ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ


Team Udayavani, Mar 26, 2023, 12:32 PM IST

ಸಿದ್ದರಾಮಯ್ಯ ಪುಕ್ಕಲುತನದಿಂದ ವರುಣಾಗೆ ಬರುತ್ತಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್ ಪ್ರಶ್ನಾತೀತ ನಾಯಕ ನಾನೇ, ಮುಂದಿನ ಸಿಎಂ ನಾನೇ ಎನ್ನುವ ಸಿದ್ದರಾಮಯ್ಯಗೆ ಒಂದು ಕ್ಷೇತ್ರ ಹುಡುಕಿ ಕೊಳ್ಳಲಾಗಲಿಲ್ಲ. ಊರಿಗೊಬ್ಳೇ ನಾನೇ ಪದ್ಮಾವತಿ ಅಂತಾ ಸಿದ್ದರಾಮಯ್ಯ ಓಡಾಡುತ್ತಿದ್ದರು. ಈಗ ಕೊನೆಗೆ ಹಳೆ ಗಂಡನ ಪಾದವೇ ಗತಿ ಅಂತಾ ವರುಣಾಗೆ ಬಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ನೆಲೆ ಕಳೆದು ವರುಣಾಗೆ ಬರುವ ಸ್ಥಿತಿ ಸಿದ್ದರಾಮಯ್ಯಗೆ ಬಂತು. ಸಿದ್ದರಾಮಯ್ಯ ಪುಕ್ಕಲತನದಿಂದ ವರುಣಾಗೆ ಬರುತ್ತಿದ್ದಾರೆ. ಕಳೆದ ಬಾರಿ ಸಣ್ಣ ಅಂತರದಿಂದ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದರು. ಸಿದ್ದರಾಮಯ್ಯ ಈ ಬಾರಿ ಎಲ್ಲೇ ನಿಂತರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧಿಸುತ್ತೇನೆಂದು ಸಿದ್ದರಾಮಯ್ಯ ಹೇಳುತ್ತಾರೆ. ಕ್ಷೇತ್ರ ಕೊಡಲು ಹೈಕಮಾಂಡ್ ರೆಡಿ ಇಲ್ಲವೆಂದ ಮೇಲೆ ಯಾವ ಧೈರ್ಯದ ಮೇಲೆ ಮುಂದಿನ ಸಿಎಂ ನಾನೇ ಎನ್ನುತ್ತಾರೆ? ಟಿಕೆಟ್ ಕೊಡದೆ ಇದ್ದ ಪಕ್ಷ ಅವರಿಗೆ ಸಿಎಂ ಸ್ಥಾನ ಕೊಡುತ್ತಾ? 2018 ರಲ್ಲೇ ಸಿದ್ದರಾಮಯ್ಯ ರಾಜಕೀಯ ಮುಗಿದು ಹೋಗಿದೆ ಎಂದರು.

ವಿಧಾನಸಭೆಗೆ ಪ್ರತಾಪ್ ಸಿಂಹ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2029 ರವರೆಗೂ ಮೋದಿ ಅವರ ಆಡಳಿತದಲ್ಲಿ ಸಂಸದನಾಗಿ ಕೆಲಸ ಮಾಡುತ್ತೇನೆ. ಎಂಟು ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸದನ ಸ್ಥಾನ ಬಿಟ್ಟು ಒಂದು ವಿಧಾನಸಭಾ ಕ್ಷೇತ್ರ ಹುಡುಕಿಕೊಳ್ಳುವಷ್ಟು ದಡ್ಡನಾನಲ್ಲ ಎಂದರು.

ಸಂಘ ಪರಿವಾರದವರು ಮೀಸಲಾತಿ ತೆಗೆದುಹಾಕುತ್ತಾರೆ ಎಂದು ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದರು. ಬಿಜೆಪಿ ಹಿಂದುಳಿದ ಜಾತಿ ಜನಾಂಗದ ಪರವಾಗಿದ್ದೇವೆ. ನಾವು ಕೇವಲ ಭಾಷಣ ಮಾಡುವುದಲ್ಲ. ಎಲ್ಲಾ ಸಮುದಾಯದ ಬೇಡಿಕೆಗಳನ್ನು ಸ್ಪಂದಿಸುವ ಕೆಲಸ ಮಾಡಿದ್ದೇವೆ. ಎಲ್ಲಾ ಸಮುದಾಯದ ಪರವಾಗಿ ಸಿಎಂಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಎಲ್ಲಾ ಸಮಾಜಗಳಿಗೂ ನ್ಯಾಯಕೊಡುವ ಪಕ್ಷ ಬಿಜೆಪಿ. ಇದನ್ನು ಬಸವರಾಜ್ ಬೊಮ್ಮಾಯಿ ಸಾಬೀತು ಮಾಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಂರು 4% ಮೀಸಲಾತಿ ಪಡೆದುಕೊಂಡಿದ್ದರು. ಇದು ಹಿಂದುಳಿದ ವರ್ಗಕ್ಕೆ ಸಲ್ಲಬೇಕಾದ ಮೀಸಲಾತಿಯನ್ನ ಅನಧಿಕೃತವಾಗಿ ಕೊಡಲಾಗಿತ್ತು. ಇದೀಗ ನ್ಯಾಯಯುತವಾಗಿ ಮುಸ್ಲಿಂರ ಮೀಸಲಾತಿ ತೆಗೆದು ಒಕ್ಕಲಿಗೆ, ವೀರಶೈವರಿಗೆ ಮೀಸಲಾತಿ ಕಲ್ಪಿಸಲಾಗಿದೆ‌. ಬರೀ ಭಾಷಣ‌ ಮಾಡುತ್ತಿದ್ದವರಿಗೆ ಈ ಮೀಸಲಾತಿ ನಿರ್ಧಾರ ಮೂಲ‌ಕ ಅವರ ಬಾಯಿ‌ ಮುಚ್ಚಿಸಲಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.