ಯುಗಾದಿ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಂ.ಬಿ.ಪಾಟೀಲ

ಸಿದ್ದರಾಮಯ್ಯ ಎಲ್ಲಿಂದಲೇ ಸ್ಪರ್ಧಿಸಿದರೂ 50 ಸಾವಿರ ಅಂತರದಿಂದ ಗೆಲ್ತಾರೆ

Team Udayavani, Mar 19, 2023, 9:40 PM IST

ಯುಗಾದಿ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಂ.ಬಿ.ಪಾಟೀಲ

ವಿಜಯಪುರ: ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲುತ್ತಾರೆ ಎಂದಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಯುಗಾದಿ ಬಳಿಕ ಕಾಂಗ್ರೆಸ್ ಸ್ಪರ್ಧಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾದಾಮಿ, ಕೊಲ್ಹಾರ, ವರುಣಾ ಎಲ್ಲಿಯತೇ ಸ್ಪರ್ಧಿಸಿದರೂ ಅವರು ಗೆಲ್ಲುತ್ತಾರೆ. ನನ್ನ ಕ್ಷೇತ್ರದಲ್ಲಿ ಅವರು ಪ್ರಚಾರ ಮಾಡಿದರೆ 10 ಸಾವಿರ ಮತಗಳು ಹೆಚ್ಚು ಬರುತ್ತವೆ. ಅವರನ್ನು ಪ್ರಚಾರಕ್ಕೆ ಹೆಚ್ಚು ಬಳಸಿಕೊಳ್ಳು ರಾಹುಲ್ ಗಾಂಧಿ ಅವರು ಹೇಳಿರಬಹುದು ಎಂದು ಹೇಳಿದರು.
ಸಿದ್ದರಾಮಯ್ಯ ಸ್ಪರ್ಧೆಯಿಂದ ಸುತ್ತಲಿನ ನೂರಾರು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿಗೆ ಪ್ರಭಾವ ಬೀರಲಿದೆ. ಸಿದ್ಧರಾಮಯ್ಯ ಅವರಿಗೆ ಅಂತಹ ಶಕ್ತಿ ಇದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.

ಸಿದ್ಧರಾಮಯ್ಯ ಅವರ ಸ್ಪರ್ಧೆಯಿಂದ ಸುತ್ತಲಿನ ಇತರೆ ಕ್ಷೇತ್ರಗಳ ಅಭ್ಯರ್ಥಿಗಳನ್ನೂ ತಮ್ಮ ವರ್ಚಸ್ಸಿನಿಂದ ಗೆಲ್ಲಸಿಕೊಂಡು ಬರುವ ಶಕ್ತಿ ಇದೆ. ಹೀಗಾಗಿ ಕ್ಷೇತ್ರ ಆಯ್ಕೆಯ ವಿಷಯದಲ್ಲಿ ಏನು ಚರ್ಚೆ ಆಗಿದೆ ನನಗೆ ಗೊತ್ತಿಲ್ಲ ಎಂದರು.

ವರುಣಾದಿಂದ ಸ್ಪರ್ಧೆ ಮಾಡಿದರೆ ವ್ಯಾಪಕವಾಗಿ ಪ್ರಚಾರ ಮಾಡಲು ಆಗಬಹುದೆಂದು ರಾಹುಲ್ ಗಾಂಧಿ ಹೇಳಿರಬಹುದು. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದರೆ ಹೊಸ ಕ್ಷೇತ್ರವಾಗಲಿರುವ ಕಾರಣ ಸ್ಥಳೀಯವಾಗಿ ಹೊಂದಿಕೊಳ್ಲು ಸಮಯ ಬೇಕಾದೀತು ಎಂಬ ಕಾರಣಕ್ಕೆ ಇಂಥ ಚಿಂತನೆ ನಡೆದಿರಬೇಕು ಎಂದರು.

ಮಾಜಿ ಸಚಿವ ಎಸ್.ಆರ್.ಪಾಟೀಲ ಅವರು ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂಬ ವಿಷಯ ನನಗಂತೂ ಗೊತ್ತಿಲ್ಲ. ಯಾರೂ ಈ ವಿಷಯವಾಗಿ ನನ್ನೊಂದಿಗೆ ಚರ್ಚಿಸಿಲ್ಲ. ಹೀಗಾಗಿ ಈಗಾಗಲೇ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು ವಿರೋಧ ಮಾಡಿರುವ ವಿಷಯವೂ ನನಗೆ ತಿಳಿದಿಲ್ಲ. ಈ ಕುರಿತು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದರು.

ನನ್ನ ಹಾಗೂ ನನ್ನ ಕುಟುಂಬ ಸದಸ್ಯರ ಹಾಗೂ ಆಪ್ತ ಸಹಾಯಕರ ಫೋನ್ ಕಾಲ್ ಡಿಟೇಲ್ಸ್ ಸಂಗ್ರಹ ಮಾಡಲಾಗುತ್ತಿದೆ. ಅನುಮಾನವಲ್ಲ, ಅಧಿಕೃತ ಮಾಹಿತಿ ಆಧಾರದಲ್ಲಿ ಪೆÇಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.

ನನ್ನ ಮೊಬೈಲ್ ಕರೆಗಳ ಟ್ಯಾಪ್ ಆಗಿಲ್ಲ, ಆದರೆ ಸಿಡಿಆರ್ ಆಗಿದೆ. ಈ ಕುರಿತು ನಿಖರ ಮಾಹಿತಿ ಪಡೆದೇ ನಾನು ಪೊಲೀಸ್ ಡಿಜಿಪಿ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಯಾವುದೇ ವ್ಯಕ್ತಿಯ ಮೊಬೈಲ್ ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಇಂಥ ಕೃತ್ಯ ನಡೆದಲ್ಲಿ ಸರ್ಕಾರವೇ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಕೆಲವರು ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ಅನ್ಯರ ಸಿಡಿಆರ್ ತೆಗೆಯುವ ಚಾಳಿ ಇದೆ. ಆದರೆ, ಯಾರ ಹೆಸರು ಹೇಳೋದಿಲ್ಲ. ಕೆಲವು ಪೊಲೀಸರು ಕೂಡ ಹಣದ ಆಸೆಗಾಗಿ ಅಕ್ಮರವಾಗಿ ಇಂಥ ಕೆಲಸ ಮಾಡುತ್ತಾರೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಆಜಾನ್; ಯುವಕನ ಮೇಲೆ ಕೇಸ್, ಎಚ್ಚರಿಕೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.