ಜುವೆಲರಿ ಅಂಗಡಿಯಲ್ಲಿ ಹತ್ಯೆ ಪ್ರಕರಣ: ದರೋಡೆ ಉದ್ದೇಶದಿಂದಲೇ ಹತ್ಯೆ ಮಾಡಿದ್ದ ಆರೋಪಿ


Team Udayavani, Mar 4, 2023, 7:23 AM IST

ಜುವೆಲರಿ ಅಂಗಡಿಯಲ್ಲಿ ಹತ್ಯೆ ಪ್ರಕರಣ: ದರೋಡೆ ಉದ್ದೇಶದಿಂದಲೇ ಹತ್ಯೆ ಮಾಡಿದ್ದ ಆರೋಪಿ

ಮಂಗಳೂರು: ನಗರದ ಜುವೆಲರಿ ಅಂಗಡಿಯ ಸೇಲ್ಸ್‌ಮ್ಯಾನ್‌ನ್ನು ಹತ್ಯೆಗೈದ ಆರೋಪಿ ಶಿಫಾಸ್‌(30)ನನ್ನು ನ್ಯಾಯಾಲಯವು 12 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದು, ಆರೋಪಿ ಚಿನ್ನಾಭರಣ ದರೋಡೆ ನಡೆಸುವ ಉದ್ದೇಶದಿಂದಲೇ ಸೇಲ್ಸ್‌ ಮ್ಯಾನ್‌ನ್ನು ಕೊಲೆಗೈದಿರುವುದು ಗೊತ್ತಾಗಿದೆ.

ಸೇಲ್ಸ್‌ಮ್ಯಾನ್‌ ಅಂಗಡಿಯಲ್ಲಿ ಓರ್ವರೇ ಇದ್ದಾಗ ನುಗ್ಗಿದ್ದ ಆರೋಪಿ ಚೂರಿಯಿಂದ ಇರಿದು ಹತ್ಯೆಗೈದಿದ್ದ. ಊಟಕ್ಕೆ ತೆರಳಿದ್ದ ಅಂಗಡಿ ಮಾಲಕರು ವಾಪಸ್‌ ಬಂದಾಗ ಪರಾರಿಯಾಗಿದ್ದ.

ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಆರೋಪಿ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಇ ಡಿಪ್ಲೊಮಾ ವಿದ್ಯಾಭ್ಯಾಸ ಪಡೆದು ಎರಡೇ ವರ್ಷದಲ್ಲಿ ಕಾಲೇಜು ತೊರೆದಿದ್ದ. ಕೋಝಿಕೋಡ್‌ ಚೆಮ್ಮಂಚೇರಿ ನಿವಾಸಿಯಾದ ಈತ 2014ರಿಂದ 2019ರವರೆಗೆ ದುಬೈನಲ್ಲಿದ್ದ. ಬಳಿಕ ಊರಿಗೆ ವಾಪಸಾಗಿ ಎಸ್‌ಎಎನ್‌ಎನ್‌ ಗ್ಲೋಬಲ… ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುತು ತಪ್ಪಿಸಲು ಹಲವು ತಂತ್ರ
ಆರೋಪಿ ಕಾಸರಗೋಡು ಸೇರಿದಂತೆ ಕೆಲವೆಡೆ ಇದೇ ರೀತಿಯ ಕೃತ್ಯ ನಡೆಸಿರುವ ಅಥವಾ ನಡೆಸಲು ಯತ್ನಿಸಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿ ಗುರುವಾರ ಕಾಸರಗೋಡಿನಲ್ಲಿ ಇದೇ ರೀತಿಯ ಕೃತ್ಯ ಮಾಡುವ ಉದ್ದೇಶದಿಂದ ಬಂದಿದ್ದ. ಆತನನ್ನು ವಶಕ್ಕೆ ಪಡೆದಾಗ ಆತ ಒಂದರ ಮೇಲೆ ಒಂದು ಬಟ್ಟೆಗಳನ್ನು ಧರಿಸಿರುವುದು ಗೊತ್ತಾಗಿದೆ. ಮೈಮೇಲೆ ಒಂದೊಂದು ಕಡೆ ಒಂದೊಂದು ರೀತಿಯ ಬಟ್ಟೆ ಇರುವಂತೆ ಮಾಡಿ ಗುರುತು ಎಲ್ಲಿಯೂ ಸರಿಯಾಗಿ ದಾಖಲಾಗದಂತೆ ತಂತ್ರ ಮಾಡಿದ್ದ. ಫೆ.3ರಂದು ಮಂಗಳೂರಿನಲ್ಲಿ ಹತ್ಯೆ ಮಾಡುವಾಗ ಆರೋಪಿ ಮಾಸ್ಕ್, ಟೋಪಿ ಧರಿಸಿದ್ದ.

ಗೂಗಲ್‌ ಸರ್ಚ್‌ ಮಾಡಿದ್ದ
ಮಂಗಳೂರಿನಲ್ಲಿ ಚಿನ್ನದ ಅಂಗಡಿ ದರೋಡೆ ಮಾಡಬೇಕೆಂದು ನಿರ್ಧರಿಸಿದ್ದ ಆರೋಪಿ ಶಿಫಾಸ್‌ ಗೂಗಲ್‌ನಲ್ಲಿ ಅಂಗಡಿಯನ್ನು ಸರ್ಚ್‌ ಮಾಡಿದ್ದಾನೆ. ಆಗ ಮಂಗಳೂರು ಜುವೆಲ್ಲರ್ಸ್‌ ಹೆಸರಿನ ಅಂಗಡಿಯೇ ಸಿಕ್ಕಿದೆ. ಫೆ. 3ರಂದು ಬೆಳಗ್ಗೆ ಅಂಗಡಿ ಬಳಿ ಬಂದಾಗ ಅಂಗಡಿ ಮುಚ್ಚಿತ್ತು. ಅನಂತರ ಮಧ್ಯಾಹ್ನ ಅಂಗಡಿಯಲ್ಲಿ ಸೇಲ್ಸ… ಮ್ಯಾನ್‌ ಒಬ್ಬನೇ ಇದ್ದಾಗ ಅಂಗಡಿಗೆ ನುಗ್ಗಿ ಸಿಬಂದಿಯನ್ನು ಹತ್ಯೆಗೈದು 12 ಪವನ್‌ ಚಿನ್ನದೊಂದಿಗೆ ರಿಕ್ಷಾದಲ್ಲಿ ಪರಾರಿಯಾಗಿದ್ದ.

ವ್ಯಕ್ತಿಯೊಬ್ಬರಿಂದ ಮಾಹಿತಿ
ಪೊಲೀಸರು ಆರೋಪಿಯ ಚಹರೆಯ ಚಿತ್ರ, ಸಿಸಿ ಕೆಮರಾ ದೃಶ್ಯವನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಾರ್ವಜನಿಕ ಸ್ಥಳದಲ್ಲಿ ಹಾಕಿ ಸಾರ್ವಜನಿಕರಿಂದ ಮಾಹಿತಿ ಕೋರಿದ್ದರು. ಇದನ್ನು ಗಮನಿಸಿ ವ್ಯಕ್ತಿಯೋರ್ವರು ಆರೋಪಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್‌ ತಂಡಕ್ಕೆ ಬಹುಮಾನ
ಈ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ, ಮಾಹಿತಿ ನೀಡಿದ ವ್ಯಕ್ತಿಗೆ ಬಹುಮಾನ ನೀಡಲಾಗುವುದು ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಆರ್‌. ಜೈನ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.