ನಟಿಯ ತಾಯಿಯಿಂದ ಸಾವಿರಾರು ರೂ. ವಸೂಲಿ ಮಾಡಿದ ನಕಲಿ ಪೊಲೀಸ್!
Team Udayavani, Mar 11, 2023, 7:35 AM IST
ಮಂಗಳೂರು: ಪೊಲೀಸ್ ಸೋಗಿನಲ್ಲಿ ನಟಿಯೋರ್ವಳ ತಾಯಿ ಬಳಿಯಿಂದ ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು.
ಅವರ ಮನೆಗೆ ಪೊಲೀಸ್ ಸಮವಸ್ತ್ರದ ವೇಷದಲ್ಲಿ ತೆರಳಿದ ವ್ಯಕ್ತಿ ತಾನು ಪಾಂಡೇಶ್ವರ ಠಾಣೆಯ ಪೊಲೀಸ್ ಎಂದು ಪರಿಚಯಿಸಿಕೊಂಡು “ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ. ದಂಧೆ ನಡೆಸುತ್ತಿರುವುದು ಸಾಹೇಬರಿಗೆ ಗೊತ್ತಾಗಿದೆ. ಸಾಹೇಬರ ಜತೆ ಸಹಕರಿಸಿದರೆ ದಂಧೆಗೆ ತೊಂದರೆ ಆಗುವುದಿಲ್ಲ. ಗೂಗಲ್ ಪೇ ಮಾಡಿದರೆ ರೈಡ್ ಮಾಡುವುದಿಲ್ಲ” ಎಂದು ಬೆದರಿಕೆ ಹಾಕಿ ಹೋಗಿದ್ದ.
ಆ ಬಳಿಕ ಕರೆ ಮಾಡಿದ ವ್ಯಕ್ತಿ “ನಿಮ್ಮ ಮನೆಯಲ್ಲಿ ಚಿನ್ನಾಭರಣ, ಹಣ ಇದೆ ಎಂದು ದೂರು ಬಂದಿದೆ. ಪ್ರಕರಣ ಮುಚ್ಚಿಹಾಕಲು ಹಣ ಕೊಡಬೇಕು ಇಲ್ಲವಾದರೆ ಪೊಲೀಸರು ದಾಳಿ ಮಾಡುತ್ತಾರೆ” ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಮಹಿಳೆ ಹತ್ತಿರದ ಮೊಬೈಲ್ ಶಾಪ್ಗೆ ಹೋಗಿ ಗೂಗಲ್ ಪೇ ಮೂಲಕ 18 ಸಾವಿರ ರೂ. ವರ್ಗಾಯಿಸಿದ್ದಾರೆ.
ಮತ್ತೆ ಕರೆ ಮಾಡಿದ ಅದೇ ವ್ಯಕ್ತಿ, ಫೈಲ್ ಪೊಲೀಸ್ ಆಯುಕ್ತರ ಕಚೇರಿಗೂ ಹೋಗಿದೆ, ಪ್ರಕರಣವನ್ನು ಮುಚ್ಚಿ ಹಾಕಲು ಹಣ ನೀಡಬೇಕು. ಇಲ್ಲವಾದರೆ ಆಯುಕ್ತರು ಮಾಧ್ಯಮದವರೊಂದಿಗೆ ಮನೆಗೆ ಬರುತ್ತಾರೆ ಎಂದು ಬೆದರಿಕೆ ಹಾಕಿದ್ದಾನೆ. ಹೆದರಿಕೊಂಡ ಮಹಿಳೆ ಮೊಬೈಲ್ ಶಾಪ್ಗೆ ಹೋಗಿ 20 ಸಾವಿರ ರೂ.ಗಳನ್ನು ಗೂಗಲ್ ಪೇ ಮಾಡಿದ್ದಾರೆ. ಹೀಗೆ ಒಟ್ಟು 38 ಸಾವಿರ ರೂ. ಹಣವನ್ನು ನಕಲಿ ಪೊಲೀಸ್ ನೀಡಿದ ಸಂಖ್ಯೆಗೆ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.