ದಾವಣಗೆರೆ ಮೇಯರ್ ಚುನಾವಣೆ; ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಬಿಗ್ ಫೈಟ್


Team Udayavani, Mar 4, 2023, 2:58 PM IST

ದಾವಣಗೆರೆ ಮೇಯರ್ ಚುನಾವಣೆ; ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಬಿಗ್ ಫೈಟ್

ದಾವಣಗೆರೆ: ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ನಡೆದ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಉಭಯ ಪಕ್ಷಗಳು ಪರಸ್ಪರ ಧಿಕ್ಕಾರ ಕೂಗಿದರು.

ಮೇಯ-ರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಮೇಯರ್ ಸ್ಥಾನಕ್ಕೆ ಏರಲು ಅಗತ್ಯವಾದ ಬಹುಮತ ಹೊಂದಿರುವ ಬಿಜೆಪಿಯಲ್ಲಿ ಪರಿಶಿಷ್ಟ ಪಂಗಡದವರು ಇರಲಿಲ್ಲ. ಹಾಗಾಗಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ನ ವಿನಾಯಕ ಪೈಲ್ವಾನ್ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ವಿನಾಯಕ ಪೈಲ್ವಾನ್ ಬಿಜೆಪಿಯ ಅಭ್ಯರ್ಥಿಯಾಗಿ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಇದರಿಂದಾಗಿ ಬಿಜೆಪಿಗೆ ಮೇಯರ್ ಸ್ಥಾನ ಒಲಿಯುವುದು ಪಕ್ಕಾ ಆಗಿದೆ.‌ ಮೂರು ಗಂಟೆ ನಂತರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಕೊನೆಗೂ ಅಧಿಕಾರ ಉಳಿಸಿಕೊಳ್ಳಲು ಯಶಸ್ವಿಯಾಗಲಿದೆ.

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಸವಿತಾ ಹುಲ್ಮನೆ ಗಣೇಶ್ ನಾಮಪತ್ರ ಸಲ್ಲಿಸಿದ ನಂತರದ ಕೆಲ ಹೊತ್ತಿನಲ್ಲಿ ವಿನಾಯಕ ಪೈಲ್ವಾನ್ ಮಾಜಿ ಮೇಯರ್ ಎಸ್.ಟಿ. ವೀರೇಶ್ ಅವರೊಟ್ಟಿಗೆ ನಾಮಪತ್ರ ಸಲ್ಲಿ ಸಲು ಆಗಮಿಸುತ್ತಿದ್ದಂತೆಯೇ ವಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಇತರರು, ಬಿಜೆಪಿಯವರ ಜೊತೆಗೆ ಹೋಗಬೇಡ. ನಮ್ಮ ಜೊತೆಗೆ ಇರು ಎಂದು ಒತ್ತಾಯಿಸಿದರು. ವಿನಾಯಕ ಪೈಲ್ವಾನ್ ಅವರನ್ನು ಹಿಡಿದು ಸೆಳೆಯಲು ಯತ್ನಿಸಿದರು. ನಾನು ಎಲ್ಲಿಗೂ ಹೋಗಿಲ್ಲ. ಪಕ್ಷ ಬಿಟ್ಟಿಲ್ಲ ಎಂದು ಹೇಳುತ್ತಲೇ ನಾಮಪತ್ರ ಸಲ್ಲಿಸಲು ತೆರಳಿದರು.

ನಾಮಪತ್ರ ಸಲ್ಲಿಸಿ ಹೊರ ಬಂದ ನಂತರ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ವಿನಾಯಕ ಪೈಲ್ವಾನ್ ಅವರಿಗೆ ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆಯಿತು. ಪರಸ್ಪರ ಧಿಕ್ಕಾರ ಕೂಗಿದರು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಬಿಜೆಪಿ ಸದಸ್ಯರು ವಿನಾಯಕ ಪೈಲ್ವಾನ್ ಅವರನ್ನು ಕರೆದೊಯ್ದರು.

ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಶಿವಲೀಲಾ ಕೊಟ್ರಯ್ಯ, ಬಿಜೆಪಿಯ ಯಶೋಧಾ ಹೆಗ್ಗಪ್ಪ ನಾಮಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

10-bng

Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

8-bng

Bengaluru: ಕಮಲಾನಗರದಲ್ಲಿ 3 ಅಂತಸ್ತಿನ ಕಟ್ಟಡ ಅಡಿಪಾಯ ದಿಢೀರ್‌ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.