ವಸತಿ ಶಾಲೆ ಮಕ್ಕಳಿಗೆ ಸಿಗದ ಸೌಲಭ್ಯ


Team Udayavani, Mar 5, 2023, 11:52 AM IST

tdy-6

ಎಚ್‌.ಡಿ.ಕೋಟೆ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಿ ಅನುದಾನ ಕಲ್ಪಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ, ಏನೆಲ್ಲಾ ಅನಾಹುತ ಆಗುತ್ತದೆ ಎಂಬುದಕ್ಕೆ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಸಾಕ್ಷಿಯಂತಿದೆ.

ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಬಿಆರ್‌ಸಿ ಕೇಂದ್ರದ ಬಳಿ ಇರುವ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಈವರೆಗೆ ಸಮವಸ್ತ್ರ, ಶಾಲಾ ಬ್ಯಾಗ್‌, ನೋಟ್‌ ಪುಸ್ತಕ ವಿತರಿಸಿಲ್ಲ, ಸಮರ್ಪಕ ನೀರಿನ ಸೌಲಭ್ಯವಿಲ್ಲ, ಕೊಠಡಿಯ ಕಿಟಕಿಯ ಗಾಜುಗಳು ಒಡೆದು ವರ್ಷಗಳೇ ಉರುಳಿದರೂ ಸರಿಪಡಿಸಿಲ್ಲ. ಸೌಲಭ್ಯ ಕೇಳಿದರೆ ವಸತಿ ನಿಲಯದ ಸಿಬ್ಬಂದಿಯ ಕೋಪಕ್ಕೆ ವಿದ್ಯಾರ್ಥಿನಿಯರು ತುತ್ತಾಗುವ ಭೀತಿಯಲ್ಲಿದ್ದಾರೆ!.

ಸೌಲಭ್ಯವಿಲ್ಲ: 6ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗಾಗಿ ಕಾರ್ಯನಿರ್ವ ಹಿಸುತ್ತಿರುವ ವಸತಿ ಶಾಲೆಯಲ್ಲಿ ಸುಮಾರು 90 ಮಕ್ಕಳ ದಾಖಲಾತಿ ಇದೆಯಾದರೂ ಸರಾಸರಿ 70 ಮಕ್ಕಳ ನಿರಂತರ ಹಾಜರಾತಿ ಇದೆ. ಕಳೆದ 2ವರ್ಷಗಳ ಹಿಂದೆ ಕೊರೊನಾ ವೇಳೆ ತಡೆ ಹಿಡಿದ ಸವಲತ್ತುಗಳನ್ನು ಈವರೆಗೂ ನೀಡಿಲ್ಲ.

ವಿದ್ಯಾರ್ಥಿನಿ ನಿಲಯದಲ್ಲಿ ಹೊಂದಾಣಿಕೆ ಇಲ್ಲದ ಸಿಬ್ಬಂದಿ: ನಿಲಯದಲ್ಲಿ ಮೇಲ್ವಿಚಾರಕಿ, ಅಡುಗೆ ಸಿಬ್ಬಂದಿ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲ. ಭದ್ರತಾ ಸಿಬ್ಬಂದಿಯೂ ಇಲ್ಲ. ಆಗಾಗ ಗೊಂದಲ ವಾತಾವರಣ ನಿರ್ಮಾಣ ಗೊಳ್ಳುತ್ತಿದೆ. ಹಿರಿಯ ಅಧಿಕಾರಿಗಳು ಪರಿಹಾರಕ್ಕೆ ಕ್ರಮವಹಿಸದಿದ್ದರೆ ಹೆಚ್ಚಿನ ಅನಾಹುತಗಳಾಗುವ ಸಂಭವ ಇದೆ.

ವೇತನದಲ್ಲಿ ತಾರತಮ್ಯ: ನಿಲಯದ ಮೇಲ್ವಿಚಾರಕಿಗೆ ಮಾಸಿಕ 11ಸಾವಿರ ಅಡುಗೆ ತಯಾರಕ ಮಹಿಳೆಯರಿಗೆ ಮಾಸಿಕ 7 ಸಾವಿರ ವೇತನ ನೀಡ ಬೇಕೆಂಬ ನಿಯಮವಿದೆ. ಆದರೆ, ಗುತ್ತಿಗೆದಾರರು ಮೇಲ್ವಿಚಾರಕಿಗೆ 7ಸಾವಿರ, ಅಡುಗೆ ತಯಾರಿ ಮಹಿಳೆಯರಿಗೆ 5,100 ಮಾತ್ರ ನೀಡುತ್ತಿದ್ದಾರೆಂದು ತಿಳಿದು ಬಂದಿದೆ. ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಊಟ, ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ದೊರೆಯುತ್ತಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಮಧ್ಯ ಪ್ರವೇಶಿಸಬೇಕಿದೆ.

ಕೆಲವೊಮ್ಮೆ ಶೌಚಕ್ಕೂ ನೀರು ಇರುವುದಿಲ್ಲ : ಪುರಸಭೆಯಿಂದ ಸಾರ್ವಜನಿಕ ನಲ್ಲಿ ನೀರಿನ ಒಂದೇ ಒಂದು ಸಂಪರ್ಕ ಪಡೆದುಕೊಳ್ಳಲಾಗಿದೆ. ಪ್ರತಿದಿನ ಅರ್ಧತಾಸು ಮಾತ್ರ ನಲ್ಲಿಯಲ್ಲಿ ನೀರು ಬರುತ್ತದೆ. ನೀರಿನ ಸಮಸ್ಯೆ ಪರಿಹಾರಕ್ಕೆಂದು ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಿಂದ ತಾತ್ಕಾಲಿಕ ನೀರಿನ ಸಂಪರ್ಕ ಪಡೆದುಕೊಳ್ಳಲಾಗಿದೆ. ಕೆಲವು ಸಂದರ್ಭದಲ್ಲಿ ವಸತಿ ನಿಲಯಕ್ಕೆ ನೀರಿಲ್ಲದೆ ಸ್ನಾನಕ್ಕೆ ಇರಲಿ, ಶೌಚಾಲಯದ ನೀರಿಗೂ ಪರದಾಡುವ ಸ್ಥಿತಿ ಮೂಮೂಲಿ.

ಕಿಟಕಿಯ ಗಾಜು ಒಡೆದಿದ್ದು ಭಯ ಕಾಡುತ್ತಿದೆ: ನಿಲಯದ ಕೊಠಡಿಗಳ ಕಿಟಕಿಗಳಿಗೆ ಗಾಜುಗಳಿಲ್ಲ, ತೆರೆದ ಕಿಟಕಿ ಬಾಗಿಲುಗಳಿಂದ ನಿಲಯದಲ್ಲಿ ರಾತ್ರಿ ವೇಳೆ ವಿದ್ಯಾರ್ಥಿನಿಯರು ಭಯಭೀತರಾಗುತ್ತಿದ್ದಾರೆ. ಸರಿಪಡಿಸುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಬಿಆರ್‌ಸಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಮಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ದೂರಿದ್ದಾರೆ.

ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ: ಬಿಇಒ : ನಿಲಯದ ವಿದ್ಯಾರ್ಥಿನಿಯರಿಗೆ ಬ್ಯಾಗ್‌, ನೋಟ್‌ಬುಕ್‌, ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ. ನೀರಿನ ಸಮಸ್ಯೆ ಪರಿಹಾರ ಮತ್ತು ಕೊಠಡಿಗಳ ಕಿಟಕಿ ಗಾಜು ರಿಪೇರಿ ಸೇರಿ ಇನ್ನಿತರ ಸಮಸ್ಯೆ ಪರಿಹಾರಕ್ಕೆ ಡಿಡಿಪಿಐ ಅವರಿಂದ ಅನುಮೋದನೆ ಪಡೆಯಲಾಗುತ್ತದೆ. ಜತೆಗೆ ನಿಲಯದ ಸಿಬ್ಬಂದಿ ಹೊಂದಾಣಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ಉದಯಕುಮಾರ್‌ ತಿಳಿಸಿದ್ದಾರೆ.

ನಿಲಯದಲ್ಲಿ ಊಟ ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ಇಲ್ಲ. ಕೊರೊನಾ ಬಳಿಕ, ಬ್ಯಾಗ್‌, ಬಟ್ಟೆ, ನೋಟ್‌ ಪುಸ್ತಕಕ್ಕೆ ತಡೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. -ಕಾವ್ಯಾ, ನಿಲಯದ ವಿದ್ಯಾರ್ಥಿನಿ(ಹೆಸರು ಬದಲಿಸಿದೆ)

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

12-bng-crime

Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ

11-bng

Bengaluru: ಮೆಡಿಕಲ್‌ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.