![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 19, 2023, 8:51 PM IST
ವಾಡಿ: ”ಎದುರಾಳಿಗಳ ಟೀಕೆಗಳನ್ನು ಜೀರ್ಣಿಸಿಕೊಳ್ಳದ ಹೇಡಿ ರಾಜಕಾರಣಿ ಚಿತ್ತಾಪುರದಲ್ಲಿದ್ದಾರೆ” ಎಂದು ಶ್ರೀ ರಾಮ ಸೇನೆಯ ರಾಜ್ಯಾಧ್ಯಕ್ಷ ಶ್ರೀ ಆಂದೋಲಾ ಸ್ವಾಮೀಜಿ ಪರೋಕ್ಷವಾಗಿ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.
ರವಿವಾರ ಚಿತ್ತಾಪುರ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ದಿ.ವಾಲ್ಮೀಕಿ ನಾಯಕ ಅವರ ಎರಡನೇ ಪುಣ್ಯಸ್ಮರಣೆಯ ಬಹಿರಂಗ ಸಭೆಯ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಚಿತ್ತಾಪುರ ತಾಲೂಕಿನಲ್ಲಿ ಹಿಂದೂ ಯುವಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳನ್ನು ಪ್ರಶ್ನಿಸಿ ಹೋರಾಟ ಮಾಡಲು ಮುಂದಾದ ನನ್ನ ಮಾತುಗಳಿಗೆ ನ್ಯಾಯಾಲಯದಿಂದ ನಿರ್ಬಂಧ ಹೇರಿದ್ದಾರೆ. ನನ್ನ ವಾಕ್ ಸ್ವಾತಂತ್ರ್ಯವನ್ನು ಚಿತ್ತಾಪುರದ ರಾಜಕಾರಣಿ ಕಿತ್ತುಕೊಂಡಿದ್ದಾರೆ. ಮಾ.27 ರಂದು ನನ್ನ ತಡೆಯಾಜ್ಞೆ ಕೊನೆಯಾಗುತ್ತದೆ. ಪುನಃ ಚಿತ್ತಾಪುರಕ್ಕೆ ಬಂದು ಘರ್ಜಿಸುತ್ತೇನೆ. ಐವತ್ತು ಸಾವಿರ ಕೋಟಿ ಒಡೆಯನನ್ನು ಸೋಲಿಸಿ ಬಿಜೆಪಿಯ ವಿಜಯ ಪತಾಕೆ ಹಾರಿಸೋಣ ಎಂದರು.
ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಬಿ.ಜಿ.ಪಾಟೀಲ, ಅಮರನಾಥ ಪಾಟೀಲ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ, ವಿಟ್ಠಲ ವಾಲ್ಮೀಕಿ ನಾಯಕ ಸೇರಿದಂತೆ ತಾಲೂಕಿನ ವಿವಿಧ ಮಾಠಾಧೀಶರು ಹಾಗೂ ಸಾವಿರಾರು ಜನ ದಿ.ವಾಲ್ಮೀಕಿ ನಾಯಕ ಅಭಿಮಾನಿಗಳು ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.