ಕೋಲ್ಡ್‌ ನೀರನ್ನು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು?

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದು ಮೆದುಳಿನ ಮೇಲೆ ಕೂಡಾ ಪರಿಣಾಮ ಬೀರುವ ಸಾಧ್ಯತೆ ಇದೆ

Team Udayavani, Mar 14, 2023, 5:40 PM IST

Web-cold-water

ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದು ಹಿತವೆನಿಸುತ್ತದೆ. ಬೇಸಿಗೆ ಕಾಲದಲ್ಲಿ ಹಲವರಿಗೆ ಬಿಸಿಲಿನಿಂದ ಬಂದ ತಕ್ಷಣ ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸವಿರುತ್ತದೆ. ಕೆಲವರಿಗಂತೂ ಬಿಸಿಲು ಜಾಸ್ತಿಯಾಗುತ್ತಿದ್ದಂತೆಯೇ ಕೋಲ್ಡ್ ನೀರು ಬೇಕೇ ಬೇಕು ಎನಿಸುತ್ತದೆ. ಆದರೆ ಫ್ರಿಡ್ಜ್ ನಲ್ಲಿರುವ ನೀರು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕಾಗಿ ವೈದ್ಯರು ಸಾಧ್ಯವಾದಷ್ಟು ನೀರು ಕುಡಿಯುವಂತೆ ಸಲಹೆ ನೀಡುತ್ತಾರೆ. ಕೆಲವರು ತಣ್ಣೀರು ಹೆಚ್ಚು ಕುಡಿಯುತ್ತಾರೆ. ಬಿಸಿಲ ಬೇಗೆಯಲ್ಲಿ ಕೋಲ್ಡ್ ನೀರು ಕುಡಿಯುವುದು ಒಂದು ಕ್ಷಣಕ್ಕೆ ಹಿತ ಎನಿಸಬಹುದು. ಆದರೆ ಅದು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂಬುದು ಹಲವರಿಗೆ ತಿಳಿದಿಲ್ಲ.

ಶ್ರಮದಾಯಕ ಕೆಲಸದ ನಂತರ, ವ್ಯಾಯಾಮದ ಬಳಿಕ ಕೋಲ್ಡ್‌ ನೀರು ಕುಡಿಯುವುದು ಅಪಾಯಕಾರಿ. ಕೋಲ್ಡ್ ನೀರು ಕುಡಿಯುವುದರಿಂದ ಗಂಟಲು ಮತ್ತು ಮೂಗು ನೋವು ಹೆಚ್ಚಾಗುತ್ತದೆ. ವಿಶೇಷವಾಗಿ ಊಟದ ನಂತರ ನೀರು ಕುಡಿಯುವುದು, ಹೆಚ್ಚುವರಿ ಲೋಳೆಯು ಸಂಗ್ರಹಗೊಳ್ಳಲು ಕಾರಣವಾಗಬಹುದು. ಆಗ ಅನೇಕ ಉರಿಯೂತದ ಸೋಂಕುಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದರಿಂದಾಗುವ ಇತರ ಆರೋಗ್ಯ ತೊಂದರೆಗಳು ಏನೆಂಬುದರ ಬಗ್ಗೆ ಗಮನ ಹರಿಸೋಣ..

ರೋಗನಿರೋಧಕ ಶಕ್ತಿ ದುರ್ಬಲ:

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಹಾಗಾಗಿ, ಬೇಸಿಗೆಯಲ್ಲಿಯೂ ಸಾಮಾನ್ಯ ನೀರನ್ನು (ಫ್ರಿಜ್‌ ನಲ್ಲಿರಿಸದ) ಕುಡಿಯಲು ಪ್ರಯತ್ನಿಸಿ. ಹೀಗೆ ಮಾಡಿದಾಗ ಕೆಲವು ಕಾಯಿಲೆಗಳನ್ನು ಕೂಡಾ ನಾವು ದೂರವಿರಿಸಬಹುದು.

ತಲೆನೋವು ಮತ್ತು ಸೈನಸ್ ಸಾಧ್ಯತೆ:

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿದ ತಕ್ಷಣ ಅದು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾದಾಗ ತಲೆ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅತಿಯಾಗಿ ತಂಪಾದ ನೀರು ಕುಡಿಯುವುದರಿಂದ ‘ಮೆದುಳು ಫ್ರೀಜ್’ ಸಮಸ್ಯೆ ಉಂಟಾಗುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಬೆನ್ನುಮೂಳೆಯ ಸೂಕ್ಷ್ಮ ನರಗಳನ್ನು ತಂಪಾಗಿಸುತ್ತದೆ, ಇದರಿಂದಾಗಿ ಅದು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣಕ್ಕಾಗಿ ತಲೆನೋವು, ಸೈನಸ್ ಸಮಸ್ಯೆ ಸಂಭವಿಸಬಹುದು.

ಹೃದಯ ಬಡಿತ ನಿಧಾನವಾಗಿಸುತ್ತದೆ:

ಫ್ರಿಜ್ ನೀರು ಕುಡಿಯುವುದರಿಂದ ಹೃದಯ ಬಡಿತದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾಮಾನ್ಯ ನೀರನ್ನು ಕುಡಿಯಲು ಪ್ರಯತ್ನಿಸಿ. ತಂಪಾದ ನೀರು ಹೃದಯ ಬಡಿತವನ್ನು ಕಡಿಮೆ ಮಾಡುತ್ತದೆ. ಹೀಗಾದಾಗ ಹೃದ್ರೋಗದ ಅಪಾಯ ಕೂಡಾ ಹೆಚ್ಚುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದು ಮೆದುಳಿನ ಮೇಲೆ ಕೂಡಾ ಪರಿಣಾಮ ಬೀರುವ ಸಾಧ್ಯತೆ ಇದೆ.

ಜೀರ್ಣಕ್ರಿಯೆ ಸಮಸ್ಯೆಗೆ ಕಾರಣ:

ದೇಹದ ಉಷ್ಣತೆ ಮತ್ತು ತೇವಾಂಶವನ್ನು ನಿಯಂತ್ರಿಸಲು ಪ್ರಯತ್ನಿಸುವುದರಿಂದ ಜೀರ್ಣಕ್ರಿಯೆ ಸಮಸ್ಯೆ ಉಂಟಾಗುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿದರೆ ನಾವು ಸೇವಿಸುವ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ. ಹೊಟ್ಟೆ ನೋವು, ವಾಕರಿಕೆ, ಮಲಬದ್ಧತೆ ಮತ್ತು ವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ದೇಹದ ಕೊಬ್ಬನ್ನು ಹೆಚ್ಚಿಸಿಸುತ್ತದೆ:

ಫ್ರಿಡ್ಜ್ ನಲ್ಲಿರಿಸಿದ ನೀರು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಗಟ್ಟಿಯಾಗಿಸುತ್ತದೆ ಮತ್ತು ದೇಹಕ್ಕೆ ಅನಗತ್ಯ ಕೊಬ್ಬನ್ನು ಒಡೆಯಲು ಕಷ್ಟವಾಗುತ್ತದೆ. ಅಲ್ಲದೆ ಊಟವಾದ ತಕ್ಷಣ ಅಥವಾ ಊಟಕ್ಕಿಂತ ಮುಂಚೆ ನೀರು ಕುಡಿಯುವುದು ಸೂಕ್ತವಲ್ಲ. ಊಟ ಮಾಡುವ ಅರ್ಧ ಗಂಟೆ ಮುಂಚಿತವಾಗಿ ಅಥವಾ ಊಟವಾದ ಅರ್ಧ ಗಂಟೆ ಬಳಿಕ ನೀರು ಕುಡಿಯುವುದು ಸೂಕ್ತ ಸಮಯ.

ವ್ಯಾಯಾಮ ಮಾಡಿದ ನಂತರ ಐಸ್ ನೀರನ್ನು ಕುಡಿಯುವುದು ಒಳ್ಳೆಯದಲ್ಲ. ವ್ಯಾಯಾಮದ ನಂತರ ಉಗುರುಬೆಚ್ಚನೆಯ ನೀರನ್ನು ಕುಡಿಯುವುದು ಉತ್ತಮ. ವ್ಯಾಯಾಮ ಮಾಡುವುದರಿಂದ ದೇಹದ ಉಷ್ಣತೆ ಹೆಚ್ಚುತ್ತದೆ. ತಕ್ಷಣ ಐಸ್ ವಾಟರ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಕಿರಿಕಿರಿ ಉಂಟು ಮಾಡುತ್ತದೆ. ಅಲ್ಲದೆ ಫ್ರಿಡ್ಜ್ ನಲ್ಲಿರಿಸಿದ ನೀರನ್ನು ದೇಹವು ಹೀರಿಕೊಳ್ಳುವುದಿಲ್ಲ ಆದ್ದರಿಂದ ಅದನ್ನು ಕುಡಿಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.