ಕೊನೆಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ ಐಸಿಸ್
Team Udayavani, Mar 5, 2023, 3:58 PM IST
ಮಂಗಳೂರು: ಕಳೆದ ವರ್ಷದ ನವೆಂಬರ್ ನಲ್ಲಿ ಮಂಗಳೂರು ಕಂಕನಾಡಿ ಬಳಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ (ISIS) ಹೊತ್ತುಕೊಂಡಿದೆ ಎಂದು ವರದಿ ತಿಳಿಸಿದೆ.
ಕಳೆದ ವರ್ಷ ತಮಿಳುನಾಡಿನ ಕೊಯಂಬತ್ತೂರು ಮತ್ತು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನೂ ಐಎಸ್ಗೆ ಸೇರಿದ ಉಗ್ರರು ನಡೆಸಿದ್ದರು ಎಂದು ಹೇಳಿಕೊಂಡಿದೆ.
ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ, ಕಳೆದ ವರ್ಷ ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನು ಐಎಸ್ ಅಂಗಸಂಸ್ಥೆ ಉಗ್ರಗಾಮಿಗಳು ನಡೆಸಿದೆ ಎಂದು ಹೇಳಿಕೊಂಡಿದೆ.
ಇದನ್ನೂ ಓದಿ:ಕರಾವಳಿಯ ಕಲಾವಿದನ ಕೈಚಳಕಕ್ಕೆ ಮನಸೋತ ಕೇಂದ್ರ ಸಚಿವೆ
ಮಂಗಳೂರಿನಲ್ಲಿ ನಡೆದ ಸ್ಫೋಟವು ಆಕಸ್ಮಿಕವಲ್ಲ. ಇದು ‘ಭಯೋತ್ಪಾದನಾ ಕೃತ್ಯ’ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆ ಸಮಯದಲ್ಲೇ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದೂ ಪ್ರವೀಣ್ ಸೂದ್ ಮಾಹಿತಿ ನೀಡಿದ್ದರು.
#India: Islamic State Wilāyah Khorāsān claims, in its Voice of Khorāsān magazine – Issue 23, that the blast in Mangalore, Karnataka last year was carried out by IS affiliated militant(s). https://t.co/Ueu4gHfR4u
— Fineet (فينيت) (@cozyduke_apt29) March 4, 2023
ಆದರೆ ಆ ಬಳಿಕ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ತನ್ನದೇ ಕೃತ್ಯ ಎಂದು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿತ್ತು. ಕದ್ರಿ ದೇವಸ್ಥಾನ ತನ್ನ ಟಾರ್ಗೆಟ್ ಆಗಿತ್ತು ಎಂದು ಅದು ಹೇಳಿಕೊಂಡಿದೆ. ಜತೆಗೆ ‘ನಿಮ್ಮ ಸಂಭ್ರಮ ಕ್ಷಣಿಕವಷ್ಟೇ, ಸದ್ಯದಲ್ಲಿಯೇ ತಕ್ಕ ಪರಿಣಾಮ ಎದುರಿಸುತ್ತೀರಿ’ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಐಸಿಸ್ ಈ ರೀತಿ ಹೇಳಿಕೊಂಡಿದೆ.
ಘಟನೆಯಲ್ಲಿ ಉಗ್ರ ಶಾಕೀರ್ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆರೋಪಿ ಶಾಕೀರ್ ಜತೆ ನಿಕಟ ಸಂಬಂಧ ಹೊಂದಿದ್ದ ಆರೋಪದಲ್ಲಿ ತನಿಖಾ ಅಧಿಕಾರಿಗಳು ನಗರದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.