ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ

ರಾಹುಲ್ ಗಾಂಧಿ ಅನರ್ಹ.... ಹರಿಹಾಯ್ದ ವಿಪಕ್ಷ ನಾಯಕ

Team Udayavani, Mar 24, 2023, 7:32 PM IST

siddaramaiah

ಹುಬ್ಬಳ್ಳಿ: ಪಕ್ಷದ ಹೈ ಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಈಗಾಗಲೇ 20-25 ಕ್ಷೇತ್ರಗಳಿಂದ ಬೇಡಿಕೆ ಬಂದಿದೆ. ನಮ್ಮಲ್ಲಿ ಸ್ಪರ್ಧೆ ಮಾಡಿ ಅಂತೀದಾರೆ. ಎಲ್ಲ ಕಡೆ ನಿಲ್ಲಲು ಆಗಲ್ಲ. ನನಗೆ ಯಾವುದೇ ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಕ್ಷೇತ್ರಗಳು ಸಿಗುತ್ತಿಲ್ಲ ಎಂದು ಹೇಳುವ ಬಿಜೆಪಿಯವರು ಇಷ್ಟು ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರಲ್ಲ. ಜನ ಗೆಲ್ಲುವವರನ್ನು ಕರೆಯುತ್ತಾರೋ ಇಲ್ಲ ಸೋಲುವವರನ್ನೋ ಎಂದು ಕುಟುಕಿದರು.

ರಾಹುಲ್ ಗಾಂಧಿ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕರಾಳ ದಿನ. ವಿರೋಧ ಪಕ್ಷಗಳನ್ನು ಎದುರಿಸಲು ಬಿಜೆಪಿಯವರು ಮಾಡಿರುವ ಷಡ್ಯಂತ್ರ ಇದು. ಬಹಳ‌ ಜನ ದೇಶ ಕೊಳ್ಳೆ ಹೊಡೆದು, ಬ್ಯಾಂಕ್ ಲೂಟಿ ಮಾಡಿ ವಿದೇಶಕ್ಕೆ ಹೊರಟು ಹೋದರು. ಸಾರ್ವಜನಿಕರ ದುಡ್ಡು ಲೂಟಿ ಹೊಡೆದವರನ್ನು ಏನಂತ ಕರೆಯಬೇಕು? ರಾಹುಲ್ ಗಾಂಧಿ ಕರೆದಿದ್ದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವತಂತ್ರ ಇಲ್ವಾ? ಸತ್ಯ ಹೇಳಬೇಕಾದ ಅಗತ್ಯವಿಲ್ಲಾ? ಸತ್ಯ ಹೇಳಿದರೆ ಬಿಜೆಪಿಯವರು ತಡೆದುಕೊಳ್ಳಲ್ಲ ಎಂದರು.

ರಾಹುಲ್‌ ಗಾಂಧಿಯವರನ್ನು ಸಂಸದ ಸದಸ್ಯತ್ವದಿಂದ ಅನರ್ಹಗೊಳಿಸಿದ್ದು ನೀಚ ಮತ್ತು ಹೇಡಿತನದ ಕೆಲಸ. ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಶಿಕ್ಷೆ ಆಗಿರುವ ನಿದರ್ಶನ ಇದ್ದಾವಾ? ಶಿಕ್ಷೆ‌ ಕೊಟ್ಟಿರುವ ಕೋರ್ಟು, ಜಾಮೀನು ಸಹ ಕೊಟ್ಟಿದೆ. ಸಾರ್ವಜನಿಕ ಹಣ ಲೂಟಿ ಹೊಡೆದವರನ್ನು ಬಿಜೆಪಿಯವರು ರಕ್ಷಣೆ ಮಾಡುತ್ತಾರೆ. ಸತ್ಯ ಮಾತನಾಡಿದವರಿಗೆ ಶಿಕ್ಷೆ ಕೊಡುತ್ತಾರೆ ಅಂದರೆ ಯಾವ ನ್ಯಾಯ. ಲೂಟಿ ಮಾಡಿದವರನ್ನ ಬಿಟ್ಟು ಸತ್ಯ ಹೇಳಿದವರಿಗೆ ಶಿಕ್ಷೆ ಕೊಟ್ಟ ಇದನ್ನು ಬ್ಲಾಕ್ ಡೇ ಅಂತ ಕರೆಯಬೇಕು ಎಂದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.