ಎಚ್‌3ಎನ್‌2 ನಿಯಂತ್ರಣಕ್ಕೆ ಕಣ್ಗಾವಲು ಕಾರ್ಯಜಾಲ


Team Udayavani, Mar 11, 2023, 8:10 AM IST

ಎಚ್‌3ಎನ್‌2 ನಿಯಂತ್ರಣಕ್ಕೆ ಕಣ್ಗಾವಲು ಕಾರ್ಯಜಾಲ

ಹೊಸದಿಲ್ಲಿ: ಕೊರೊನಾ ಬಳಿಕ ಇದೀಗ ದೇಶದಲ್ಲಿ ಎಚ್‌3 ಎನ್‌2 ವೈರಾಣುವಿನ ಭೀತಿ ಹೆಚ್ಚಿದೆ. ಸೋಂಕು ಪ್ರಕರಣಗಳ ಪ್ರತಿಕ್ಷಣದ ಮೇಲ್ವಿಚಾರಣೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸಮಗ್ರ ರೋಗ ನಿಯಂತ್ರಣ ಕಣ್ಗಾವಲು ಕಾರ್ಯಜಾಲ (ಐಡಿಎಸ್‌ಪಿ)ವನ್ನು ಸಿದ್ಧಪಡಿಸಿದೆ. ಕಾರ್ಯಕ್ರಮದ ಅನ್ವಯ, ಮಕ್ಕಳು, ವೃದ್ಧರು ಹಾಗೂ ಇತರ ರೋಗಗಳಿರುವ ಜನರಲ್ಲಿ ಎಚ್‌3ಎನ್‌2 ಸೋಂಕು ದೃಢಪಟ್ಟಿದ್ದರೆ, ಅಂಥವರಲ್ಲಿ ಸೋಂಕಿನ ತೀವ್ರತೆ, ಪರಿಣಾಮದ ಮೇಲೆ ಗಮನಹರಿಸಲಾಗುತ್ತಿದೆ. ಅಲ್ಲದೇ ಇಂಥ ಗುಂಪಿನ ಜನರ ಮೇಲೆ ಸೋಂಕಿನಿಂದಾಗುತ್ತಿರುವ ಮರಣ ಪ್ರಮಾಣದ ಮೇಲೂ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಕಾಲೋಚಿತವಾಗಿ ಶೀತಜ್ವರ ಪ್ರಕರಣಗಳು ವರದಿಯಾಗುತ್ತವೆ. ಆದರೆ ಎಚ್‌3ಎನ್‌2 ನಿಂದ ಶುರುವಾಗಿರುವ ಶೀತಜ್ವರವು ಹೆಚ್ಚಿನ ಜನರಲ್ಲಿ ಉಸಿರಾಟದ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದು, ಈಗಾಗಲೇ ಪ್ರಪಂಚ ದಾದ್ಯಂತ ಪ್ರಕರಣಗಳು ಏರಿಕೆಯಾಗಿವೆ. ಈ ಹಿನ್ನೆಲೆ ದೇಶದಲ್ಲಿ ಈ ಸಮಸ್ಯೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಐಡಿಎಸ್‌ಪಿ ಸ್ಥಾಪಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇನ್ನು ಎಚ್‌3ಎನ್‌2 ನಿಂದ ದೇಶದಲ್ಲಿ ಈವರೆಗೆ 2 ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಸರಕಾರ ತಿಳಿಸಿದೆ. ಆದರೆ ಅನ್ಯಮೂಲಗಳು ಒಟ್ಟು ಸಾವಿನ ಸಂಖ್ಯೆ 6 ಎಂದು ತಿಳಿಸಿದ್ದು, ಈ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ.

ಎಚ್‌1ಎನ್‌1 ಉಪತಳಿ
ಹಂದಿಜ್ವರಕ್ಕೆ ಕಾರಣವಾಗಿದ್ದ ಎಚ್‌1ಎನ್‌1 ವೈರಾಣುವಿನ ರೂಪಾಂತರಿಯೇ ಎಚ್‌3ಎನ್‌2 ವೈರಾಣು ಆಗಿದ್ದು, ನ್ಯುಮೋನಿಯ ಸೇರಿದಂತೆ ಉಸಿರಾಟದ ಸಮಸ್ಯೆಗಳನ್ನು ಹೊಂದಿರುವವರಲ್ಲಿ ಸೋಂಕು ಗಂಭೀರ ಪರಿಣಾಮವನ್ನು ಉಂಟು ಮಾಡುತ್ತಿದೆ. ಈ ಹಿನ್ನೆಲೆ ವೈರಾಣುವಿನ ಕುರಿತು ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಗಸೂಚಿ ಬಿಡುಗಡೆ
ಮಕ್ಕಳು, ವೃದ್ಧರು ಹಾಗೂ ಇತರೆ ಆರೋಗ್ಯ ಸಮಸ್ಯೆ ಹೊಂದಿರುವವರು ಸೋಂಕಿನ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಅಲ್ಲದೇ, ಕೊರೋನಾ ಸಂದರ್ಭದಲ್ಲಿನ ನಿಯಮ ಮಾರ್ಗಸೂಚಿಗಳನ್ನು ಮತ್ತೆ ಬಿಡುಗಡೆಗೊಳಿಸಿದೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಕೈ ಶುಚಿಗೊಳಿಸುವುದು ಸೇರಿದಂತೆ ಅಗತ್ಯಕ್ರಮಗಳನ್ನು ಪಾಲಿಸುವಂತೆಯೂ ಸೂಚನೆ ನೀಡಿದೆ. ಭಾರತೀಯ ವೈದ್ಯಕೀಯ ಆಯೋಗ ಕೇಂದ್ರ ಹಾಗೂ ರಾಜ್ಯಸರಕಾರಗಳಿಗೂ ಸೂಚನೆಗಳನ್ನು ರವಾನಿಸಿದೆ. ರೋಗಿಗಳ ಆರೋಗ್ಯ ಸ್ಥಿತಿಯನ್ನು ನೋಡಿ ಕ್ರಮ ತೆಗೆದುಕೊಳ್ಳಲು ಸಲಹೆ ನೀಡಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.