕಾಂಗ್ರೆಸ್‌ನವರು ಇಂದು ಭಾರತ್‌ ಜೋಡೋ ಮಾಡುತ್ತಿದ್ದಾರೆ. ಅವರು ಜೋಡಿಸಲು ಕರಾಚಿ, ಲಾಹೋರ್‌ಗೆ ತೆರಳಬೇಕಿತ್ತು. ಜನರ ಕಣ್ಣಲ್ಲಿ ಧೂಳು ಹಾಕುವವರು ಯಶಸ್ಸು ಸಾಧಿ ಸಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಪ್ರಧಾನಿ ಮೋದಿಯ ಸಾವಿನ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗೆ ಮಾತನಾಡುತ್ತ ಹೋದಂತೆ ಕಮಲ ಅರಳುತ್ತದೆ. ನೀವು ಕೆಸರೆರಚಿದಷ್ಟೂ ಕಮಲ ಹೆಚ್ಚೆಚ್ಚು ಅರಳುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದರು.

ಮೋದಿಯಿಂದ ದೇಶ ಪ್ರಗತಿ
ಕಾಂಗ್ರೆಸ್‌ ಅ ಧಿಕಾರದಲ್ಲಿದ್ದಾಗ ಬಂದೂಕು, ಗುಂಡು, ತೋಪು ಬೇರೆ ದೇಶದಿಂದ ಖರೀದಿಸುವ ಪರಿಸ್ಥಿತಿ ಇತ್ತು. ಮೋದಿ ಬಂದಾಗಿನಿಂದ ಮೇಕ್‌ ಇನ್‌ ಇಂಡಿಯಾ ಮೂಲಕ ಅವೆಲ್ಲವೂ ಭಾರತದಲ್ಲೇ ತಯಾರಾಗುತ್ತಿವೆ. ಮೇಕ್‌ ಫಾರ್‌ ದಿ ವರ್ಲ್ಡ್ ಮೂಲಕ ಬೇರೆ ದೇಶಕ್ಕೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದೇವೆ. ಇದು ಮೋದಿಯ ಎಂಟೆದೆಯ ತಾಕತ್ತು. ಹಿಂದೂ-ಮುಸ್ಲಿಮರು ಸಹೋದರರು ಇದ್ದಂತೆ. ತ್ರಿವಳಿ ತಲಾಖ್‌ನಿಂದ ಮಹಿಳೆಯರನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ಇದನ್ನು ತೆಗೆದು ಹಾಕಿದ್ದೇವೆ ಎಂದರು.

50 ವರ್ಷಗಳ ಕಾಂಗ್ರೆಸ್‌ ಅವ ಧಿಯಲ್ಲಿ ಆಗದ ಕೆಲಸವನ್ನು ಮೋದಿ ಕೇವಲ 9 ವರ್ಷ ಗಳಲ್ಲಿ ಮಾಡಿದ್ದಾರೆ. 80 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಸಹಿತ 3.50 ಲಕ್ಷ ಕಿ.ಮೀ. ರಸ್ತೆ ನಿರ್ಮಿಸಿದ್ದಾರೆ ಎಂದ ರಾಜನಾಥ್‌, ಮೋದಿ ಕನಸು ಕರ್ನಾಟಕವನ್ನು ಅಭಿವೃದ್ಧಿ ಮಾಡು ವುದಾಗಿದೆ. ಕೈಗಾರಿಕಾ ಕಾರಿಡಾರ್‌ ನಿರ್ಮಾಣ, 80 ಕೋಟಿ ಜನರಿಗೆ ಉಚಿತ ಪಡಿತರ ವಿತರಣೆ, ರೈತರ ಅನುಕೂಲಕ್ಕಾಗಿ ಕೃಷಿ ಜಮೀನಿಗೆ ನೀರು ಹಾಗೂ ಮನೆ ಮನೆಗೆ ನೀರು ಒದಗಿಸಿದ್ದೇವೆ. ಹೇಳಿದ್ದನ್ನು ಮಾಡಿ ತೋರಿಸುವ ಕಾರ್ಯ ಮೋದಿಯಿಂದ ಮಾತ್ರ ಸಾಧ್ಯ ಎಂದರು.

ದೇಶದಲ್ಲಿ ಡಿಜಿಟಲ್‌ ಕ್ರಾಂತಿ
ಕೋವಿಡ್‌ ವೇಳೆಯಲ್ಲಿ ದೇಶದ ಪ್ರಜೆಗಳಿಗೆ ಉಚಿತ ಲಸಿಕೆ ನೀಡಿದ್ದು ಭಾರತ ಮಾತ್ರ. ಒಂದು ವೇಳೆ ಭಾರತದಲ್ಲಿ ಲಸಿಕೆ ನೀಡದಿದ್ದರೆ ಸುಮಾರು 39 ಲಕ್ಷ ಜನರು ಸಾಯುತ್ತಿದ್ದರು ಎಂದು ಹಾರ್ವರ್ಡ್‌ ವಿಶ್ವವಿದ್ಯಾನಿಲಯ ಹೇಳಿದೆ. ದೇಶದಲ್ಲಿ ಡಿಜಿಟಲ್‌ ಕ್ರಾಂತಿಯಾಗಿದೆ. ಈವರೆಗೆ 13 ಲಕ್ಷ ಕೋಟಿ ರೂ. ಮೊಬೈಲ್‌ನಿಂದ ವರ್ಗಾವಣೆ ಆಗಿದೆ ಎಂದರು.

ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ ದೇಶದ ಅರ್ಥ ವ್ಯವಸ್ಥೆ 10-11ನೇ ಸ್ಥಾನದಲ್ಲಿ ಇತ್ತು. ಈಗ ಜಗತ್ತಿನ ಟಾಪ್‌ 5ರಲ್ಲಿ ಭಾರತ ಸ್ಥಾನ ಪಡೆದುಕೊಂಡಿದೆ. 2027-28ರಲ್ಲಿ ಭಾರತ ಅತಿ ದೊಡ್ಡ ಆರ್ಥಿಕ ವ್ಯವಸ್ಥೆ ಆಗಲಿದೆ. ಜಾಗತಿಕ ವೇದಿಕೆ ಮೇಲೆ ಭಾರತ ಏನು ಮಾತನಾಡುತ್ತಿದೆ ಎಂಬುದನ್ನು ಜಗತ್ತು ಕೇಳುವಷ್ಟು ಬೆಳೆದಿದ್ದೇವೆ ಎಂದು ಹೇಳಿದರು.

ಕರ್ನಾಟಕ ವೀರ- ಶೌರ್ಯದ ಪ್ರತೀಕ
ಝಾನ್ಸಿ ರಾಣಿ ಲಕ್ಷ್ಮೀಬಾಯಿ ಗಿಂತಲೂ ಮೊದಲು ಬ್ರಿಟಿಷರ ವಿರುದ್ಧ ಯುದ್ಧ ಸಾರಿದ ರಾಣಿ ಚನ್ನಮ್ಮನ ನಾಡಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಚನ್ನಮ್ಮ, ರಾಯಣ್ಣನಿಗೆ ಮಾಲಾರ್ಪಣೆ ಮಾಡಿದ್ದು ನನ್ನ ಸೌಭಾಗ್ಯ. ಕರ್ನಾಟಕ ವೀರ ಹಾಗೂ ಶೌರ್ಯದ ಪ್ರತೀಕ. ಬೆಳಗಾವಿ ಕರ್ನಾಟಕದ ಶಿಖರ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿಗೆ ಮೆಚ್ಚುಗೆ
2018ರಲ್ಲಿ ಅತಿ ಹೆಚ್ಚು ಸ್ಥಾನ ಪಡೆದಿದ್ದ ಬಿಜೆಪಿಯ ಯಡಿಯೂರಪ್ಪ ಕೇವಲ 6 ದಿನಗಳ ಕಾಲ ಮುಖ್ಯಮಂತ್ರಿಯಾದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿಯ ಸಮ್ಮಿಶ್ರ ಸರಕಾರ ಬಂತು. ಮತ್ತೆ ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಅವರ ಆರೋಗ್ಯ ಕ್ಷೀಣಿಸಿದ್ದರಿಂದ ಅ ಧಿಕಾರ ಬಿಟ್ಟು ಕೊಟ್ಟರು. ಅನಂತರ ಸರಳ, ಸಜ್ಜನಿಕೆ, ಪ್ರಾಮಾಣಿಕರಾದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದರು. ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡಿ ಗೌರವ ನೀಡಲಾಗಿದೆ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.