ಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ


Team Udayavani, Mar 4, 2023, 5:35 AM IST

crಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ

ಉಪ್ಪುಂದ: ಸಾಲಬಾಧೆ ಹಾಗೂ ಪತ್ನಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ತಾಲೂಕು ವಿದ್ಯಾನಗರ ಡಿಗ್ರಿ ಕಾಲೇಜು ಸಮೀಪದ ನಿವಾಸಿ ಗೋಪಾಲ (48) ಆತ್ಮಹತ್ಯೆ ಮಾಡಿಕೊಂಡವರು.

ಅವರು ಹೊಸ ಮನೆಯನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಹಣದ ಅಡಚಣೆಯಿಂದ ಮನೆ ಕೆಲಸ ನಿಧಾನಕ್ಕೆ ನಡೆದಿದ್ದು, ಮನೆ ನಿರ್ಮಾಣದ ಸಲುವಾಗಿ ಬ್ಯಾಂಕ್‌ ಹಾಗೂ ಸಂಘಗಳಲ್ಲಿ ಸುಮಾರು 7-8 ಲಕ್ಷ ರೂ. ಸಾಲ ಮಾಡಿ, ಮನೆ ನಿರ್ಮಾಣ ಮಾಡುತ್ತಿದ್ದು, ಇನ್ನು ಹೆಚ್ಚಿನ ಹಣ ಬೇಕಾಗಿರುವ ಬಗ್ಗೆ ಪತ್ನಿ ಸುಶೀಲಾ ಅವರಲ್ಲಿ ಪದೇ ಪದೇ ಹೇಳುತ್ತಿದ್ದರು. ಸುಶೀಲಾ ಮೊಗವೀರ ಅವರಿಗೂ ಆರೋಗ್ಯ ಹದಗೆಟ್ಟು, ಹಾಸಿಗೆ ಹಿಡಿದ ಕಾರಣ ಮಾನಸಿಕ ಖನ್ನತೆಗೆ ಒಳಗಾಗಿ ಮದ್ಯಪಾನ ಸಹ ಮಾಡುತ್ತಿದ್ದರು. ಮಾ.2ರಂದು ಬೆಳಗ್ಗೆ ಎದ್ದು ಹೊಸ ಮನೆ ಕೆಲಸದ ಬಗ್ಗೆ ಹೋಗಿದ್ದು ಚಹಾ ಕುಡಿಯಲು ಬೆಳಗ್ಗೆ 8:30 ಗಂಟೆಗೆ ಕರೆಯಲು ಹೋದಾಗ ಹೊಸ ಮನೆಯ ಒಳಗಡೆ ಇರುವ ಟಾಯ್ಲೆಟ್‌ನ ಕಬ್ಬಿಣದ ಜಂತಿಗೆ ಟವೆಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ
ಕಾರ್ಕಳ: ನಿಟ್ಟೆಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್‌ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 2ರಂದು ನಡೆದಿದೆ.

ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾ. 2ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್‌ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ:ಗಾಯ
ಕಾರ್ಕಳ: ಬೋಳ ಗ್ರಾಮದ ಬೋಳ ಪದವು ಎಂಬಲ್ಲಿ ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಎರಡು ಬೈಕ್‌ಗಳ ಸವಾರರು, ಸಹಸವಾರಿ ಗಾಯಗೊಂಡ ಘಟನೆ ನಡೆದಿದೆ.

ಕಿನ್ನಿಗೋಳಿ ನೆಲ್ಲಿಗುಡ್ಡೆ ನಿವಾಸಿ ಗಣೇಶ್‌ ಪ್ರಸಾದ್‌ ಸಂಕಲಕರಿಯ ಕಡೆಯಿಂದ ಮಂಜರಪಲ್ಕೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಎದುರಿನಿಂದ ಮಂಜರಪಲ್ಕೆ ಕಡೆಯಿಂದ ವಿನೋದ ಅವರು ಚಲಾಯಿಸಿಕೊಂಡು ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡು ಬೈಕ್‌ಗಳ ಸವಾರರು ಹಾಗೂ ಸಹಸವಾರ ಬೈಕ್‌ ಸಹಿತ ರಸ್ತೆಗೆ ಬಿದ್ದು ಗಣೇಶ್‌ ಪ್ರಸಾದ್‌ ಮೂಳೆ ಮುರಿತಕ್ಕೆ ಒಳಗಾದರೆ, ವಿನೋದ, ಸಹಸವಾರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಕಾರ್ಕಳ ಪೊಲೀಸ್‌ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಚಾರು: ಪಾದಚಾರಿಗೆ ಬೈಕ್‌ ಢಿಕ್ಕಿ; ಗಂಭೀರ
ಸಿದ್ದಾಪುರ: ಅಂಪಾರು ಗ್ರಾಮದ ಕಂಚಾರು ಜಂಕ್ಷನ್‌ ಬಳಿ ನಡೆದುಕೊಂಡು ಹೋಗುತ್ತಿದ್ದ ಕಾವ್ರಾಡಿ ಗ್ರಾಮದ ಹನ್ನಾಡು ಗುಡ್ಡಿಮನೆ ಸುರೇಶ ದೇವಾಡಿಗ (59) ಅವರಿಗೆ ಬೈಕ್‌ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಸುರೇಶ ಅವರು ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.