ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ

ಸಂಸದ ತೇಜಸ್ವಿಸೂರ್ಯ ಅವರಿಂದ ಭರ್ಜರಿ ರೋಡ್ ಶೋ...

Team Udayavani, Mar 20, 2023, 9:20 PM IST

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ…ಯುವಶಕ್ತಿ ಸಮಾಗಮ

ಮಹಾಲಿಂಗಪುರ : ಸೋಮವಾರ ಸಂಜೆ ಪಟ್ಟಣದಲ್ಲಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಜರುಗಿದ ಜಿಲ್ಲಾಮಟ್ಟದ ಬಿಜೆಪಿ ಯುವ ಸಂಕಲ್ಪ ಸಮಾವೇಶದ ಪಾದಯಾತ್ರೆ ಮತ್ತು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ ಅವರಿಂದ ಭರ್ಜರಿ ರೋಡ್‌ಶೋ ನಡೆಯಿತು.

ಸಂಪೂರ್ಣ ಕೇಸರಿಮಯ : ಬಿಜೆಪಿ ಯುವಮೊರ್ಚಾ ಯುವ ಸಂಕಲ್ಪ ಸಮಾವೇಶದ ನಿಮಿತ್ಯ ಸೋಮವಾರ ಸಂಜೆ 4 ರಿಂದ ರಾತ್ರಿ 9 ವರೆಗೆ ಮಹಾಲಿಂಗಪುರ ಪಟ್ಟಣವು ಸಂಪೂರ್ಣ ಕೇಸರಿಮಯವಾಗಿತ್ತು. ಪಟ್ಟಣದ ಎಲ್ಲಾ ರಸ್ತೆಗಳಲ್ಲಿಯೂ ಬಿಜೆಪಿ ಧ್ವಜ ಕಟ್ಟಿದ ದ್ವಿಚಕ್ರ ವಾಹನಗಳು, ಮತ್ತೊಮ್ಮೆ ಸಿದ್ದು ಸವದಿ ಎಂಬ ಹೆಸರಿನ ಟೀಶರ್ಟ ಹಾಕಿಕೊಂಡ ಯುವಕರೇ ಕಾಣಿಸುತ್ತಿದ್ದರು.

ಎರಡು ಗಂಟೆಗಳ ಕಾಲ ಪಾದಯಾತ್ರೆ : ಸಂಜೆ 5.30ಕ್ಕೆ ಪಟ್ಟಣದ ಹೆಸ್ಕಾಂ ಗಣಪತಿ ದೇವಸ್ಥಾನದಿಂದ ಪ್ರಾರಂಭವಾದ ಪಾದಯಾತ್ರೆಯು ಚನ್ನಮ್ಮ ವೃತ್ತ, ಗಾಂಧಿವೃತ್ತ, ಜವಳಿ ಬಜಾರ್, ನಡಚೌಕಿ, ವಿವೇಕ ವೃತ್ತ, ಡಬಲ್ ರಸ್ತೆ, ಬಸವ ವೃತ್ತ ಮಾರ್ಗವಾಗಿ ಕೆಎಲ್‌ಇ ಕಾಲೇಜಿನ ಆವರಣದ ಸಮಾವೇಶ ಸ್ಥಳದವರೆಗೆ ಯುವಶಕ್ತಿಯ ಬೃಹತ್ ಪಾದಯಾತ್ರೆ ಮತ್ತು ಬಿಜೆಪಿ ಮುಖಂಡರ ರೋಡ್‌ಶೋ ಸಂಜೆ 7.30 ರವರೆಗೆ ನಡೆಯಿತು.

ಯುವಕರ ಉತ್ಸಾಹ ಇಮ್ಮಡಿ : ಸಂಜೆ 5.30ರಿಂದ 7.30 ರವರೆಗೆ ನಡೆದ ಪಾದಯಾತ್ರೆಗೆ ಡಿಜೆ ಸೌಂಡ ಯುವಕರ ಉತ್ಸಾಹವನ್ನು ಇಮ್ಮಡಿಗೊಳಿಸಿತ್ತು.ಡಿಜೆ ಸೌಂಡಿನೊಂದಿಗೆ ಯುವಕರು ಬಿಜೆಪಿ ಮತ್ತು ಶಾಸಕ ಸಿದ್ದು ಸವದಿ ಪರ ಘೋಷಣೆಗಳನ್ನು ಕೂಗುತ್ತಾ ನೃತ್ಯಮಾಡಿ ಗಮನ ಸೆಳೆದರು. ಯುವ ಸಂಕಲ್ಪ ಸಮಾವೇಶದ ನಿಮಿತ್ಯ ಪಟ್ಟಣದ ಎಲ್ಲಾ ರಸ್ತೆಗಳ ವಿದ್ಯುತ್ ಕಂಬಗಳಿಗೆ ಕೇಸರಿ ಬಟ್ಟೆಯಿಂದ ಅಲಂಕಾರ ಮಾಡಲಾಗಿತ್ತು. ಮೆರವಣಿಗೆ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಅಮಿತಶಾ, ಬೊಮ್ಮಾಯಿ, ಸಿದ್ದು ಸವದಿಯವರ ಸಣ್ಣ ಸಣ್ಣ ಕಟೌಟ್ ಹೊತ್ತು ಯುವಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಪೊಲೀಸರ್ ಹರಸಾಹಸ : ಯುವಶಕ್ತಿ ಸಮಾವೇಶದ ನಿಮಿತ್ಯ ಜಿಲ್ಲೆಯ ವಿವಿಧ ಭಾಗಗಳಿಂದ ಯುವಶಕ್ತಿಯು ಅಪಾರ ಸಂಖ್ಯೆಯಲ್ಲಿ ಮಹಾಲಿಂಗಪುರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಗಣಪತಿ ದೇವಸ್ಥಾನದಿಂದ ಗಾಂಧಿವೃತ್ತ, ಬಸವ ವೃತ್ತದಿಂದ ಸಮಾವೇಶದ ಸ್ಥಳ ತಲುಪುವರೆಗೆ ಟ್ರಾಪೀಕ್ ಸಮಸ್ಯೆಯಾಗಿ, ಸುಗಮ ಸಂಚಾರಕ್ಕಾಗಿ ಪೊಲೀಸರು ಹರಸಾಹಸ ಪಡುವಂತಾಗಿತ್ತು.

ತೇರದಾಳ ಶಾಸಕ ಸಿದ್ದು ಸವದಿ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ, ರಾಜ್ಯಾಧ್ಯಕ್ಷ ಸಂದೀಪ್‌ಕುಮಾರ್, ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ, ಪುರಸಭೆ ಅಧ್ಯಕ್ಷ ಬಸವರಾಜ ಹಿಟ್ಟಿನಮಠ, ಮುಖಂಡರಾದ ಸುರೇಶ ಅಕ್ಕಿವಾಟ, ಆನಂದ ಕಂಪು, ಲಕ್ಕಪ್ಪ ಪಾಟೀಲ, ವಿದ್ಯಾಧರ ಸವದಿ, ಬಸನಗೌಡ ಪಾಟೀಲ, ಮಹಾಂತೇಶ ಹಿಟ್ಟಿನಮಠ, ಮಹಾಲಿಂಗ ಕುಳ್ಳೋಳ್ಳಿ, ಮನೋಹರ ಶಿರೋಳ, ಈರಪ್ಪ ದಿನ್ನಿಮನಿ, ಪ್ರಕಾಶ ಅರಳಿಕಟ್ಟಿ ಸೇರಿದಂತೆ ಬಿಜೆಪಿ ಹಲವು ಮುಖಂಡರು, ಬಿಜೆಪಿ ಯುವ ಮೋರ್ಚಾ ರಾಜ್ಯ, ಜಿಲ್ಲಾ ಘಟಕದ ಪದಾಧಿಕಾರಿಗಳು ಪಾದಯಾತ್ರೆ, ಬೃಹತ್ ರೋಡ್‌ಶೋದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.