ಮುಂಬೈ ಇಂಡಿಯನ್ಸ್‌ಗೆ ಮೊದಲ ಸೋಲು: ಯುಪಿ ವಾರಿಯರ್ ಹಾದಿ ಸುಗಮ


Team Udayavani, Mar 19, 2023, 5:25 AM IST

MUMBAI WPL

ಮುಂಬೈ: ಮುಂಬೈ ಇಂಡಿಯನ್ಸ್‌ಗೆ ವನಿತಾ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಸಲ ಸೋಲಿನ ಬಿಸಿ ಮುಟ್ಟಿದೆ. ಹರ್ಮನ್‌ಪ್ರೀತ್‌ ಕೌರ್‌ ಪಡೆಯನ್ನು ಕೆಡವಿದ ತಂಡ ಯುಪಿ ವಾರಿಯರ್. ಶನಿವಾರದ ಮೊದಲ ಮುಖಾಮುಖೀಯಲ್ಲಿ ಯುಪಿ 5 ವಿಕೆಟ್‌ಗಳ ಜಯ ಸಾಧಿಸಿ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬೈ ಸರಿಯಾಗಿ 20 ಓವರ್‌ಗಳಲ್ಲಿ 127ಕ್ಕೆ ಆಲೌಟ್‌ ಆಯಿತು. ಆರಂಭಿಕ ಆಟಗಾರ್ತಿ ಮ್ಯಾಥ್ಯೂಸ್‌ 35, ಇಸ್ಸಿ ವಾಂಗ್‌ 32 ಮತ್ತು ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಅವರು 25 ರನ್‌ ಗಳಿಸಿದರು. ಈ ಮೂವರನ್ನು ಬಿಟ್ಟರೆ ಬೇರಾವ ಬ್ಯಾಟಿಗರು ಎರಡಂಕಿ ದಾಟಲಿಲ್ಲ. ಹೀಗಾಗಿ ಮುಂಬೈ ಅಳೆದು ತೂಗಿ ಎಲ್ಲ ವಿಕೆಟ್‌ ಕಳೆದುಕೊಂಡು 127 ರನ್‌ ಗಳಿಸಲಷ್ಟೇ ಶಕ್ತವಾಯಿತು. ಯುಪಿ ಪರ ಸೋಫಿ 3, ರಾಜೇಶ್ವರಿ ಗಾಯಕ್ವಾಡ್‌ ಮತ್ತು ದೀಪ್ತಿ ಶರ್ಮ ತಲಾ 2 ವಿಕೆಟ್‌ ಪಡೆದು ಮಿಂಚಿದರು.

ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್‌ 19.3 ಓವರ್ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 129 ರನ್‌ ಬಾರಿಸಿತು. ಹಾಗಂತ ಯುಪಿ ವಾರಿಯರ್ಸ್‌ ಆರಂಭ ಕೂಡ ಚೆನ್ನಾಗಿರಲಿಲ್ಲ. ಕೇವಲ 1 ರನ್‌ಗೆ ಮೊದ ಲನೇ ವಿಕೆಟ್‌, 21 ರನ್‌ಗೆ 2ನೇ ವಿಕೆಟ್‌ ಹೋಯಿತು. ಆದರೂ ಗ್ರೇಸ್‌ ಹ್ಯಾರೀಸ್‌ ಮತ್ತು ಮೆಕ್‌ ಗ್ರಾತ್‌ ಕ್ರಮ ವಾಗಿ 39 ಮತ್ತು 38 ರನ್‌ ಗಳಿಸಿ ಗೆಲುವಿನಲ್ಲಿ ನೆರವಾದರು. ಆ್ಯಮೆಲಿಯಾ ಕೇರ್‌ 2 ವಿಕೆಟ್‌ ಗಳಿಸಿದರು.

ಇದರೊಂದಿಗೆ ಈ ಪಂದ್ಯಾವಳಿಯಲ್ಲಿ ಮುಂಬೈಯನ್ನು ಮೊದಲ ಸಲ ಆಲೌಟ್‌ ಮಾಡಿದ ಹಾಗೂ ಮುಂಬೈಯನ್ನು ಮೊದಲ ಸಲ ಸೋಲಿಸಿದ ಹಿರಿಮೆ ಯುಪಿ ತಂಡದ್ದಾಯಿತು. ಇದು 6 ಪಂದ್ಯಗಳಲ್ಲಿ ಯುಪಿ ಸಾಧಿಸಿದ 3ನೇ ಜಯ. 6 ಅಂಕ ಹೊಂದಿರುವ ಅಲಿಸ್ಸಾ ಹೀಲಿ ಬಳಗವೀಗ 3ನೇ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
ಸಂಕ್ಷಿಪ್ತ ಸ್ಕೋರ್‌
ಮುಂಬೈ – 127/10. 20 ಓವರ್‌. ಮ್ಯಾಥ್ಯೂಸ್‌ 35, ಇಸ್ಸಿ ವಾಂಗ್‌ 32, ಹರ್ಮನ್‌ ಕೌರ್‌ 25, ಸೋಫಿ 15/3. ಯುಪಿ ವಾರಿಯರ್ಸ್‌ – 129/5. 19.3 ಓವರ್‌. ಗ್ರೇಸ್‌ ಹ್ಯಾರೀಸ್‌ 39, ಮೆಕ್‌ ಗ್ರಾತ್‌ 38.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

1-jayasuriya

Sri Lanka Team; ಭಾರತ ಕ್ರಿಕೆಟ್‌ ಸರಣಿಗೆ ಜಯಸೂರ್ಯ ಕೋಚ್‌

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.