![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 4, 2023, 1:26 PM IST
ಬೆಂಗಳೂರು: ಫೇಸ್ಬುಕ್ನಲ್ಲಿ ಮಹಿಳೆಯನ್ನು ಪರಿಚಯಿಸಿಕೊಂಡ ಸೈಬರ್ ಕಳ್ಳರು ಮ್ಯಾರೇಜ್ ಗಿಫ್ಟ್ ಕಳುಹಿಸುವುದಾಗಿ 3.71 ಲಕ್ಷ ರೂ. ಲಪಟಾಯಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ನಿವಾಸಿ ಅಮರಾವತಿ (44) ವಂಚನೆಗೊಳಗಾದ ವರು.
ಅಮರಾವತಿಗೆ ಫೇಸ್ ಬುಕ್ನಲ್ಲಿ ಅಪರಿಚಿತ ಯುವಕನೊಬ್ಬ ಪರಿಚಯವಾಗಿದ್ದ. ನಂತರ ಆತನಿಗೆ ತಮ್ಮ ವಾಟ್ಸ್ಆ್ಯಪ್ ನಂಬರ್ ಕೊಟ್ಟಿದ್ದಳು. ಇದಾದ ಬಳಿಕ ಇಬ್ಬರೂ ಸಲುಗೆಯಿಂದ ಮಾತನಾಡುತ್ತಿದ್ದರು. ತಾನು ನಿಮಗೆ ಬೆಲೆ ಬಾಳುವ ಮ್ಯಾರೇಜ್ ಗಿಫ್ಟ್ ಕಳುಹಿಸುವುದಾಗಿ ನಂಬಿಸಿದ್ದ.
ಇದಾದ ಕೆಲ ದಿನಗಳ ಬಳಿಕ ಅಮರಾವತಿ ಅವರಿಗೆ ಅಪರಿಚಿತ ರೊಬ್ಬರು ಕರೆ ಮಾಡಿ ತಾವು ನವದೆಹಲಿಯಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿ ಕೊಂಡು “ನಿಮ್ಮ ಹೆಸರಿಗೆ ಬೆಲೆ ಬಾಳುವ ಉಡುಗೊರೆಗಳು ಪಾರ್ಸೆಲ್ ಬಂದಿದ್ದು, ಇದನ್ನು ಪಡೆಯಲು ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಹೇಳಿ ಹಂತ-ಹಂತ ವಾಗಿ 3.71 ಲಕ್ಷ ರೂ. ಲಪಟಾಯಿಸಿದ್ದರು.
ಇದಾದ ಬಳಿಕ ಉಡುಗೊರೆಯೂ ಬಾರದೇ, ಕೊಟ್ಟ ದುಡ್ಡು ಹಿಂತಿರುಗಿಸದಿದ್ದ ಹಿನ್ನೆಲೆಯಲ್ಲಿ ಅಮರಾವತಿ ಫೇಸ್ ಬುಕ್ನಲ್ಲಿ ಪರಿಚಯವಾದ ವ್ಯಕ್ತಿ ಹಾಗೂ ಡೆಲ್ಲಿಯಿಂದ ಕರೆ ಮಾಡಿದ ವ್ಯಕ್ತಿ ಕೂಡ ಸಂಪರ್ಕಕ್ಕೆ ಸಿಗಲಿಲ್ಲ. ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.