ಮಲ್ಪೆ ಬಂದರಿಗೆ ಕೊನೆಗೂ ಹೂಳಿನಿಂದ ಮುಕ್ತಿ
3 ಕೋ.ರೂ. ಅನುದಾನ, ಹೂಳು ತೆರವು ಕಾಮಗಾರಿ ಆರಂಭ
Team Udayavani, Mar 16, 2023, 6:30 AM IST
ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ.
ಗುತ್ತಿಗೆ ಪಡೆದಿರುವ ಗೋವಾ ಮೂಲದ ಭಾರ್ಗವಿ ಕಂಪೆನಿಯ ಯಂತ್ರಗಳು ಬಂದರಿನ 3 ಬೇಸಿನ್ಗಳಲ್ಲಿ ಮತ್ತು ನ್ಯಾವಿಗೇಶನ್ ಚಾನೆಲ್ಗಳಲ್ಲಿ ತುಂಬಿಕೊಂಡಿರುವ ಸುಮಾರು 96 ಸಾವಿರ ಕ್ಯೂಬಿಕ್ ಮೀ. ಹೂಳನ್ನು ತೆರವುಗೊಳಿಸಲಾರಂಭಿಸಿವೆ.
8 ಕಿ.ಮೀ. ದೂರಕ್ಕೆ ಹೂಳು
ಸದ್ಯ 2 ಯಂತ್ರಗಳು, 30ಕ್ಕೂ ಹೆಚ್ಚು ಸಿಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಬೇಸಿನ್ 1 ಮತ್ತು 2ರಿಂದ ತೆಗೆದ ಹೂಳನ್ನು ದಕ್ಕೆಯಲ್ಲಿ ಸಂಗ್ರಹಿಸಲಾಗುತ್ತದೆ. ಇದಕ್ಕೆ ಉತ್ತಮ ಬೇಡಿಕೆ ಇರುವುದರಿಂದ ಒಣಗಿದ ಬಳಿಕ ಸ್ಥಳಾಂತರ ಮಾಡಲಾಗುತ್ತದೆ. ಬಂದರು ಪ್ರದೇಶದಿಂದ ತೆರವುಗೊಳಿಸಿದ ಹೂಳನ್ನು ಬಾರ್ಜ್ನ ಮೂಲಕ ಸುಮಾರು 8 ಕಿ.ಮೀ. ದೂರ ಅಳಸಮುದ್ರಕ್ಕೆ ಒಯ್ದು ಅಲ್ಲಿ ಸುರಿಯಲಾಗುತ್ತದೆ.
ಕಡಲಿಗಿಂತ ಬಂದರು ಅಪಾಯ
7-8 ವರ್ಷಗಳಿಂದ ಹೂಳು ತೆರವುಗೊಳಿಸದ್ದರಿಂದ ಮಲ್ಪೆ ಬಂದರು ಮೃತ್ಯುಕೂಪವಾಗಿತ್ತು. ಮೀನುಗಾರರ ಪಾಲಿಗೆ ಕಡಲಿಗಿಂತ ಬಂದರಿನಲ್ಲಿ ತುಂಬಿರುವ ಹೂಳು ಸಂಚಕಾರ ತರುತ್ತಿತ್ತು. ಪೊಲೀಸ್ ಇಲಾಖೆಯ ಅಂಕಿ-ಅಂಶಗಳ ಪ್ರಕಾರ 2016ರಿಂದ ಇಲ್ಲಿಯವರೆಗೆ 80ಕ್ಕೂ ಅಧಿಕ ಮಂದಿ ಮೀನುಗಾರ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇನ್ನು ದಾಖಲೆಗೆ ಸಿಗದೇ ಮೃತಪಟ್ಟವರು ಹಲವರು. 60ಕ್ಕೆ ಹೆಚ್ಚು ಮಂದಿಯನ್ನು ಮುಳುಗು ತಜ್ಞ ಈಶ್ವರ ಮಲ್ಪೆ ರಕ್ಷಿಸಿದ್ದಾರೆ.
ಆದಾಯದ ಮೇಲೆ ಪರಿಣಾಮ
ಇಲ್ಲಿನ ಹೂಳಿನಿಂದಾಗಿ ಬೋಟು ಗಳ ಸಂಚಾರ ಕಷ್ಟಸಾಧ್ಯವಾಗಿತ್ತು. ಹೂಳು ಹೆಚ್ಚಾಗಿದ್ದ ಕಡೆ ಬೋಟುಗಳು ಸಿಲುಕಿ ಸಾಕಷ್ಟು ಹಾನಿಗೀಡಾಗುತ್ತಿದ್ದವು. ಇದು ಬಂದರಿನ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿತ್ತು. ರಾಜ್ಯದ ಪ್ರಮುಖ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆಯು ಭಟ್ಕಳ, ಬೈಂದೂರು, ಶಿರೂರು, ಭಾಗಗಳಿಂದ ಬರುವ ಬೋಟುಗಳಿಗೆ ತಂಗುದಾಣವಾಗಿದೆ. ಇಲ್ಲಿ 2,200ಕ್ಕಿಂತಲೂ ಹೆಚ್ಚು ಬೋಟುಗಳಿದ್ದು, ಕೋಟ್ಯಂತರ ರೂ. ವ್ಯವಹಾರ ನಡೆಯುತ್ತಿದೆ.
ಮೇ ಅಂತ್ಯಕ್ಕೆ ಪೂರ್ಣ
ಬಂದರಿನ ಹೂಳೆತ್ತುವುದು ಮೀನುಗಾರರ ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಸರಕಾರದ ಮೇಲೆ ಒತ್ತಡ ಹೇರಿದ್ದರಿಂದ ಕೆಲಸ ಆರಂಭವಾಗಿದೆ. ಮೇ ಅಂತ್ಯದಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಮೀನುಗಾರಿಕೆ ಇಲಾಖೆಯಿಂದ 3 ಕೋ.ರೂ. ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಮಗ್ರ ಡ್ರೆಜ್ಜಿಂಗ್ ನಡೆಯಲಿದೆ. ಈಗಾಗಲೇ ಶೇ. 20 ಕೆಲಸ ಆಗಿದೆ. ಮಳೆ ಆರಂಭಗೊಳ್ಳುವ ಮೊದಲು ಕೆಲಸವನ್ನು ಪೂರ್ಣಗೊಳಿಸಲಿದ್ದೇವೆ.
– ಕೆ. ಕುಮಾರಸ್ವಾಮಿ, ಉಪ ನಿರ್ದೇಶಕರು, ಮೀನುಗಾರಿಕೆ ಬಂದರು ಯೋಜನೆ, ಮಲ್ಪೆ
– ನಟರಾಜ್ ಮಲ್ಪೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.