ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ


Team Udayavani, Mar 14, 2023, 5:01 AM IST

ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ

ದಯಾನಂದ ಕೆ. ಸುವರ್ಣ,
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ
ರಾಜ್ಯದ ಆರ್ಥಿಕತೆಗೆ ತನ್ನದೇ ಕೊಡುಗೆ ನೀಡುವ ಮೂಲಕ ಕರಾವಳಿಯ ಆರ್ಥಿಕತೆಯನ್ನು ಸದೃಢವಾಗಿಸುವಲ್ಲಿ ಮೀನುಗಾರಿಕೆ ಪ್ರಮುಖ ಪಾತ್ರವಹಿಸುತ್ತಿದೆ. ಕಡಲ ಮೀನುಗಾರಿಕೆ ಮತ್ತು ಉಪ ಕಸುಬು ಗಳನ್ನು ಅವಲಂಬಿಸಿ ಸಾವಿರಾರು ಕುಟುಂಬಗಳು ಇವೆ. 2021-22ರಲ್ಲಿ 5.89 ಲಕ್ಷ ಮೆಟ್ರಿಕ್‌ ಟನ್‌ ಕಡಲ ಮೀನು ಉತ್ಪಾದನೆಯಾಗಿದೆ. ಕಡಲ ಮೀನುಗಾರಿಕೆಯಲ್ಲಿ 4,744 ಯಾಂತ್ರೀ ಕೃತ ದೋಣಿಗಳು, 10,084 ಮೋಟಾರು ದೋಣಿಗಳು ಹಾಗೂ 7,714 ಸಾಂಪ್ರದಾಯಿಕ ದೋಣಿಗಳಿವೆ. ಯಾಂತ್ರೀಕೃತ ದೋಣಿಗಳು ರಾಜ್ಯದ ಒಟ್ಟು ಕಡಲ ಮೀನು ಉತ್ಪಾದನೆಯ ಶೇ.85ಕ್ಕೂ ಅಧಿಕ ಪಾಲು ಹೊಂದಿವೆ. 1962.19 ಕೋಟಿ ಮೌಲ್ಯದ 1,20,427 ಮೆಟ್ರಿಕ್‌ ಟನ್‌ ಸಾಗರೋತ್ಪನ್ನಗಳನ್ನು 2021-22ರಲ್ಲಿ ಹೊರ ದೇಶ ಹಾಗೂ ರಾಜ್ಯಗಳಿಗೆ ರಫ್ತು ಮಾಡಲಾಗಿದೆ.

ಮೀನುಗಾರರ ಬಹುಪಾಲು ಬದುಕು ಕಡಲ ಮಧ್ಯೆ ದೋಣಿ ಯಲ್ಲೇ ಇರುತ್ತದೆ. ಮೀನುಗಾರರ ಅದೆಷ್ಟೋ ಬೇಡಿಕೆಗಳು ಈಡೇರದೆ ಉಳಿದುಕೊಂಡಿವೆ. ಈ ಬಾರಿಯ ಚುನಾವಣೆಯಲ್ಲಾದರೂ ರಾಜಕೀಯ ಪಕ್ಷಗಳ ಪ್ರಣಾಳಿಕೆ ಯಲ್ಲಿ ಮೀನುಗಾರರ ಪ್ರಮುಖ ಬೇಡಿಕೆಗಳು ಇರಲಿ ಮತ್ತು ಅದಕ್ಕೆ ಪರಿಹಾರವೂ ಸಿಗುವಂತಾಗಲಿ.

ಮಲ್ಪೆ ಸಹಿತ ಕೆಲವು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ಮೇ ಅಂತ್ಯಕ್ಕೆ ಮೀನುಗಾರಿಕೆಯ ಋತು ಮುಗಿದು ಬೋಟುಗಳನ್ನು ಲಂಗರು ಹಾಕಲಾಗುತ್ತದೆ. ಅಷ್ಟರೊಳಗೆ ಹೂಳೆತ್ತುವ ಕಾರ್ಯ ಆಗಬೇಕು.

ಪ್ರತೀ ವರ್ಷವೂ ಮೇ ಅಂತ್ಯದೊಳಗೆ ಹೂಳೆತ್ತಬೇಕು. ಬೋಟುಗಳಿಗೆ ದಿನಕ್ಕೆ ನಿಗದಿ ಮಾಡಿರುವ ಡೀಸೆಲ್‌ ಮಿತಿಯನ್ನು 300 ಲೀಟರ್‌ನಿಂದ 500 ಲೀಟರ್‌ಗೆ ಹೆಚ್ಚಿಸಬೇಕು ಮತ್ತು ಅದನ್ನು ಯಾವ ತಿಂಗಳಿನಲ್ಲಿ ಬೇಕಾದರೂ ಪಡೆಯಲು ಅವಕಾಶ ನೀಡಬೇಕು.

ನಾಡದೋಣಿ ಮೀನುಗಾರರಿಗೆ ನಿರ್ದಿಷ್ಟ ಪ್ರಮಾಣದ ಸೀಮೆಎಣ್ಣೆಯನ್ನು ಆಯಾ ತಿಂಗಳು ಸಿಗುವಂತೆ ಮಾಡಬೇಕು. ಪೆಟ್ರೋಲ್‌ ಎಂಜಿನ್‌ ಬರುವ ತನಕವೂ ಇದನ್ನು ಮುಂದುವರಿಸಬೇಕು.

ಮೀನುಗಾರ ಮಹಿಳೆಯರಿಗೆ 50,000 ರೂ. ವರೆಗೆ ಬಡ್ಡಿರಹಿತ ಸಾಲ ಪುನರ್‌ ಆರಂಭಿಸಬೇಕು ಮತ್ತು ಈ ಹಿಂದೆ ಆಗಿರುವ ಮೀನುಗಾರರ ಸಾಲಮನ್ನಾ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗಬೇಕು.

ಎಲ್ಲ ಬಂದರುಗಳ ನಿರ್ವಹಣೆಗೆ ನಿರ್ದಿಷ್ಟ ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಮತ್ತು ಮೀನುಗಾರಿಕೆಗೆ ನೀಡುವ ಒಟ್ಟಾರೆ ಅನುದಾನದ ಪ್ರಮಾಣವನ್ನು ಹೆಚ್ಚಿಸಬೇಕು.

ಭದ್ರತೆಯ ವಿಷಯವಾಗಿ ಎಲ್ಲ ಬಂದರುಗಳಲ್ಲೂ ಸಿಸಿ ಕೆಮರಾ ಅಳವಡಿಸಬೇಕು. ಮೀನುಗಾರರ ರಕ್ಷಣೆಗೆ ಸೀ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು.

ಸಮುದ್ರದ ಮಧ್ಯದಲ್ಲಿ ಮೀನುಗಾರರ ಮೇಲೆ ಹೊರ ರಾಜ್ಯದವರಿಂದ ಆಗುವ ಹಲ್ಲೆಯನ್ನು ತಡೆಯಲು ಕ್ರಮ ಆಗಬೇಕು. ಮೀನುಗಾರರಿಗೆ ಸರಕಾರದಿಂದ ನೀಡುವ ವಸತಿ ಯೋಜನೆಯ ಅನುದಾನ ಹೆಚ್ಚಳ ಮಾಡಬೇಕು.
ಕಡಲಿನಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೀನುಗಾರ ಮಹಿಳೆಯರಿಗೂ ಅಗತ್ಯ ಸೌಲಭ್ಯಗಳನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಒದಗಿಸಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.